<p><strong>ಕಲಬುರಗಿ</strong>: ಸರ್ಕಾರದ ನಿಯಮ ಉಲ್ಲಂಘಿಸಿ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಸೌಲಭ್ಯ ಪಡೆದ 24,904 ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದುಪಡಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಮುನಿಯಪ್ಪ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಬಿಪಿಎಲ್ ಪಡಿತರ ರದ್ದು ಪಡಿಸಿದ್ದಲ್ಲದೆ, ₹5.09 ಲಕ್ಷ ದಂಡ ವಿಧಿಸಲಾಗಿದೆ. ಪಡಿತರ ಕಾರ್ಡ್ ಪಡೆಯಲು ಕಠಿಣ ಮಾನದಂಡಗಳನ್ನು ವಿಧಿಸಲಾಗಿದೆ. ತಪ್ಪು ಮಾಹಿತಿ ಕೊಟ್ಟು ಆದ್ಯತೆ ಮೇರೆಗೆ ಪಡಿತರ ಪಡೆದಂತಹ ಸಾವಿರಾರು ಜನರನ್ನು ಗುರುತಿಸಲಾಗಿದ್ದು, ಕಠಿಣ ಕ್ರಮದ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ’ ಎಂದಿದ್ದಾರೆ.</p>.<p>ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ 93 ನ್ಯಾಯ ಬೆಲೆ ಅಂಗಡಿಗಳಿವೆ. ನಗರ ಪ್ರದೇಶದಲ್ಲಿ 800 ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳು ಇದ್ದಲ್ಲಿ ಪ್ರತ್ಯೇಕ ನ್ಯಾಯ ಬೆಲೆ ಅಂಗಡಿ ಒದಗಿಸಬೇಕು ಎಂಬ ನಿಯಮವಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಸರ್ಕಾರದ ನಿಯಮ ಉಲ್ಲಂಘಿಸಿ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಸೌಲಭ್ಯ ಪಡೆದ 24,904 ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರದ್ದುಪಡಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಮುನಿಯಪ್ಪ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಬಿಪಿಎಲ್ ಪಡಿತರ ರದ್ದು ಪಡಿಸಿದ್ದಲ್ಲದೆ, ₹5.09 ಲಕ್ಷ ದಂಡ ವಿಧಿಸಲಾಗಿದೆ. ಪಡಿತರ ಕಾರ್ಡ್ ಪಡೆಯಲು ಕಠಿಣ ಮಾನದಂಡಗಳನ್ನು ವಿಧಿಸಲಾಗಿದೆ. ತಪ್ಪು ಮಾಹಿತಿ ಕೊಟ್ಟು ಆದ್ಯತೆ ಮೇರೆಗೆ ಪಡಿತರ ಪಡೆದಂತಹ ಸಾವಿರಾರು ಜನರನ್ನು ಗುರುತಿಸಲಾಗಿದ್ದು, ಕಠಿಣ ಕ್ರಮದ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ’ ಎಂದಿದ್ದಾರೆ.</p>.<p>ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ 93 ನ್ಯಾಯ ಬೆಲೆ ಅಂಗಡಿಗಳಿವೆ. ನಗರ ಪ್ರದೇಶದಲ್ಲಿ 800 ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳು ಇದ್ದಲ್ಲಿ ಪ್ರತ್ಯೇಕ ನ್ಯಾಯ ಬೆಲೆ ಅಂಗಡಿ ಒದಗಿಸಬೇಕು ಎಂಬ ನಿಯಮವಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>