<p><strong>ರಾಣೆಬೆನ್ನೂರು:</strong> ತಾಲ್ಲೂಕಿನಾದ್ಯಂ ಸತತ ಮಳೆಯಿಂದಾಗಿ ಇಲ್ಲಿಯವರೆಗೆ ಒಟ್ಟು 53 ಮನೆಗಳು ಭಾಗಶಃ ಕುಸಿದು ಬಿದ್ದಿವೆ.</p>.<p>‘ತುಂಗಭದ್ರಾ ಮತ್ತು ಕುಮಧ್ವತಿ ನದಿ ನೀರಿನ ಪ್ರವಾಹ ಹೆಚ್ಚಾಗಿದ್ದರಿಂದ ನದಿ ಪಾತ್ರದ ಜನರಿಗೆ ಎತ್ತರದ ಸ್ಥಳಕ್ಕೆ ಹೋಗಲು ಮತ್ತು ಜಾನುವಾರುಗಳನ್ನು ಬಿಡಬಾರದು ಎಂದು ಸೂಚಿಸಲಾಗಿದೆ. ತಾಲ್ಲೂಕಿನಲ್ಲಿ ಯಾವುದೇ ಬೆಳೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ’ ಎಂದು ತಹಶೀಲ್ದಾರ್ ಗುರುಬಸವಾಜ ತಿಳಿಸಿದರು.</p>.<p>ತಾಲ್ಲೂಕಿನ ಕಜ್ಜರಿ ಗ್ರಾಮದ ಹನುಮಂತಪ್ಪ ನೇಮಪ್ಪ ಲಮಾಣಿ ಎಂಬುವವರ ನೆಲ ಮಹಡಿಯ ಗೋಡೆ ಏಕಾಏಕಿ ಗುರುವಾರ ಕುಸಿದು ಬಿದ್ದಿದೆ. ಗೋಡೆ ಕುಸಿತದಿಂದ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಮನೆಯಲ್ಲಿನ ಪಾತ್ರೆಗಳು ನಜ್ಜುಗುಜ್ಜಾಗಿವೆ.</p>.<p>ಗೋಡೆ ಬಿದ್ದ ಶಬ್ದ ಕೇಳಿದ ಕೂಡಲೇ ಸುತ್ತಮುತ್ತಲಿನ ಜನ ಬಂದು ಅಂಗವಿಕಲ ಹನುಮಂತಪ್ಪ ಲಮಾಣಿ ಹಾಗೂ ಕುಟುಂಬದವರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಪಕ್ಕದ ಮನೆಯವರು ಹನುಮಂತಪ್ಪ ಕುಟುಂಬದ ವಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.</p>.<p>‘ನಾನು ಅಂಗವಿಕಲನಾಗಿದ್ದು ಸರ್ಕಾರದಿಂದ ಬರುವ ಮಾಶಾಸನ ಮತ್ತು ಪತ್ನಿಯ ಕೂಲಿ ಕೆಲದಿಂದ ಬಂದ ಹಣದಿಂದ ಇಬ್ಬರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದೇವೆ. ಸರ್ಕಾರ ಕೂಡಲೇ ಆರ್ಥಿಕ ನೆರವು ನೀಡಿ ಮನೆ ಕಟ್ಟಿಕೊಳ್ಳಲು ಸಹಾಯ ಮಾಡಬೇಕು’ ಎಂದು ಹನುಮಂತಪ್ಪ ನೇಮಪ್ಪ ಲಮಾಣಿ ಒತ್ತಾಯಿಸಿದ್ದಾರೆ.</p>.<p>‘ತುಂಗಭದ್ರಾ ಮತ್ತು ಕುಮಧ್ವತಿ ನದಿ ಪ್ರವಾಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲ ಗ್ರಾಮಗಳ ಸಮೀಪದ ಹೊಲಗಳಿಗೆ ನೀರು ನುಗ್ಗಿದೆ. ಬೆಳೆ ಹಾನಿಯಾದ ಬಗ್ಗೆ ಯಾವುದೇ ವರದಿಯಾಗಿಲ್ಲ’ ಎಂದು ಕೃಷಿ ಸಹಾಯಕ ನಿರ್ದೇಶಕಿ ಶಾಂತಮಣಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ತಾಲ್ಲೂಕಿನಾದ್ಯಂ ಸತತ ಮಳೆಯಿಂದಾಗಿ ಇಲ್ಲಿಯವರೆಗೆ ಒಟ್ಟು 53 ಮನೆಗಳು ಭಾಗಶಃ ಕುಸಿದು ಬಿದ್ದಿವೆ.