<p><strong>ಸೇಡಂ:</strong> ‘ಜೆಜೆಎಂ ಯೋಜನೆ ಅನುಷ್ಠಾನಕ್ಕಾಗಿ ಕೋಟಿಗಟ್ಟಲೇ ಹಣ ಹಣ ಖರ್ಚಾಗುತ್ತಿದೆ. ದಾಖಲೆಗಳಲ್ಲಿ ಮಾತ್ರ ಕೆಲಸ ಪೂರ್ಣಗೊಂಡಿದೆ. ಆದರೆ ವಾಸ್ತವದಲ್ಲಿ ಜನರಿಗೆ ನೀರು ತಲುಪುತ್ತಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರಿಗೆ ನೀರು ಕುಡಿಸುವ ಕೆಲಸ ಮಾಡಿ’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. </p>.<p>‘ತಾಲ್ಲೂಕಿನಲ್ಲಿ ನಡೆಯುತ್ತಿರುವ ಪ್ರತಿಯೊಂದು ಜೆಜೆಎಂ ಕಾಮಗಾರಿಗಳ ವಸ್ತುಸ್ಥಿತಿಯ ಮಾಹಿತಿಯ ವರದಿ ಸಲ್ಲಿಸಬೇಕು. ಅಧಿಕಾರಿಗಳು ಬೋಗಸ್ ಬಿಲ್ ಮಾಡಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದೀರಿ. ಇಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದರು.</p>.<p>‘ತೋಟಗಾರಿಕೆ ಇಲಾಖೆಯಲ್ಲಿ ಬೋಗಸ್ ಬಿಲ್ ಮಾಡಿರುವ ಕುರಿತು ಅನೇಕ ದೂರುಗಳಿವೆ. ಈ ಕುರಿತು ಪರಿಶೀಲನೆ ನಡೆಸಬೇಕಾದ ಮೇಲಾಧಿಕಾರಿಗಳು ಕೂಡ ಇದನ್ನು ನಿರ್ಲಕ್ಷ್ಯ ವಹಿಸಿರುವುದು ಮೇಲ್ನೊಟಕ್ಕೆ ಕಂಡು ಬಂದಿದ್ದು ಇದರ ಕುರಿತು ಸಂಪೂರ್ಣ ತನಿಖೆಯಾಗಬೇಕು’ ಎಂದರು. </p>.<p>‘ತಾಲ್ಲೂಕಿನಲ್ಲಿ ರೈತರಿಗೆ ಹೆಚ್ಚು ಬೆಲೆಯಲ್ಲಿ ರಸಗೊಬ್ಬರ ಮಾರುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿವೆ. ಹೀಗಾಗಿ ಹೆಚ್ಚು ಬೆಲೆಗೆ ಮಾರುವ ಔಷಧ ಅಂಗಡಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಕೃಷಿ ನಿರ್ದೇಶಕ ವೈ.ಎಲ್ ಹಂಪಣ್ಣ, ‘ಈಗಾಗಲೇ ಎರಡು ಅಂಗಡಿಗಳ ಪರವಾನಗಿ ರದ್ದುಗೊಳಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡುವ 18 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ ಎಂದರು.</p>.<p>‘ಸಿಡಿಪಿಓ ಇಲಾಖೆಯಲ್ಲಿನ ಅಂಗನವಾಡಿ ಕಟ್ಟಡಗಳಲ್ಲಿರುವ ಮಕ್ಕಳ ಪೌಷ್ಟಿಕ ಆಹಾರ ವಿತರಣೆ ಸಮರ್ಪಕವಾಗಿ ಮಾಡಬೇಕು. ಇದರ ಕುರಿತು ವಿಶೇಷವಾಗಿ ಗಮನ ಹರಿಸಬೇಕು’ ಎಂದು ಸೂಚಿಸಿದರು. </p>.<p>‘ಸೇಡಂ ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕಾಗಿ ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳಬೇಕು. ಮುಂದಿನ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶ ಪ್ರತಿಶತವಾಗಿರಬೇಕು. ಕಡಿಮೆ ಬಂದರೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರೇ ಜವಾಬ್ದಾರರಾಗುತ್ತಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಅವರಿಗೆ ಸೂಚನೆ ನೀಡಿದರು. </p>.