<p><strong>ಅಫಜಲಪುರ:</strong> ಕೌಟುಂಬಿಕ ಕಲಹದಿಂದ ಬೇಸತ್ತು ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಇಬ್ಬರು ಜಲಸಮಾಧಿಯಾಗಿದ್ದಾರೆ.</p>.<p>ದೇವಣಗಾಂವ ಬ್ರಿಡ್ಜ್ ಮೇಲಿಂದ ಮಂಗಳವಾರ ಸಂಜೆ ಲಕ್ಷ್ಮಿ ಗುಡ್ಡಡಗಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಹಿಳೆ ರಕ್ಷಣೆಗೆ ಧುಮುಕಿದ್ದ ಪತಿ ಶಿವಕುಮಾರ ಗುಡ್ಡಡಗಿ (36) ಹಾಗೂ ಸಹೋದರ ಸಂಬಂಧಿ ರಾಜಶೇಖರ ಅಂಕಲಗಿ (39) ನೀರಿನ ರಭಸಕ್ಕೆ ಸಿಲುಕಿ ಮಂಗಳವಾರ ಸಂಜೆ 6.30 ಗಂಟೆಗೆ ನಾಪತ್ತೆಯಾಗಿದ್ದರು. ಮಹಿಳೆಯನ್ನು ಮೀನುಗಾರರು ರಕ್ಷಿಸಿದ್ದರು. ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಬಳಿಕ ಸೊನ್ನ ಬ್ಯಾರೇಜ್ನ ಗೇಟ್ ಬಂದ್ ಮಾಡಿಸಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಬುಧವಾರ ಬೆಳಗಿನ ಜಾವ ಪುನಃ ಕಾರ್ಯಾಚರಣೆ ಆರಂಭಿಸಿದಾಗ ಬೆಳಿಗ್ಗೆ 6.30ರ ಸುಮಾರಿಗೆ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಮೃತದೇಹ ಹೊರತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.</p>.<p>ಮೃತ ಶಿವಕುಮಾರ ಗುಡ್ಡಡಗಿ ಕಲಬುರಗಿ ತಾಲ್ಲೂಕಿನ ಕಣ್ಣಿ ಗ್ರಾಮದ ನಿವಾಸಿ. ಅವರಿಗೆ ಇಬ್ಬರು ಪುತ್ರರಿದ್ದಾರೆ. ರಾಜಶೇಖರ ಅಂಕಲಗಿ ಅವರು ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ನಿವಾಸಿ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ರಾಜಶೇಖರ ಅವರ ಅಂತ್ಯಕ್ರಿಯೆ ಸೊನ್ನ ಹಾಗೂ ಶಿವಕುಮಾರ ಗುಡ್ಡಡಗಿ ಅವರ ಅಂತ್ಯಕ್ರಿಯೆ ಕಣ್ಣಿ ಗ್ರಾಮದಲ್ಲಿ ನೆರವೇರಿತು. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ಕೌಟುಂಬಿಕ ಕಲಹದಿಂದ ಬೇಸತ್ತು ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಇಬ್ಬರು ಜಲಸಮಾಧಿಯಾಗಿದ್ದಾರೆ.</p>.<p>ದೇವಣಗಾಂವ ಬ್ರಿಡ್ಜ್ ಮೇಲಿಂದ ಮಂಗಳವಾರ ಸಂಜೆ ಲಕ್ಷ್ಮಿ ಗುಡ್ಡಡಗಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಹಿಳೆ ರಕ್ಷಣೆಗೆ ಧುಮುಕಿದ್ದ ಪತಿ ಶಿವಕುಮಾರ ಗುಡ್ಡಡಗಿ (36) ಹಾಗೂ ಸಹೋದರ ಸಂಬಂಧಿ ರಾಜಶೇಖರ ಅಂಕಲಗಿ (39) ನೀರಿನ ರಭಸಕ್ಕೆ ಸಿಲುಕಿ ಮಂಗಳವಾರ ಸಂಜೆ 6.30 ಗಂಟೆಗೆ ನಾಪತ್ತೆಯಾಗಿದ್ದರು. ಮಹಿಳೆಯನ್ನು ಮೀನುಗಾರರು ರಕ್ಷಿಸಿದ್ದರು. ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಬಳಿಕ ಸೊನ್ನ ಬ್ಯಾರೇಜ್ನ ಗೇಟ್ ಬಂದ್ ಮಾಡಿಸಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಬುಧವಾರ ಬೆಳಗಿನ ಜಾವ ಪುನಃ ಕಾರ್ಯಾಚರಣೆ ಆರಂಭಿಸಿದಾಗ ಬೆಳಿಗ್ಗೆ 6.30ರ ಸುಮಾರಿಗೆ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಮೃತದೇಹ ಹೊರತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.</p>.<p>ಮೃತ ಶಿವಕುಮಾರ ಗುಡ್ಡಡಗಿ ಕಲಬುರಗಿ ತಾಲ್ಲೂಕಿನ ಕಣ್ಣಿ ಗ್ರಾಮದ ನಿವಾಸಿ. ಅವರಿಗೆ ಇಬ್ಬರು ಪುತ್ರರಿದ್ದಾರೆ. ರಾಜಶೇಖರ ಅಂಕಲಗಿ ಅವರು ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ನಿವಾಸಿ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ರಾಜಶೇಖರ ಅವರ ಅಂತ್ಯಕ್ರಿಯೆ ಸೊನ್ನ ಹಾಗೂ ಶಿವಕುಮಾರ ಗುಡ್ಡಡಗಿ ಅವರ ಅಂತ್ಯಕ್ರಿಯೆ ಕಣ್ಣಿ ಗ್ರಾಮದಲ್ಲಿ ನೆರವೇರಿತು. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>