</p>.<p>‘ತುಂಗಭದ್ರಾ ಮತ್ತು ಕುಮಧ್ವತಿ ನದಿ ನೀರಿನ ಪ್ರವಾಹ ಹೆಚ್ಚಾಗಿದ್ದರಿಂದ ನದಿ ಪಾತ್ರದ ಜನರಿಗೆ ಎತ್ತರದ ಸ್ಥಳಕ್ಕೆ ಹೋಗಲು ಮತ್ತು ಜಾನುವಾರುಗಳನ್ನು ಬಿಡಬಾರದು ಎಂದು ಸೂಚಿಸಲಾಗಿದೆ. ತಾಲ್ಲೂಕಿನಲ್ಲಿ ಯಾವುದೇ ಬೆಳೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ’ ಎಂದು ತಹಶೀಲ್ದಾರ್ ಗುರುಬಸವಾಜ ತಿಳಿಸಿದರು.</p>.<p>ತಾಲ್ಲೂಕಿನ ಕಜ್ಜರಿ ಗ್ರಾಮದ ಹನುಮಂತಪ್ಪ ನೇಮಪ್ಪ ಲಮಾಣಿ ಎಂಬುವವರ ನೆಲ ಮಹಡಿಯ ಗೋಡೆ ಏಕಾಏಕಿ ಗುರುವಾರ ಕುಸಿದು ಬಿದ್ದಿದೆ. ಗೋಡೆ ಕುಸಿತದಿಂದ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಡುಗೆ ಮನೆಯಲ್ಲಿನ ಪಾತ್ರೆಗಳು ನಜ್ಜುಗುಜ್ಜಾಗಿವೆ.</p>.<p>ಗೋಡೆ ಬಿದ್ದ ಶಬ್ದ ಕೇಳಿದ ಕೂಡಲೇ ಸುತ್ತಮುತ್ತಲಿನ ಜನ ಬಂದು ಅಂಗವಿಕಲ ಹನುಮಂತಪ್ಪ ಲಮಾಣಿ ಹಾಗೂ ಕುಟುಂಬದವರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಪಕ್ಕದ ಮನೆಯವರು ಹನುಮಂತಪ್ಪ ಕುಟುಂಬದ ವಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.</p>.<p>‘ನಾನು ಅಂಗವಿಕಲನಾಗಿದ್ದು ಸರ್ಕಾರದಿಂದ ಬರುವ ಮಾಶಾಸನ ಮತ್ತು ಪತ್ನಿಯ ಕೂಲಿ ಕೆಲದಿಂದ ಬಂದ ಹಣದಿಂದ ಇಬ್ಬರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದೇವೆ. ಸರ್ಕಾರ ಕೂಡಲೇ ಆರ್ಥಿಕ ನೆರವು ನೀಡಿ ಮನೆ ಕಟ್ಟಿಕೊಳ್ಳಲು ಸಹಾಯ ಮಾಡಬೇಕು’ ಎಂದು ಹನುಮಂತಪ್ಪ ನೇಮಪ್ಪ ಲಮಾಣಿ ಒತ್ತಾಯಿಸಿದ್ದಾರೆ.</p>.<p>‘ತುಂಗಭದ್ರಾ ಮತ್ತು ಕುಮಧ್ವತಿ ನದಿ ಪ್ರವಾಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲ ಗ್ರಾಮಗಳ ಸಮೀಪದ ಹೊಲಗಳಿಗೆ ನೀರು ನುಗ್ಗಿದೆ. ಬೆಳೆ ಹಾನಿಯಾದ ಬಗ್ಗೆ ಯಾವುದೇ ವರದಿಯಾಗಿಲ್ಲ’ ಎಂದು ಕೃಷಿ ಸಹಾಯಕ ನಿರ್ದೇಶಕಿ ಶಾಂತಮಣಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>