<p>ಗ್ರಾಮೀಣ ಕುಡಿಯುವ ನೀರು, ಲೋಕೋಪಯೋಗಿ ಇಲಾಖೆ, ಬಿಸಿಎಂ ಇಲಾಖೆ, ಸಣ್ಣನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. </p>.<p>ಸಭೆಯಲ್ಲಿ ಉಪವಿಭಾಗಾಧಿಕಾರಿ ಆಶಪ್ಪ ಪೂಜಾರಿ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ತಾ.ಪಂ ಇ.ಒ ಚನ್ನಪ್ಪ ರಾಯಣ್ಣನವರ್, ಡಿಎಸ್ಪಿ ಸಂಗಮನಾಥ ಹಿರೇಮಠ ಇದ್ದರು.<br><br></p>.<p><strong>ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರು ಇರಲಿ’</strong></p><p> ‘ತಾಲ್ಲೂಕಿನ ಪ್ರತಿಯೊಂದು ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳನ್ನು ಚೆನ್ನಾಗಿ ನೋಡಬೇಕು. ರಾತ್ರಿ ಆಸ್ಪತ್ರೆಯಲ್ಲಿ ವೈದ್ಯರು ಕಡ್ಡಾಯವಾಗಿ ಇರಬೇಕು. ಯಾವುದೇ ಕಾರಣಕ್ಕೂ ಆಸ್ಪತ್ರೆಯ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ಪಾಟೀಲ ಅವರಿಗೆ ಸಚಿವ ಡಾ. ಶರಣಪ್ರಕಾಶ ಸೂಚಿಸಿದರು. ‘ಚಿಂಚೋಳಿ ತಾಲ್ಲೂಕು ಸುಲೇಪೇಟ ಆಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ ಎಂಬ ದೂರುಗಳಿವೆ. ಆರೋಗ್ಯಾಧಿಕಾರಿ ವೈದ್ಯರನ್ನು ನಿಯುಕ್ತಿಗೊಳಿಸಬೇಕು’ ಎಂದು ಚಿಂಚೋಳಿ ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ:</strong> ‘ಜೆಜೆಎಂ ಯೋಜನೆ ಅನುಷ್ಠಾನಕ್ಕಾಗಿ ಕೋಟಿಗಟ್ಟಲೇ ಹಣ ಹಣ ಖರ್ಚಾಗುತ್ತಿದೆ. ದಾಖಲೆಗಳಲ್ಲಿ ಮಾತ್ರ ಕೆಲಸ ಪೂರ್ಣಗೊಂಡಿದೆ. ಆದರೆ ವಾಸ್ತವದಲ್ಲಿ ಜನರಿಗೆ ನೀರು ತಲುಪುತ್ತಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರಿಗೆ ನೀರು ಕುಡಿಸುವ ಕೆಲಸ ಮಾಡಿ’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. </p>.<p>‘ತಾಲ್ಲೂಕಿನಲ್ಲಿ ನಡೆಯುತ್ತಿರುವ ಪ್ರತಿಯೊಂದು ಜೆಜೆಎಂ ಕಾಮಗಾರಿಗಳ ವಸ್ತುಸ್ಥಿತಿಯ ಮಾಹಿತಿಯ ವರದಿ ಸಲ್ಲಿಸಬೇಕು. ಅಧಿಕಾರಿಗಳು ಬೋಗಸ್ ಬಿಲ್ ಮಾಡಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದೀರಿ. ಇಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದರು.</p>.<p>‘ತೋಟಗಾರಿಕೆ ಇಲಾಖೆಯಲ್ಲಿ ಬೋಗಸ್ ಬಿಲ್ ಮಾಡಿರುವ ಕುರಿತು ಅನೇಕ ದೂರುಗಳಿವೆ. ಈ ಕುರಿತು ಪರಿಶೀಲನೆ ನಡೆಸಬೇಕಾದ ಮೇಲಾಧಿಕಾರಿಗಳು ಕೂಡ ಇದನ್ನು ನಿರ್ಲಕ್ಷ್ಯ ವಹಿಸಿರುವುದು ಮೇಲ್ನೊಟಕ್ಕೆ ಕಂಡು ಬಂದಿದ್ದು ಇದರ ಕುರಿತು ಸಂಪೂರ್ಣ ತನಿಖೆಯಾಗಬೇಕು’ ಎಂದರು. </p>.