<p><strong>ಕಲಬುರಗಿ:</strong> ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶನಕ್ಕೆ ಪ್ರತ್ಯೇಕ ನಾಟಕ ಥಿಯೇಟರ್ನ ಕೊರತೆಯಿದ್ದು, ಸರ್ಕಾರ ಈ ಸಮಸ್ಯೆ ನಿವಾರಣೆಗೆ ಕೂಡಲೇ ಸ್ಪಂದಿಸಬೇಕಾಗಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಜೇವರ್ಗಿ ಹೇಳಿದರು. </p>.<p>ರಂಗಮಾಧ್ಯಮ ಹವ್ಯಾಸಿ ನಾಟಕ ಸಂಸ್ಥೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಈಚೆಗೆ ಕನ್ನಡಭವನದಲ್ಲಿ ನಡೆದ ರಂಗಮಾಧ್ಯಮ ಸುವರ್ಣ ಮಹೋತ್ಸವ ಆಚರಣೆ ಹಾಗೂ ರಂಗ ಸುವರ್ಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜಿಲ್ಲೆಯ ಗಿರಡ್ಡಿ ಗೋವಿಂದರಾಜ, ಚಂದ್ರಕಾಂತ ಕುಸನೂರು, ಶ್ರೀಧರರಾವ್, ಪ್ರೊ. ಹೇಮಂತ ಕೊಲ್ಲಾಪುರೆ ಮುಂತಾದ ಮಹಾನ್ ವ್ಯಕ್ತಿಗಳು ಕಟ್ಟಿದ ರಂಗ ಮಾಧ್ಯಮ ಸಂಸ್ಥೆಯು ರಂಗಭೂಮಿ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಅನೇಕ ಕಲಾವಿದರನ್ನು ಹುಟ್ಟು ಹಾಕಿ ಸದಭಿರುಚಿಯ ನಾಟಕಗಳನ್ನು ಪ್ರದರ್ಶಿಸಿ ಜನಾನುರಾಗಿಯಾಗಿದೆ ಎಂದರು. </p>.<p>ರಂಗಮಾಧ್ಯಮ ಸಂಸ್ಥೆಯ ಮುಖ್ಯಸ್ಥ ಪ್ರಭಾಕರ ಸಾತಖೇಡ್ ಮಾತನಾಡಿ, ‘ಕಳೆದ 50 ವರ್ಷಗಳಲ್ಲಿ ರಂಗಭೂಮಿ ಕ್ಷೇತ್ರಕ್ಕೆ ಸಂಸ್ಥೆ ವಿಶೇಷ ಸಾಧನೆ ಮಾಡಿದೆ. ಪ್ರೇಕ್ಷಕರಿಂದ ಹತ್ತು ರೂಪಾಯಿ ಸಂಗ್ರಹಿಸಿ ವರ್ಷಕ್ಕೆ ಮೂರು ನಾಟಕಗಳನ್ನು ಪ್ರದರ್ಶನ ಮಾಡಿದ ಹೆಗ್ಗಳಿಕೆಯ ಸಂಸ್ಥೆಗಿದೆ. ಶ್ರೀರಂಗ, ಗಿರೀಶ್ ಕಾರ್ನಾಡ್, ಪಿ. ಲಂಕೇಶ್, ಚಂದ್ರಶೇಖರ ಕಂಬಾರ ಮುಂತಾದವರ ನಾಟಕಗಳನ್ನು ಪ್ರದರ್ಶನ ಮಾಡಿದೆ. ರಂಗಭೂಮಿಯು ಅವಲಂಬನೆಯ ಕ್ಷೇತ್ರ ಆಗಿರುವುದರಿಂದ ಎಲ್ಲರ ಸಹಕಾರವಿದ್ದರೆ ಮಾತ್ರ ನಾಟಕಗಳನ್ನು ಪ್ರದರ್ಶನ ಮಾಡಲು ಸಾಧ್ಯ ಎಂದು ಹೇಳಿದರು.</p>.<p>ಚಿತ್ರ ಕಲಾವಿದ ಪ್ರೊ.ವಿ.ಜಿ ಅಂದಾನಿ, ಹಿರಿಯ ರಂಗ ಕಲಾವಿದ ಐ.