‘ವಿಶ್ವವಿದ್ಯಾಲಯದವರು ಪೂರಕ ಪರೀಕ್ಷೆ ಬರೆಯಿರಿ ಎಂದು ಹೇಳುತ್ತಾರೆ. ನಮ್ಮದಲ್ಲದ ತಪ್ಪಿಗೆ ಮತ್ತೆ ಶುಲ್ಕ ಕಟ್ಟಿ ಪರೀಕ್ಷೆ ಬರೆಯಬೇಕು. ಮತ್ತೆ ಹಳೆ ವಿಷಯಗಳನ್ನು ಓದಬೇಕು. ಅಲ್ಲದೆ, ಅಂಕಪಟ್ಟಿಯಲ್ಲಿ ರಿಪೀಟರ್ ಎಂದು ನಮೂದಿಸಲಾಗುತ್ತದೆ. ಇದರಿಂದ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ಬರುವುದಿಲ್ಲ’ ಎಂದು ವಿದ್ಯಾರ್ಥಿಯೊಬ್ಬರು ಅಳಲು ತೋಡಿಕೊಂಡರು.