<p><strong>ಹಿರೇಕೆರೂರು</strong>: ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಪ.ಪಂ ಸದಸ್ಯೆ ವಿಜಯಶ್ರೀ ಬಂಗೇರ ಅವಿರೋಧವಾಗಿ ಆಯ್ಕೆಯಾದರು.</p>.<p>ಕುಸುಮಾ ಬಣಕಾರ ಅವರ ರಾಜೀನಾಮೆಯಿಂದ ಉಪಾಧ್ಯಕ್ಷ ಸ್ಥಾನ ತೆರವುಗೊಂಡಿತ್ತು. ಗುರುವಾರ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಶ್ರೀ ಬಂಗೇರ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ವಿಜಯಶ್ರೀ ಬಂಗೇರ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.</p>.<p>ನೂತನ ಉಪಾಧ್ಯಕ್ಷರಿಗೆ ಪ.ಪಂ. ಸದಸ್ಯರು ಹಾಗೂ ಸಿಬ್ಬಂದಿ ಶುಭ ಕೋರಿದರು. ನೂತನ ಉಪಾಧ್ಯಕ್ಷೆ ವಿಜಯಶ್ರೀ ಬಂಗೇರ ಚುನಾವಣೆಯಲ್ಲಿ ಸಹಕರಿಸಿದ ಪ.ಪಂ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.</p>.<p>ಪ.ಪಂ ಮುಖ್ಯಾಧಿಕಾರಿ ಸಂತೋಷ ಚಂದ್ರಿಕೇರ, ಕಂದಾಯ ನಿರೀಕ್ಷಕ ನಟರಾಜ, ಪ.ಪಂ. ಅಧ್ಯಕ್ಷ ಕಂಠಾಧರ ಅಂಗಡಿ, ಮಾಜಿ ಉಪಾಧ್ಯಕ್ಷೆ ಕುಸುಮಾ ಬಣಕಾರ ಹಾಗೂ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರು</strong>: ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಪ.ಪಂ ಸದಸ್ಯೆ ವಿಜಯಶ್ರೀ ಬಂಗೇರ ಅವಿರೋಧವಾಗಿ ಆಯ್ಕೆಯಾದರು.</p>.<p>ಕುಸುಮಾ ಬಣಕಾರ ಅವರ ರಾಜೀನಾಮೆಯಿಂದ ಉಪಾಧ್ಯಕ್ಷ ಸ್ಥಾನ ತೆರವುಗೊಂಡಿತ್ತು. ಗುರುವಾರ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಶ್ರೀ ಬಂಗೇರ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ವಿಜಯಶ್ರೀ ಬಂಗೇರ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.</p>.<p>ನೂತನ ಉಪಾಧ್ಯಕ್ಷರಿಗೆ ಪ.ಪಂ. ಸದಸ್ಯರು ಹಾಗೂ ಸಿಬ್ಬಂದಿ ಶುಭ ಕೋರಿದರು. ನೂತನ ಉಪಾಧ್ಯಕ್ಷೆ ವಿಜಯಶ್ರೀ ಬಂಗೇರ ಚುನಾವಣೆಯಲ್ಲಿ ಸಹಕರಿಸಿದ ಪ.ಪಂ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.</p>.<p>ಪ.ಪಂ ಮುಖ್ಯಾಧಿಕಾರಿ ಸಂತೋಷ ಚಂದ್ರಿಕೇರ, ಕಂದಾಯ ನಿರೀಕ್ಷಕ ನಟರಾಜ, ಪ.ಪಂ. ಅಧ್ಯಕ್ಷ ಕಂಠಾಧರ ಅಂಗಡಿ, ಮಾಜಿ ಉಪಾಧ್ಯಕ್ಷೆ ಕುಸುಮಾ ಬಣಕಾರ ಹಾಗೂ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>