ಎಸ್.ನವಲಿ, ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಸದಾನಂದ ಪೆರ್ಲ, ಪತ್ರಕರ್ತ ಸಂಗಮನಾಥ ರೇವತಗಾಂವ, ಕಲಾವಿದೆ ಸಂಗೀತ ಮಾನ್ವಿಕರ್ ಅವರಿಗೆ ರಂಗ ಸುವರ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಸ್ವಾಮಿರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ನಾರಾಯಣ ಕುಲಕರ್ಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಸಂಘಟಕ ಕೆ.ಪಿ ಗಿರಿಧರ್ ಉಪಸ್ಥಿತರಿದ್ದರು.</p>.<p>ಈ ಸಂದರ್ಭದಲ್ಲಿ ಸಂಗೀತ ಕಲಾವಿದರಾದ ಮಹೇಶ್ ಬಡಿಗೇರ್, ರಮೇಶ್ ಜೋಶಿ, ಲಕ್ಷ್ಮಿ ಶಂಕರ ಜೋಶಿ, ಶ್ರುತಿ ಸಗರ್, ರಂಜೀಷಾ ಕುಲಕರ್ಣಿ, ಪ್ರಮೋದಿನಿ ಶೀಲವಂತ ರಂಗಗೀತೆ ಹಾಡಿದರು. ಬದರಿನಾಥ ಮುಡಬಿ ಹಾರ್ಮೋನಿಯಂ, ವಿಜಯೇಂದ್ರ ಸಗರ ತಬಲಾ ಸಾಥ್ ನೀಡಿದರು. ಶಾಂತಾ ಭೀಮಸೇನ ರಾವ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶನಕ್ಕೆ ಪ್ರತ್ಯೇಕ ನಾಟಕ ಥಿಯೇಟರ್ನ ಕೊರತೆಯಿದ್ದು, ಸರ್ಕಾರ ಈ ಸಮಸ್ಯೆ ನಿವಾರಣೆಗೆ ಕೂಡಲೇ ಸ್ಪಂದಿಸಬೇಕಾಗಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಜೇವರ್ಗಿ ಹೇಳಿದರು. </p>.<p>ರಂಗಮಾಧ್ಯಮ ಹವ್ಯಾಸಿ ನಾಟಕ ಸಂಸ್ಥೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಈಚೆಗೆ ಕನ್ನಡಭವನದಲ್ಲಿ ನಡೆದ ರಂಗಮಾಧ್ಯಮ ಸುವರ್ಣ ಮಹೋತ್ಸವ ಆಚರಣೆ ಹಾಗೂ ರಂಗ ಸುವರ್ಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜಿಲ್ಲೆಯ ಗಿರಡ್ಡಿ ಗೋವಿಂದರಾಜ, ಚಂದ್ರಕಾಂತ ಕುಸನೂರು, ಶ್ರೀಧರರಾವ್, ಪ್ರೊ. ಹೇಮಂತ ಕೊಲ್ಲಾಪುರೆ ಮುಂತಾದ ಮಹಾನ್ ವ್ಯಕ್ತಿಗಳು ಕಟ್ಟಿದ ರಂಗ ಮಾಧ್ಯಮ ಸಂಸ್ಥೆಯು ರಂಗಭೂಮಿ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಅನೇಕ ಕಲಾವಿದರನ್ನು ಹುಟ್ಟು ಹಾಕಿ ಸದಭಿರುಚಿಯ ನಾಟಕಗಳನ್ನು ಪ್ರದರ್ಶಿಸಿ ಜನಾನುರಾಗಿಯಾಗಿದೆ ಎಂದರು. </p>.