<p>ಕಲಬುರಗಿ: ‘ಮುಂಬರುವ ಬಜೆಟ್ನಲ್ಲಿ ಕೃಷಿ ಸಾಲ ಮನ್ನಾ ಘೋಷಣೆ, ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹ 150 ಪಾವತಿ, ತೆಲಂಗಾಣ ಮಾದರಿಯಲ್ಲಿ ರೈತರಿಗೆ ₹ 5 ಲಕ್ಷ ಜೀವ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರುವರಿ 6ರಂದು ಬೆಂಗಳೂರು ಚಲೊ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಧರ್ಮರಾಜ ಬಿ.ಸಾಹು ತಿಳಿಸಿದರು.</p>.<p>‘ರಾಜ್ಯ ಸರ್ಕಾರವು 2024–25ನೇ ಸಾಲಿನ ಬಜೆಟ್ನಲ್ಲಿ ರೈತರ ಹಿತಾಸಕ್ತಿಗೆ ಹೆಚ್ಚು ಒತ್ತು ನೀಡಬೇಕು. ತೆಲಂಗಾಣದಲ್ಲಿ ಕೃಷಿಕರ ಸಾಲ ಮನ್ನಾ ಮಾಡಿದಂತೆ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಹಾಗೂ ರೈತ ಮಹಿಳೆಯರು ಈ ಚಳವಳಿ ನಡೆಸುವರು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಕಬ್ಬಿನ ಎಫ್ಆರ್ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ಬದಲಿಸಬೇಕು. ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗಳು ತಮ್ಮ ಮನಬಂದಂತೆ ಸಾಗಾಣಿಕೆ ವೆಚ್ಚ ವಸೂಲಿ ಮಾಡುತ್ತಿವೆ. ಕಡಿತದ ಹಣವನ್ನು ಬೆಳೆಗಾರರಿಗೆ ವಾಪಸ್ ನೀಡಬೇಕು. 2022-23ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹150 ಹೆಚ್ಚುವರಿ ದರ ಪಾವತಿಸಬೇಕು. ಇಲ್ಲದಿದ್ದರೆ ಸರ್ಕಾರವೇ ಈ ಹಣ ಪಾವತಿಸಬೇಕು’ ಎಂದು ಕೋರಿದರು.</p>.<p>‘ಈಗಿರುವ ಇಳುವರಿಯ ಮಾನದಂಡವನ್ನು ಬದಲಾಯಿಸಿ, ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು. ಕಬ್ಬಿನ ಎಥೆನಾಲ್ ಉತ್ಪಾದನೆಯ ಲಾಭಾಂಶವನ್ನು ಕಬ್ಬಿನ ದರದಲ್ಲಿ ಪರಿಗಣಿಸಬೇಕು. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಕಬ್ಬು ಬೆಳೆ ಸುಟ್ಟರೆ ಕಾರ್ಖಾನೆಗಳು ಶೇ 25ರಷ್ಟು ಕಡಿತವನ್ನು ಬಿಟ್ಟು ಎಫ್ಆರ್ಪಿ ಹಣವನ್ನು ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘60 ವರ್ಷ ತುಂಬಿದ ರೈತರಿಗೆ ಮಾಸಿಕ ₹ 10,000 ಪಿಂಚಣಿ ಯೋಜನೆ ಜಾರಿಗೆ ತರಬೇಕು. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಯ ನಡುವಿನ ದ್ವಿಪಕ್ಷೀಯ ಒಪ್ಪಂದದ ನೀತಿಯನ್ನು ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಕಡ್ಡಾಯಗೊಳಿಸಬೇಕು ಎಂಬ ಬೇಡಿಕೆಗಳನ್ನು ಇರಿಸಿಕೊಂಡು ಚಳವಳಿ ನಡೆಸಲಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ರಮೇಶ ಹೂಗಾರ, ಶರಣು ಬಿಲ್ಲಾಡ, ಬಸವರಾಜ ಪಾಟೀಲ, ನಾಗೇಂದ್ರರಾವ ದೇಶಮುಖ, ಶಾಂತವೀರಪ್ಪ ದಸ್ತಾಪುರ, ಕೇಶಪ್ಪ ಕೊರಳ್ಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಮುಂಬರುವ ಬಜೆಟ್ನಲ್ಲಿ ಕೃಷಿ ಸಾಲ ಮನ್ನಾ ಘೋಷಣೆ, ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹ 150 ಪಾವತಿ, ತೆಲಂಗಾಣ ಮಾದರಿಯಲ್ಲಿ ರೈತರಿಗೆ ₹ 5 ಲಕ್ಷ ಜೀವ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರುವರಿ 6ರಂದು ಬೆಂಗಳೂರು ಚಲೊ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಧರ್ಮರಾಜ ಬಿ.ಸಾಹು ತಿಳಿಸಿದರು.</p>.<p>‘ರಾಜ್ಯ ಸರ್ಕಾರವು 2024–25ನೇ ಸಾಲಿನ ಬಜೆಟ್ನಲ್ಲಿ ರೈತರ ಹಿತಾಸಕ್ತಿಗೆ ಹೆಚ್ಚು ಒತ್ತು ನೀಡಬೇಕು. ತೆಲಂಗಾಣದಲ್ಲಿ ಕೃಷಿಕರ ಸಾಲ ಮನ್ನಾ ಮಾಡಿದಂತೆ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಹಾಗೂ ರೈತ ಮಹಿಳೆಯರು ಈ ಚಳವಳಿ ನಡೆಸುವರು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಕಬ್ಬಿನ ಎಫ್ಆರ್ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ಬದಲಿಸಬೇಕು. ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗಳು ತಮ್ಮ ಮನಬಂದಂತೆ ಸಾಗಾಣಿಕೆ ವೆಚ್ಚ ವಸೂಲಿ ಮಾಡುತ್ತಿವೆ. ಕಡಿತದ ಹಣವನ್ನು ಬೆಳೆಗಾರರಿಗೆ ವಾಪಸ್ ನೀಡಬೇಕು. 2022-23ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹150 ಹೆಚ್ಚುವರಿ ದರ ಪಾವತಿಸಬೇಕು. ಇಲ್ಲದಿದ್ದರೆ ಸರ್ಕಾರವೇ ಈ ಹಣ ಪಾವತಿಸಬೇಕು’ ಎಂದು ಕೋರಿದರು.</p>.<p>‘ಈಗಿರುವ ಇಳುವರಿಯ ಮಾನದಂಡವನ್ನು ಬದಲಾಯಿಸಿ, ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು. ಕಬ್ಬಿನ ಎಥೆನಾಲ್ ಉತ್ಪಾದನೆಯ ಲಾಭಾಂಶವನ್ನು ಕಬ್ಬಿನ ದರದಲ್ಲಿ ಪರಿಗಣಿಸಬೇಕು. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಕಬ್ಬು ಬೆಳೆ ಸುಟ್ಟರೆ ಕಾರ್ಖಾನೆಗಳು ಶೇ 25ರಷ್ಟು ಕಡಿತವನ್ನು ಬಿಟ್ಟು ಎಫ್ಆರ್ಪಿ ಹಣವನ್ನು ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘60 ವರ್ಷ ತುಂಬಿದ ರೈತರಿಗೆ ಮಾಸಿಕ ₹ 10,000 ಪಿಂಚಣಿ ಯೋಜನೆ ಜಾರಿಗೆ ತರಬೇಕು. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಯ ನಡುವಿನ ದ್ವಿಪಕ್ಷೀಯ ಒಪ್ಪಂದದ ನೀತಿಯನ್ನು ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಕಡ್ಡಾಯಗೊಳಿಸಬೇಕು ಎಂಬ ಬೇಡಿಕೆಗಳನ್ನು ಇರಿಸಿಕೊಂಡು ಚಳವಳಿ ನಡೆಸಲಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ರಮೇಶ ಹೂಗಾರ, ಶರಣು ಬಿಲ್ಲಾಡ, ಬಸವರಾಜ ಪಾಟೀಲ, ನಾಗೇಂದ್ರರಾವ ದೇಶಮುಖ, ಶಾಂತವೀರಪ್ಪ ದಸ್ತಾಪುರ, ಕೇಶಪ್ಪ ಕೊರಳ್ಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>