<p>ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಂತರವಾಣಿ ಸಮುದಾಯ ರೇಡಿಯೊ ಕೇಂದ್ರವು ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸ್ಪರ್ಧೆಯಲ್ಲಿ 500ಕ್ಕೂ ಅಧಿಕ ಸಮುದಾಯ ರೇಡಿಯೊ ಕೇಂದ್ರಗಳು ಭಾಗವಹಿಸಿದ್ದವು.</p>.<p>ತೃತೀಯ ಬಹುಮಾನ ₹50 ಸಾವಿರ ನಗದು, ಪ್ರಶಂಸಾ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. </p>.<p>ಕೇಂದ್ರದ ನಿರ್ದೇಶಕ ಶಿವರಾಜ ಶಾಸ್ತ್ರಿ ಹೇರೂರು ಮಾತನಾಡಿ, ‘ಸುಸ್ಥಿರತೆಯ ಮಾದರಿ ಪ್ರಶಸ್ತಿ’ ವಿಭಾಗದಲ್ಲಿ ನಮ್ಮ ಕೇಂದ್ರಕ್ಕೆ ತೃತೀಯ ಬಹುಮಾನ ಬಂದಿದೆ. 500ಕ್ಕೂ ಅಧಿಕ ಕೇಂದ್ರಗಳ ನಡುವಿನ ಕಠಿಣ ಸ್ಪರ್ಧೆ ಮೆಟ್ಟಿನಿಂತು ನಮ್ಮ ಕೇಂದ್ರ ಪ್ರಶಸ್ತಿ ಪಡೆದುಕೊಂಡಿದೆ’ ಎಂದಿದ್ದಾರೆ.</p>.<p>ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ದಾಕ್ಷಾಯಿಣಿ ಎಸ್.ಅಪ್ಪ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಶಿವರಾಜ ಶಾಸ್ತ್ರಿ ಅವರನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಂತರವಾಣಿ ಸಮುದಾಯ ರೇಡಿಯೊ ಕೇಂದ್ರವು ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸ್ಪರ್ಧೆಯಲ್ಲಿ 500ಕ್ಕೂ ಅಧಿಕ ಸಮುದಾಯ ರೇಡಿಯೊ ಕೇಂದ್ರಗಳು ಭಾಗವಹಿಸಿದ್ದವು.</p>.<p>ತೃತೀಯ ಬಹುಮಾನ ₹50 ಸಾವಿರ ನಗದು, ಪ್ರಶಂಸಾ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. </p>.<p>ಕೇಂದ್ರದ ನಿರ್ದೇಶಕ ಶಿವರಾಜ ಶಾಸ್ತ್ರಿ ಹೇರೂರು ಮಾತನಾಡಿ, ‘ಸುಸ್ಥಿರತೆಯ ಮಾದರಿ ಪ್ರಶಸ್ತಿ’ ವಿಭಾಗದಲ್ಲಿ ನಮ್ಮ ಕೇಂದ್ರಕ್ಕೆ ತೃತೀಯ ಬಹುಮಾನ ಬಂದಿದೆ. 500ಕ್ಕೂ ಅಧಿಕ ಕೇಂದ್ರಗಳ ನಡುವಿನ ಕಠಿಣ ಸ್ಪರ್ಧೆ ಮೆಟ್ಟಿನಿಂತು ನಮ್ಮ ಕೇಂದ್ರ ಪ್ರಶಸ್ತಿ ಪಡೆದುಕೊಂಡಿದೆ’ ಎಂದಿದ್ದಾರೆ.</p>.<p>ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ ದಾಕ್ಷಾಯಿಣಿ ಎಸ್.ಅಪ್ಪ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಶಿವರಾಜ ಶಾಸ್ತ್ರಿ ಅವರನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>