<p><strong>ಅಫಜಲಪುರ:</strong> ‘ಕಮ್ಯುನಿಸ್ಟ್ ಪಕ್ಷವು, ದುಡಿಯುವ ವರ್ಗದವರ ಪರವಾಗಿದೆ. ನ್ಯಾಯ ಬಯಸುವ ಸಮಸ್ತ ಶ್ರಮಿಕರು ಪಕ್ಷದೊಂದಿಗೆ ಹೆಜ್ಜೆ ಹಾಕಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ತಿಳಿಸಿದರು.</p>.<p>ತಾಲ್ಲೂಕಿನ ಬಳೂರ್ಗಿ ಗ್ರಾಮದಲ್ಲಿ ಶನಿವಾರ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ತಾಲ್ಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>‘ದೇಶ ಹಾಗೂ ರಾಜ್ಯದಲ್ಲಿ ನಿರುದ್ಯೋಗ ಬಡತನ ತಾಂಡವವಾಡುತ್ತಿದೆ. ಆಳುವ ಸರ್ಕಾರಗಳು ಪ್ರಜೆಗಳ ಹಿತ ಕಾಯುವ ಬದಲಿಗೆ ಕಾರ್ಪೋರೆಟ್ಗಳ ಸಖ್ಯದಲ್ಲಿವೆ. ಜನರಯು ತಮ್ಮ ಹಕ್ಕುಗಳಿಗಾಗಿ ಹೋರಾಡಬಾರದು ಎಂದು ಕೋಮುವಾದಿ ಭಾವನೆ ಬಿತ್ತುತ್ತಿದ್ದಾರೆ. ಸೌಹಾರ್ದ ಪರಂಪರೆಯ ನಾಡಿಗೆ ಅಪಾಯ ತಂದಿದ್ದಾರೆ’ ಎಂದು ಹೇಳಿದರು.</p>.<p>‘ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಪ್ರತಿ 3 ವರ್ಷಕ್ಕೊಮ್ಮೆ ಸಮ್ಮೇಳನಗಳು ನಡೆದು, ಸಮಿತಿಗಳ ರಚನೆಯಾಗುತ್ತದೆ. ನ. 24, 25 ರಂದು 2 ದಿನಗಳವರೆಗೆ ಪಕ್ಷದ ಜಿಲ್ಲಾ ಸಮ್ಮೇಳನವು ಕಲಬುರಗಿಯಲ್ಲಿ ನಡೆಯಲಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಶ್ರೀಮಂತ ಬಿರಾದಾರ ಮಾತನಾಡಿದರು. ಗುರು ಚಾಂದಕವಠೆ ಅವರನ್ನು ತಾಲ್ಲೂಕು ಸಮಿತಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಜಿಲ್ಲಾ ಸಮ್ಮೇಳನಕ್ಕೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ರಾಜ್ಯ ಸಮಿತಿ ಸದಸ್ಯೆ ಶಾಂತಾ ಘಂಟಿ ಪಕ್ಷದ ಧ್ವಜಾರೋಹಣ ನೆರವೇರಿಸಿದರು.</p>.<p>ಬಸಮ್ಮ ಬಳೂರಗಿ, ಸಿದ್ದಮ್ಮ, ಬಿಸ್ಮಿಲ್ಲಾ, ಶಾಂತಾ, ಗ್ರಾಮದ ರೈತ ಮುಖಂಡರಾದ ಅರ್ಜುನ ಸೋಮಜಾಳ, ಮನೋಹರ ರಾಠೋಡ, ಮಚೇಂದ್ರ ಜಾಬಾದಿ ಮತ್ತಿತರರು ಪಾಲ್ಗೊಂಡಿದ್ದರು. ಕಾರ್ಯದರ್ಶಿ ಗುರು ಚಾಂದಕವಠೆ ನಿರೂಪಿಸಿದರು. ಸಾಯಬಣ್ಣ ಜಮಾದಾರ ಸ್ವಾಗತಿಸಿದರು. ಸಿದ್ದಮ್ಮ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ‘ಕಮ್ಯುನಿಸ್ಟ್ ಪಕ್ಷವು, ದುಡಿಯುವ ವರ್ಗದವರ ಪರವಾಗಿದೆ. ನ್ಯಾಯ ಬಯಸುವ ಸಮಸ್ತ ಶ್ರಮಿಕರು ಪಕ್ಷದೊಂದಿಗೆ ಹೆಜ್ಜೆ ಹಾಕಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ತಿಳಿಸಿದರು.