<p>‘ತಾಲ್ಲೂಕಿನಲ್ಲಿ ರೈತರಿಗೆ ಹೆಚ್ಚು ಬೆಲೆಯಲ್ಲಿ ರಸಗೊಬ್ಬರ ಮಾರುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿವೆ. ಹೀಗಾಗಿ ಹೆಚ್ಚು ಬೆಲೆಗೆ ಮಾರುವ ಔಷಧ ಅಂಗಡಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಕೃಷಿ ನಿರ್ದೇಶಕ ವೈ.ಎಲ್ ಹಂಪಣ್ಣ, ‘ಈಗಾಗಲೇ ಎರಡು ಅಂಗಡಿಗಳ ಪರವಾನಗಿ ರದ್ದುಗೊಳಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡುವ 18 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ ಎಂದರು.</p>.<p>‘ಸಿಡಿಪಿಓ ಇಲಾಖೆಯಲ್ಲಿನ ಅಂಗನವಾಡಿ ಕಟ್ಟಡಗಳಲ್ಲಿರುವ ಮಕ್ಕಳ ಪೌಷ್ಟಿಕ ಆಹಾರ ವಿತರಣೆ ಸಮರ್ಪಕವಾಗಿ ಮಾಡಬೇಕು. ಇದರ ಕುರಿತು ವಿಶೇಷವಾಗಿ ಗಮನ ಹರಿಸಬೇಕು’ ಎಂದು ಸೂಚಿಸಿದರು. </p>.<p>‘ಸೇಡಂ ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕಾಗಿ ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳಬೇಕು. ಮುಂದಿನ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶ ಪ್ರತಿಶತವಾಗಿರಬೇಕು. ಕಡಿಮೆ ಬಂದರೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರೇ ಜವಾಬ್ದಾರರಾಗುತ್ತಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಅವರಿಗೆ ಸೂಚನೆ ನೀಡಿದರು. </p>.<p>ಗ್ರಾಮೀಣ ಕುಡಿಯುವ ನೀರು, ಲೋಕೋಪಯೋಗಿ ಇಲಾಖೆ, ಬಿಸಿಎಂ ಇಲಾಖೆ, ಸಣ್ಣನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. </p>.<p>ಸಭೆಯಲ್ಲಿ ಉಪವಿಭಾಗಾಧಿಕಾರಿ ಆಶಪ್ಪ ಪೂಜಾರಿ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ತಾ.ಪಂ ಇ.ಒ ಚನ್ನಪ್ಪ ರಾಯಣ್ಣನವರ್, ಡಿಎಸ್ಪಿ ಸಂಗಮನಾಥ ಹಿರೇಮಠ ಇದ್ದರು.<br><br></p>.<p><strong>ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರು ಇರಲಿ’</strong></p><p> ‘ತಾಲ್ಲೂಕಿನ ಪ್ರತಿಯೊಂದು ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳನ್ನು ಚೆನ್ನಾಗಿ ನೋಡಬೇಕು. ರಾತ್ರಿ ಆಸ್ಪತ್ರೆಯಲ್ಲಿ ವೈದ್ಯರು ಕಡ್ಡಾಯವಾಗಿ ಇರಬೇಕು. ಯಾವುದೇ ಕಾರಣಕ್ಕೂ ಆಸ್ಪತ್ರೆಯ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ಪಾಟೀಲ ಅವರಿಗೆ ಸಚಿವ ಡಾ. ಶರಣಪ್ರಕಾಶ ಸೂಚಿಸಿದರು. ‘ಚಿಂಚೋಳಿ ತಾಲ್ಲೂಕು ಸುಲೇಪೇಟ ಆಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ ಎಂಬ ದೂರುಗಳಿವೆ. ಆರೋಗ್ಯಾಧಿಕಾರಿ ವೈದ್ಯರನ್ನು ನಿಯುಕ್ತಿಗೊಳಿಸಬೇಕು’ ಎಂದು ಚಿಂಚೋಳಿ ತಾಲ್ಲೂಕು ಆರೋಗ್ಯಾಧಿಕಾರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>