<p><strong>ಹಾವೇರಿ:</strong> ‘ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗಿಂತ ಹಿರಿಯರಿದ್ದಾರೆ. ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ಪ್ರಮುಖರಾಗಿದ್ದಾರೆ. ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ’ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.</p><p>ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾವೇರಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಾಗಿರಲಿಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ಏನೇನು ಆಗಿದೆ ಅದೆಲ್ಲವೂ ಈಶ್ವರಪ್ಪನವರಿಗೆ ಗೊತ್ತಿದೆ. ನನ್ನ ಹೆಸರು ಇರಲಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಅಮಿತ್ ಶಾ ಅವರೇ ನೀನು ಸ್ಪರ್ಧಿಸುವ ಅನಿವಾರ್ಯತೆಯಿದೆ ಎಂದು ಹೇಳಿದರು ಎಂದರು. </p><p>ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಈಶ್ವರಪ್ಪ ಅವರು ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಾಗಿದ್ದಾರೆ. ಆದರೆ, ಅದು ವರಿಷ್ಠರ ತೀರ್ಮಾನ. ಪಕ್ಷ ಅವರಿಗೆ ಮೋಸ ಮಾಡುವುದಿಲ್ಲ ಎಂದು ತಿಳಿಸಿದರು.</p>.<p><strong>ಭಾವಾನಾತ್ಮಕ ನಂಟು</strong></p><p>ಶಿಗ್ಗಾವಿಯೊಂದಿಗೆ ನನಗೆ ಭಾವನಾತ್ಮಕ ಸಂಬಂಧವಿದೆ. ಎಲ್ಲಾ ತಾಲ್ಲೂಕುಗಳ ಅಭಿವೃದ್ಧಿ ಜತೆಗೆ ಶಿಗ್ಗಾವಿ ಅಭಿವೃದ್ಧಿಗೂ ಒತ್ತು ನೀಡುತ್ತೇನೆ. ಶಿಗ್ಗಾವಿ ಬೈ ಎಲೆಕ್ಷನ್ ನಡೆದರೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ನಾನಿನ್ನೂ ಸ್ಪರ್ಧೆ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕು. ಬಳಿಕ ಶಿಗ್ಗಾವಿಗೆ ಉಪಚುನಾವಣೆ ನಡೆಯಲಿದೆ. ಊಹೆ ಮಾಡಿ ಈಗಲೇ ನಾನು ಹೇಳಲು ಆಗಲ್ಲ. ಆ ಸಂದರ್ಭದಲ್ಲಿ ಜನರ ಅಭಿಪ್ರಾಯ, ಪಕ್ಷದ ಕೇಳಬೇಕು ಎಂದು ಹೇಳಿದರು.</p><p>ಮಾಜಿ ಶಾಸಕ ನೆಹರು ಓಲೇಕಾರ ಅವರ ಮನವೊಲಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಟಿಕೆಟ್ ಸಿಕ್ಕಿದ ನಂತರ ಜಿಲ್ಲೆಗೆ ಮೊದಲ ಬಾರಿಗೆ ಬಂದಿದ್ದೇನೆ. ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ, ಅಭಿಪ್ರಾಯ ತಿಳಿದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನಗೆ ಯಾರ ಬಗ್ಗೆಯೂ ದ್ವೇಷ ಇಲ್ಲ ಎಂದರು.</p><p>ಸಾಮಾನ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ನೇರ ಸ್ಪರ್ಧೆ ಇರುತ್ತದೆ. ನಾನು ಯಾವುದೇ ಸ್ಪರ್ಧಿಯನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಪ್ರತಿಸ್ಪರ್ಧಿಯನ್ನು ಗೌರವವಾಗಿ ತೆಗೆದುಕೊಳ್ಳುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗಿಂತ ಹಿರಿಯರಿದ್ದಾರೆ. ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ಪ್ರಮುಖರಾಗಿದ್ದಾರೆ. ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ’ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.</p><p>ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾವೇರಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಾಗಿರಲಿಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ಏನೇನು ಆಗಿದೆ ಅದೆಲ್ಲವೂ ಈಶ್ವರಪ್ಪನವರಿಗೆ ಗೊತ್ತಿದೆ. ನನ್ನ ಹೆಸರು ಇರಲಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಅಮಿತ್ ಶಾ ಅವರೇ ನೀನು ಸ್ಪರ್ಧಿಸುವ ಅನಿವಾರ್ಯತೆಯಿದೆ ಎಂದು ಹೇಳಿದರು ಎಂದರು. </p><p>ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಈಶ್ವರಪ್ಪ ಅವರು ಪಕ್ಷದಲ್ಲಿ ಶಿಸ್ತಿನ ಸಿಪಾಯಿಯಾಗಿದ್ದಾರೆ. ಆದರೆ, ಅದು ವರಿಷ್ಠರ ತೀರ್ಮಾನ. ಪಕ್ಷ ಅವರಿಗೆ ಮೋಸ ಮಾಡುವುದಿಲ್ಲ ಎಂದು ತಿಳಿಸಿದರು.</p>.<p><strong>ಭಾವಾನಾತ್ಮಕ ನಂಟು</strong></p><p>ಶಿಗ್ಗಾವಿಯೊಂದಿಗೆ ನನಗೆ ಭಾವನಾತ್ಮಕ ಸಂಬಂಧವಿದೆ. ಎಲ್ಲಾ ತಾಲ್ಲೂಕುಗಳ ಅಭಿವೃದ್ಧಿ ಜತೆಗೆ ಶಿಗ್ಗಾವಿ ಅಭಿವೃದ್ಧಿಗೂ ಒತ್ತು ನೀಡುತ್ತೇನೆ. ಶಿಗ್ಗಾವಿ ಬೈ ಎಲೆಕ್ಷನ್ ನಡೆದರೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ನಾನಿನ್ನೂ ಸ್ಪರ್ಧೆ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕು. ಬಳಿಕ ಶಿಗ್ಗಾವಿಗೆ ಉಪಚುನಾವಣೆ ನಡೆಯಲಿದೆ. ಊಹೆ ಮಾಡಿ ಈಗಲೇ ನಾನು ಹೇಳಲು ಆಗಲ್ಲ. ಆ ಸಂದರ್ಭದಲ್ಲಿ ಜನರ ಅಭಿಪ್ರಾಯ, ಪಕ್ಷದ ಕೇಳಬೇಕು ಎಂದು ಹೇಳಿದರು.</p><p>ಮಾಜಿ ಶಾಸಕ ನೆಹರು ಓಲೇಕಾರ ಅವರ ಮನವೊಲಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಟಿಕೆಟ್ ಸಿಕ್ಕಿದ ನಂತರ ಜಿಲ್ಲೆಗೆ ಮೊದಲ ಬಾರಿಗೆ ಬಂದಿದ್ದೇನೆ. ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ, ಅಭಿಪ್ರಾಯ ತಿಳಿದುಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನಗೆ ಯಾರ ಬಗ್ಗೆಯೂ ದ್ವೇಷ ಇಲ್ಲ ಎಂದರು.</p><p>ಸಾಮಾನ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ನೇರ ಸ್ಪರ್ಧೆ ಇರುತ್ತದೆ. ನಾನು ಯಾವುದೇ ಸ್ಪರ್ಧಿಯನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಪ್ರತಿಸ್ಪರ್ಧಿಯನ್ನು ಗೌರವವಾಗಿ ತೆಗೆದುಕೊಳ್ಳುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>