ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಕಾಳಲಿಂಗೇಶ್ವರ ದೇವಸ್ಥಾನದ ಬಳಿ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ. ಅದಕ್ಕೆ ಸಣ್ಣೂರ ಪಿಡಿಒ, ಅಧ್ಯಕ್ಷರು ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿ ನೆರವು ನೀಡಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನ ಸೆಳೆದ ಬಳಿಕ ಲೋಕೋಪಯೋಗಿ ಇಲಾಖೆಯ ಎಇಇ ಸ್ಥಳ ಪರಿಶೀಲಿಸಿ, ದಾಖಲೆಗಳನ್ನು ಪರಿಶೀಲಿಸಿ, ಈ ಪ್ರದೇಶವು ಕಲ್ಯಾಣ ಮಂಟಪ ನಿರ್ಮಿಸಲು ಯೋಗ್ಯವಿಲ್ಲ ಎಂದು ಪತ್ರ ನೀಡಿದ್ದಾರೆ’ ಎಂದು ವಿವರಿಸಿದರು.