<p><strong>ಕಲಬುರಗಿ</strong>: ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹಲ್ಲೆ ಪ್ರಕರಣ ಸಂಬಂಧ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಕಾನ್ಸ್ಟೆಬಲ್ಗಳನ್ನು ತಳ್ಳಿ ಓಡಿ ಹೋಗಿದ್ದಾನೆ.</p>.<p>ಅಶೋಕ ಲೋಕು ಪವಾರ್ (40) ಪರಾರಿಯಾದ ಆರೋಪಿ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರೇಮಸಿಂಗ್ ಶಂಕರ್ ಅವರ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ ಆರೋಪದಲ್ಲಿ ಅಶೋಕ ಮತ್ತು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನ ವಿರುದ್ಧ ಚಿಂಚೋಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಾಲಕನನ್ನು ನಗರದ ಬಾಲ ಮಂದಿರದಲ್ಲಿ ಬಿಡುವಾಗ, ಅಶೋಕ ಕಾನ್ಸ್ಟೆಬಲ್ಗಳಾದ ಮಂಜುನಾಥ ಸಂಗಣ್ಣ ಮತ್ತು ಕಾಶಿಲಿಂಗ್ ಅವರನ್ನು ತಳ್ಳಿ ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಆರೋಪಿ ಬಂಧನ:</strong> ಗಂಜ್ ಪ್ರದೇಶದಲ್ಲಿ ಹಣಕಾಸಿನ ವಿಚಾರವಾಗಿ ಕೊಲೆಗೆ ಯತ್ನಿಸಿದ ಆರೋಪದಲ್ಲಿ ಮಹಮದ್ ಸಲೀಂ ಅವರನ್ನು ಚೌಕ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಸಾಲದ ಹಣ ವಾಪಸ್ ಕೊಡುವಂತೆ ಕೇಳಿದ್ದಕ್ಕೆ ಮೆಹಬೂಬ್ ಅಲಿ ಖಾನ್ ಸೇರಿ ಇತರೆ ಮೂವರ ಮೇಲೆ ಆರೋಪಿ ಚಾಕುವಿನಿಂದ ದಾಳಿ ಮಾಡಿದ ಎಂದು ಪೊಲೀಸರು ತಿಳಿಸಿದ್ದಾರೆ.<br><br>ಹಾಸ್ಟೆಲ್ ವಿದ್ಯಾರ್ಥಿನಿ ನಾಪತ್ತೆ: ನಗರದ ಅನ್ನಪೂರ್ಣ ಕ್ರಾಸ್ ಸಮೀಪದ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯೊಬ್ಬರು ಕಾಣೆಯಾಗಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹಲ್ಲೆ ಪ್ರಕರಣ ಸಂಬಂಧ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಕಾನ್ಸ್ಟೆಬಲ್ಗಳನ್ನು ತಳ್ಳಿ ಓಡಿ ಹೋಗಿದ್ದಾನೆ.</p>.<p>ಅಶೋಕ ಲೋಕು ಪವಾರ್ (40) ಪರಾರಿಯಾದ ಆರೋಪಿ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರೇಮಸಿಂಗ್ ಶಂಕರ್ ಅವರ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ ಆರೋಪದಲ್ಲಿ ಅಶೋಕ ಮತ್ತು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನ ವಿರುದ್ಧ ಚಿಂಚೋಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಾಲಕನನ್ನು ನಗರದ ಬಾಲ ಮಂದಿರದಲ್ಲಿ ಬಿಡುವಾಗ, ಅಶೋಕ ಕಾನ್ಸ್ಟೆಬಲ್ಗಳಾದ ಮಂಜುನಾಥ ಸಂಗಣ್ಣ ಮತ್ತು ಕಾಶಿಲಿಂಗ್ ಅವರನ್ನು ತಳ್ಳಿ ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಆರೋಪಿ ಬಂಧನ:</strong> ಗಂಜ್ ಪ್ರದೇಶದಲ್ಲಿ ಹಣಕಾಸಿನ ವಿಚಾರವಾಗಿ ಕೊಲೆಗೆ ಯತ್ನಿಸಿದ ಆರೋಪದಲ್ಲಿ ಮಹಮದ್ ಸಲೀಂ ಅವರನ್ನು ಚೌಕ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಸಾಲದ ಹಣ ವಾಪಸ್ ಕೊಡುವಂತೆ ಕೇಳಿದ್ದಕ್ಕೆ ಮೆಹಬೂಬ್ ಅಲಿ ಖಾನ್ ಸೇರಿ ಇತರೆ ಮೂವರ ಮೇಲೆ ಆರೋಪಿ ಚಾಕುವಿನಿಂದ ದಾಳಿ ಮಾಡಿದ ಎಂದು ಪೊಲೀಸರು ತಿಳಿಸಿದ್ದಾರೆ.<br><br>ಹಾಸ್ಟೆಲ್ ವಿದ್ಯಾರ್ಥಿನಿ ನಾಪತ್ತೆ: ನಗರದ ಅನ್ನಪೂರ್ಣ ಕ್ರಾಸ್ ಸಮೀಪದ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯೊಬ್ಬರು ಕಾಣೆಯಾಗಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>