</p>.<p>ತಾಲ್ಲೂಕಿನ ಬಳೂರ್ಗಿ ಗ್ರಾಮದಲ್ಲಿ ಶನಿವಾರ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ತಾಲ್ಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>‘ದೇಶ ಹಾಗೂ ರಾಜ್ಯದಲ್ಲಿ ನಿರುದ್ಯೋಗ ಬಡತನ ತಾಂಡವವಾಡುತ್ತಿದೆ. ಆಳುವ ಸರ್ಕಾರಗಳು ಪ್ರಜೆಗಳ ಹಿತ ಕಾಯುವ ಬದಲಿಗೆ ಕಾರ್ಪೋರೆಟ್ಗಳ ಸಖ್ಯದಲ್ಲಿವೆ. ಜನರಯು ತಮ್ಮ ಹಕ್ಕುಗಳಿಗಾಗಿ ಹೋರಾಡಬಾರದು ಎಂದು ಕೋಮುವಾದಿ ಭಾವನೆ ಬಿತ್ತುತ್ತಿದ್ದಾರೆ. ಸೌಹಾರ್ದ ಪರಂಪರೆಯ ನಾಡಿಗೆ ಅಪಾಯ ತಂದಿದ್ದಾರೆ’ ಎಂದು ಹೇಳಿದರು.</p>.<p>‘ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಪ್ರತಿ 3 ವರ್ಷಕ್ಕೊಮ್ಮೆ ಸಮ್ಮೇಳನಗಳು ನಡೆದು, ಸಮಿತಿಗಳ ರಚನೆಯಾಗುತ್ತದೆ. ನ. 24, 25 ರಂದು 2 ದಿನಗಳವರೆಗೆ ಪಕ್ಷದ ಜಿಲ್ಲಾ ಸಮ್ಮೇಳನವು ಕಲಬುರಗಿಯಲ್ಲಿ ನಡೆಯಲಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಶ್ರೀಮಂತ ಬಿರಾದಾರ ಮಾತನಾಡಿದರು. ಗುರು ಚಾಂದಕವಠೆ ಅವರನ್ನು ತಾಲ್ಲೂಕು ಸಮಿತಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಜಿಲ್ಲಾ ಸಮ್ಮೇಳನಕ್ಕೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ರಾಜ್ಯ ಸಮಿತಿ ಸದಸ್ಯೆ ಶಾಂತಾ ಘಂಟಿ ಪಕ್ಷದ ಧ್ವಜಾರೋಹಣ ನೆರವೇರಿಸಿದರು.</p>.<p>ಬಸಮ್ಮ ಬಳೂರಗಿ, ಸಿದ್ದಮ್ಮ, ಬಿಸ್ಮಿಲ್ಲಾ, ಶಾಂತಾ, ಗ್ರಾಮದ ರೈತ ಮುಖಂಡರಾದ ಅರ್ಜುನ ಸೋಮಜಾಳ, ಮನೋಹರ ರಾಠೋಡ, ಮಚೇಂದ್ರ ಜಾಬಾದಿ ಮತ್ತಿತರರು ಪಾಲ್ಗೊಂಡಿದ್ದರು. ಕಾರ್ಯದರ್ಶಿ ಗುರು ಚಾಂದಕವಠೆ ನಿರೂಪಿಸಿದರು. ಸಾಯಬಣ್ಣ ಜಮಾದಾರ ಸ್ವಾಗತಿಸಿದರು. ಸಿದ್ದಮ್ಮ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>