<p><strong>ಕಲಬುರಗಿ:</strong> ನಗರದ ಬ್ರಹ್ಮಪುರದ ಭೂಮಿಯನ್ನು ಪೋಡಿ ಮಾಡಿಕೊಡಲು ₹3.5 ಲಕ್ಷಕ್ಕೆ ಬೇಡಿಕೆ ಇಟ್ಟು ₹ 1.5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಜಿಲ್ಲಾ ಭೂದಾಖಲೆಗಳ ಇಲಾಖೆ ಉಪನಿರ್ದೇಶಕ (ಡಿಡಿಎಲ್ಆರ್) ಪ್ರವೀಣ ಜಾಧವ್ ಹಾಗೂ ಸರ್ವೇಯರ್ ಶರಣಗೌಡ ಅವರನ್ನು ಸೋಮವಾರ ಬಂಧಿಸಿದ್ದಾರೆ.</p><p>ಪ್ರವೀಣ ಜಾಧವ್ ಅವರು ಕೆಳಹಂತದ ಅಧಿಕಾರಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರಲ್ಲದೇ ಪ್ರತಿ ಕಡತಕ್ಕೆ ಸಹಿ ಹಾಕಲು ಇಂತಿಷ್ಟು ಹಣ ನೀಡಬೇಕು ಎಂದು ತಾಕೀತು ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. </p><p>ನಗರದಲ್ಲಿನ ಬ್ರಹ್ಮಪೂರ ಸರ್ವೆ ನಂ 89/4ನ 12.7 ಎಕರೆ ಭೂಮಿಯ ಪೈಕಿ 25 ಗುಂಟೆ ಜಮೀನನ್ನು ಪೋಡಿ ಮಾಡಲು ₹ 3.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ₹ 1.5 ಲಕ್ಷ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಡಿವೈಎಸ್ಪಿ ಗೀತಾ ಬೇನಾಳ, ಪಿಐ ರಾಜಶೇಖರ ಹಳಗೋದಿ, ಪ್ರದೀಪ್ ಅವರು ಇಬ್ಬರನ್ನೂ ಬಂಧಿಸಿದರು.</p><p>ಡಿಡಿಎಲ್ಆರ್ ಪ್ರವೀಣ ಜಾಧವ್ ಹಾಗೂ ಶರಣಗೌಡ ಕೆಳ ಹಂತದ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದರು. ಅಮಾನತು ಮಾಡುವುದಾಗಿ ಹೆದರಿಸುತ್ತಿದ್ದರು ಎಂದು ಭೂಮಾಪಕ ರೇವಣಸಿದ್ದ ಮೂಲಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಬ್ರಹ್ಮಪುರದ ಭೂಮಿಯನ್ನು ಪೋಡಿ ಮಾಡಿಕೊಡಲು ₹3.5 ಲಕ್ಷಕ್ಕೆ ಬೇಡಿಕೆ ಇಟ್ಟು ₹ 1.5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಜಿಲ್ಲಾ ಭೂದಾಖಲೆಗಳ ಇಲಾಖೆ ಉಪನಿರ್ದೇಶಕ (ಡಿಡಿಎಲ್ಆರ್) ಪ್ರವೀಣ ಜಾಧವ್ ಹಾಗೂ ಸರ್ವೇಯರ್ ಶರಣಗೌಡ ಅವರನ್ನು ಸೋಮವಾರ ಬಂಧಿಸಿದ್ದಾರೆ.</p><p>ಪ್ರವೀಣ ಜಾಧವ್ ಅವರು ಕೆಳಹಂತದ ಅಧಿಕಾರಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರಲ್ಲದೇ ಪ್ರತಿ ಕಡತಕ್ಕೆ ಸಹಿ ಹಾಕಲು ಇಂತಿಷ್ಟು ಹಣ ನೀಡಬೇಕು ಎಂದು ತಾಕೀತು ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. </p><p>ನಗರದಲ್ಲಿನ ಬ್ರಹ್ಮಪೂರ ಸರ್ವೆ ನಂ 89/4ನ 12.7 ಎಕರೆ ಭೂಮಿಯ ಪೈಕಿ 25 ಗುಂಟೆ ಜಮೀನನ್ನು ಪೋಡಿ ಮಾಡಲು ₹ 3.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ₹ 1.5 ಲಕ್ಷ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಡಿವೈಎಸ್ಪಿ ಗೀತಾ ಬೇನಾಳ, ಪಿಐ ರಾಜಶೇಖರ ಹಳಗೋದಿ, ಪ್ರದೀಪ್ ಅವರು ಇಬ್ಬರನ್ನೂ ಬಂಧಿಸಿದರು.</p><p>ಡಿಡಿಎಲ್ಆರ್ ಪ್ರವೀಣ ಜಾಧವ್ ಹಾಗೂ ಶರಣಗೌಡ ಕೆಳ ಹಂತದ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದರು. ಅಮಾನತು ಮಾಡುವುದಾಗಿ ಹೆದರಿಸುತ್ತಿದ್ದರು ಎಂದು ಭೂಮಾಪಕ ರೇವಣಸಿದ್ದ ಮೂಲಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>