<p>ರಂಗಮಾಧ್ಯಮ ಸಂಸ್ಥೆಯ ಮುಖ್ಯಸ್ಥ ಪ್ರಭಾಕರ ಸಾತಖೇಡ್ ಮಾತನಾಡಿ, ‘ಕಳೆದ 50 ವರ್ಷಗಳಲ್ಲಿ ರಂಗಭೂಮಿ ಕ್ಷೇತ್ರಕ್ಕೆ ಸಂಸ್ಥೆ ವಿಶೇಷ ಸಾಧನೆ ಮಾಡಿದೆ. ಪ್ರೇಕ್ಷಕರಿಂದ ಹತ್ತು ರೂಪಾಯಿ ಸಂಗ್ರಹಿಸಿ ವರ್ಷಕ್ಕೆ ಮೂರು ನಾಟಕಗಳನ್ನು ಪ್ರದರ್ಶನ ಮಾಡಿದ ಹೆಗ್ಗಳಿಕೆಯ ಸಂಸ್ಥೆಗಿದೆ. ಶ್ರೀರಂಗ, ಗಿರೀಶ್ ಕಾರ್ನಾಡ್, ಪಿ. ಲಂಕೇಶ್, ಚಂದ್ರಶೇಖರ ಕಂಬಾರ ಮುಂತಾದವರ ನಾಟಕಗಳನ್ನು ಪ್ರದರ್ಶನ ಮಾಡಿದೆ. ರಂಗಭೂಮಿಯು ಅವಲಂಬನೆಯ ಕ್ಷೇತ್ರ ಆಗಿರುವುದರಿಂದ ಎಲ್ಲರ ಸಹಕಾರವಿದ್ದರೆ ಮಾತ್ರ ನಾಟಕಗಳನ್ನು ಪ್ರದರ್ಶನ ಮಾಡಲು ಸಾಧ್ಯ ಎಂದು ಹೇಳಿದರು.</p>.<p>ಚಿತ್ರ ಕಲಾವಿದ ಪ್ರೊ.ವಿ.ಜಿ ಅಂದಾನಿ, ಹಿರಿಯ ರಂಗ ಕಲಾವಿದ ಐ.ಎಸ್.ನವಲಿ, ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಸದಾನಂದ ಪೆರ್ಲ, ಪತ್ರಕರ್ತ ಸಂಗಮನಾಥ ರೇವತಗಾಂವ, ಕಲಾವಿದೆ ಸಂಗೀತ ಮಾನ್ವಿಕರ್ ಅವರಿಗೆ ರಂಗ ಸುವರ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಸ್ವಾಮಿರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ನಾರಾಯಣ ಕುಲಕರ್ಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಸಂಘಟಕ ಕೆ.ಪಿ ಗಿರಿಧರ್ ಉಪಸ್ಥಿತರಿದ್ದರು.</p>.<p>ಈ ಸಂದರ್ಭದಲ್ಲಿ ಸಂಗೀತ ಕಲಾವಿದರಾದ ಮಹೇಶ್ ಬಡಿಗೇರ್, ರಮೇಶ್ ಜೋಶಿ, ಲಕ್ಷ್ಮಿ ಶಂಕರ ಜೋಶಿ, ಶ್ರುತಿ ಸಗರ್, ರಂಜೀಷಾ ಕುಲಕರ್ಣಿ, ಪ್ರಮೋದಿನಿ ಶೀಲವಂತ ರಂಗಗೀತೆ ಹಾಡಿದರು. ಬದರಿನಾಥ ಮುಡಬಿ ಹಾರ್ಮೋನಿಯಂ, ವಿಜಯೇಂದ್ರ ಸಗರ ತಬಲಾ ಸಾಥ್ ನೀಡಿದರು. ಶಾಂತಾ ಭೀಮಸೇನ ರಾವ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>