ಸದ್ಯ ಜಿಲ್ಲಾಧಿಕಾರಿ ಆಗಿದ್ದ ರಘುನಂದನಮೂರ್ತಿ ಅವರನ್ನು ಬೆಂಗಳೂರು ಖಜಾನೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ನಿರ್ದೇಶಕರಾಗಿದ್ದ ವಿಜಯಮಹಾಂತೇಶ ಅವರನ್ನು ಹಾವೇರಿ ಜಿಲ್ಲಾಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ.
ನೂತನ ಜಿಲ್ಲಾಧಿಕಾರಿ ಅವರು ಶುಕ್ರವಾರವೇ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
ವಿಜಯಮಹಾಂತೇಶ ಅವರು ಈ ಹಿಂದೆ ವಿಜಯಪುರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು.