<p><strong>ಕಲಬುರಗಿ</strong>: ‘ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ರೈಲು ಅಪಘಾತದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆಯ (ಎಐಡಿವೈಒ) ಜಿಲ್ಲಾ ಸಮಿತಿ ಅಧ್ಯಕ್ಷ ಜಗನ್ನಾಥ ಎಸ್.ಎಚ್. ಒತ್ತಾಯಿಸಿದರು.</p>.<p>ಜಿಲ್ಲೆಯ ಶಹಾಬಾದ್ ನಗರದ ರೈಲು ನಿಲ್ದಾಣದ ಎದುರು ನಡೆದ ಸಂತಾಪ ಸಭೆಯಲ್ಲಿ ಮಾತನಾಡಿದರು.</p>.<p>ಇದನ್ನು ಶತಮಾನದ ಅತ್ಯಂತ ಭೀಕರ ಅಪಘಾತ ಎಂದು ಪರಿಗಣಿಸಲಾಗಿದೆ. ರೈಲು ಹಳಿ ನಿರ್ವಹಿಸುವ ಅಧಿಕಾರಿಗಳು ಹೆಚ್ಚು ಕಾರ್ಯತತ್ಪರತೆ ಮತ್ತು ಜಾಗರೂಕತೆ ವಹಿಸಿದ್ದರೆ ಅನಾಹುತ ತಪ್ಪಿಸಬಹುದಿತ್ತು ಎಂದು ಅಭಿಪ್ರಾಯಪಟ್ಟರು.</p>.<p>ಸಾವುಗಳು ಹೆಚ್ಚಾಗುವ ನಿರೀಕ್ಷೆ ಇದೆ. ವಲಸೆ ಕಾರ್ಮಿಕರು ಮತ್ತು ಸಮಾಜದ ಬಡ ವರ್ಗದ ಪ್ರಯಾಣಿಕರು ತುಂಬಿದ ಕಾಯ್ದಿರಿಸದ ಕಂಪಾರ್ಟ್ಮೆಂಟ್ಗಳಲ್ಲಿ ಪ್ರಯಾಣಿಸುತ್ತಿದ್ದ ನೂರಾರು ಜನರು ಗುರುತಿಸಲ್ಪಟ್ಟಿಲ್ಲ ಮತ್ತು ಅವರು ಲೆಕ್ಕಕ್ಕೆ ಸಿಗುವುದಿಲ್ಲ ಎಂಬುದು ಆತಂಕಕಾರಿ ವಿಷಯವಾಗಿದೆ. ಎಐಡಿವೈಒ ಒಡಿಶಾ ಸಮಿತಿ ಸ್ಥಳದಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿದೆ ಎಂದರು.</p>.<p>ಘಟನೆ ಕುರಿತು ಉನ್ನತಮಟ್ಟದ ತನಿಖೆ ನಡೆಸಬೇಕು. ಅಪಘಾತಕ್ಕೆ ಕಾರಣರಾದವರ ಮೇಲೆ ಕ್ರಮ ಜರುಗಿಸಬೇಕು. ಮೃತರ ಕುಟುಂಬದವರಿಗೆ ಸಮರ್ಪಕ ಪರಿಹಾರ ನೀಡುವುದರ ಜತೆಗೆ ಗಾಯಾಳುಗಳಿಗೆ ಸಂಪೂರ್ಣ ಜವಾಬ್ದಾರಿಯೊಂದಿಗೆ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಾಘವೇಂದ್ರ.ಎಂ.ಜಿ, ರಾಜೇಂದ್ರ ಅತನೂರ, ರಘು ಪವಾರ್, ತೇಜಸ್ ಇಂಬ್ರಾಹಿಂಪುರ, ಆನಂದ ದಂಡಗುಲಕರ್, ಶ್ರೀನಿವಾಸ್ ದಂಡಗುಲಕರ್, ರಾಕೇಶ ಹಾಗೂ ಇತರರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ರೈಲು ಅಪಘಾತದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆಯ (ಎಐಡಿವೈಒ) ಜಿಲ್ಲಾ ಸಮಿತಿ ಅಧ್ಯಕ್ಷ ಜಗನ್ನಾಥ ಎಸ್.ಎಚ್. ಒತ್ತಾಯಿಸಿದರು.</p>.<p>ಜಿಲ್ಲೆಯ ಶಹಾಬಾದ್ ನಗರದ ರೈಲು ನಿಲ್ದಾಣದ ಎದುರು ನಡೆದ ಸಂತಾಪ ಸಭೆಯಲ್ಲಿ ಮಾತನಾಡಿದರು.</p>.<p>ಇದನ್ನು ಶತಮಾನದ ಅತ್ಯಂತ ಭೀಕರ ಅಪಘಾತ ಎಂದು ಪರಿಗಣಿಸಲಾಗಿದೆ. ರೈಲು ಹಳಿ ನಿರ್ವಹಿಸುವ ಅಧಿಕಾರಿಗಳು ಹೆಚ್ಚು ಕಾರ್ಯತತ್ಪರತೆ ಮತ್ತು ಜಾಗರೂಕತೆ ವಹಿಸಿದ್ದರೆ ಅನಾಹುತ ತಪ್ಪಿಸಬಹುದಿತ್ತು ಎಂದು ಅಭಿಪ್ರಾಯಪಟ್ಟರು.</p>.<p>ಸಾವುಗಳು ಹೆಚ್ಚಾಗುವ ನಿರೀಕ್ಷೆ ಇದೆ. ವಲಸೆ ಕಾರ್ಮಿಕರು ಮತ್ತು ಸಮಾಜದ ಬಡ ವರ್ಗದ ಪ್ರಯಾಣಿಕರು ತುಂಬಿದ ಕಾಯ್ದಿರಿಸದ ಕಂಪಾರ್ಟ್ಮೆಂಟ್ಗಳಲ್ಲಿ ಪ್ರಯಾಣಿಸುತ್ತಿದ್ದ ನೂರಾರು ಜನರು ಗುರುತಿಸಲ್ಪಟ್ಟಿಲ್ಲ ಮತ್ತು ಅವರು ಲೆಕ್ಕಕ್ಕೆ ಸಿಗುವುದಿಲ್ಲ ಎಂಬುದು ಆತಂಕಕಾರಿ ವಿಷಯವಾಗಿದೆ. ಎಐಡಿವೈಒ ಒಡಿಶಾ ಸಮಿತಿ ಸ್ಥಳದಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿದೆ ಎಂದರು.</p>.<p>ಘಟನೆ ಕುರಿತು ಉನ್ನತಮಟ್ಟದ ತನಿಖೆ ನಡೆಸಬೇಕು. ಅಪಘಾತಕ್ಕೆ ಕಾರಣರಾದವರ ಮೇಲೆ ಕ್ರಮ ಜರುಗಿಸಬೇಕು. ಮೃತರ ಕುಟುಂಬದವರಿಗೆ ಸಮರ್ಪಕ ಪರಿಹಾರ ನೀಡುವುದರ ಜತೆಗೆ ಗಾಯಾಳುಗಳಿಗೆ ಸಂಪೂರ್ಣ ಜವಾಬ್ದಾರಿಯೊಂದಿಗೆ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಾಘವೇಂದ್ರ.ಎಂ.ಜಿ, ರಾಜೇಂದ್ರ ಅತನೂರ, ರಘು ಪವಾರ್, ತೇಜಸ್ ಇಂಬ್ರಾಹಿಂಪುರ, ಆನಂದ ದಂಡಗುಲಕರ್, ಶ್ರೀನಿವಾಸ್ ದಂಡಗುಲಕರ್, ರಾಕೇಶ ಹಾಗೂ ಇತರರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>