ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಕೇಶ್ವಾರದಲ್ಲಿ ಮತ್ತೆ ಲಘು ಭೂಕಂಪನ, ಭೂಮಿಯಿಂದ ಭಾರಿ ಸದ್ದು

Last Updated 28 ಅಕ್ಟೋಬರ್ 2021, 5:18 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕಿನ ಗಡಿಕೇಶ್ವಾರ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಗುರುವಾರ ಬೆಳಿಗ್ಗೆ ಮತ್ತೆ ಭೂಮಿಯಿಂದ ಭಾರಿ ಸದ್ದು ಕೇಳಿ ಬಂದು ಲಘು ಕಂಪನ‌ ಸಂಭವಿಸಿದೆ ಎಂದು ಗ್ರಾಮದ ಮುಖಂಡರಾದ ಪ್ರಕಾಶ ರಂಗನೂರ ಮತ್ತು ಅರುಣ ರಂಗನೂರ ತಿಳಿಸಿದ್ದಾರೆ.

ಬೆಳಿಗ್ಗೆ 9.51ಕ್ಕೆ ಭೂಮಿಯಿಂದ ಸದ್ದು ಕೇಳಿ ಬಂದಿದೆ. ಇಲ್ಲಿ ನಿತ್ಯ ಲಘು ಕಂಪನ ಸಂಭವಿಸುತ್ತಿದೆ ಇದರ ಅಧ್ಯಯನಕ್ಕಾಗಿ ಹೈದರಾಬಾದ್‌ನಲ್ಲಿ ರಾಷ್ಟ್ರೀಯ ಭೂಭೌತವಿಜ್ಞಾನ ಸಂಶೋಧನಾ ಸಂಸ್ಥೆ ಸಿಸ್ಮೊ ಮೀಟರ್ ಅಳವಡಿಸಿದೆ. ಕಂದಾಯ ಸಚಿವ ಆರ್ ಅಶೋಕ ಭೇಟಿ ನೀಡಿದ ನಂತರ ಒಂದೆರಡು ದಿನ ಸದ್ದಿನ ಅನುಭವ ತಗ್ಗಿತ್ತು ಆದರೆ ಈಗ ಮತ್ತೆ ಮುಂದುವರೆದಿದ್ದು ಗ್ರಾಮಸ್ಥರನ್ನು ಕಂಗಾಲಾಗಿಸಿದೆ.

ಗಡಿಕೇಶ್ವಾರ, ಕುಪನೂರ ಬೆನಕನಳ್ಳಿ, ಭಂಟನಳ್ಳಿ ಹಾಗೂ ಕಾಳಗಿ ತಾಲ್ಲೂಕಿನ ಹಲಚೇರಾ, ಹೊಸಳ್ಳಿ, ಕೊರವಿ, ತೇಗಲತಿಪ್ಪಿ ಗ್ರಾಮಗಳಲ್ಲಿಯೂ ಭೂಮಿಯಿಂದ ಸದ್ದು ಕೇಳಿ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT