<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ):</strong> ಕಳೆದ ಗುರುವಾರ ಅಲ್ಲೂರ್ (ಕೆ) ಗ್ರಾಮದಲ್ಲಿ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ ಗಂಡ ಶನಿವಾರ ನೇಣಿಗೆ ಶರಣಾಗಿದ್ದಾನೆ.</p><p>ಅಲ್ಲೂರ್ (ಬಿ) ಗ್ರಾಮದ ಬಸವರಾಜ ಹಂಪಯ್ಯ (40) ಎಂಬುವವರೇ ಮನೆಯಲ್ಲಿ ನೇಣು ಬಿಗಿದುಕೊಂಡ ಸಾವಿಗೆ ಶರಣಾಗಿರುವ ವ್ಯಕ್ತಿ.</p><p>ತನ್ನ ಪತ್ನಿ ಹಣಮವ್ವ (35) ಅವರನ್ನು ಗುರುವಾರ ಅಲ್ಲೂರ್ (ಕೆ) ಗ್ರಾಮದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿ ತಲೆಮರೆಸಿಕೊಂಡಿದ್ದ.</p><p>ಬಸವರಾಜನ ಪತ್ತೆಗೆ ಚಿತ್ತಾಪುರ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. </p><p>ಶನಿವಾರ ರಾತ್ರಿ ಬಸವರಾಜನ ಮನೆಯಿಂದ ದುರ್ವಾಸನೆ ಹರಡುತ್ತಿರುವುದು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಭೇಟಿ ನೀಡಿದಾಗ ಬಸವರಾಜ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.</p><p>ಸ್ಥಳಕ್ಕೆ ಸಿಪಿಐ ಪ್ರಕಾಶ ಯಾತನೂರು, ಪಿಎಸ್ಐ ಶ್ರೀಶೈಲ್ ಅಂಬಾಟಿ ಪರಿಶೀಲಿಸಿದರು.</p><p>ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ):</strong> ಕಳೆದ ಗುರುವಾರ ಅಲ್ಲೂರ್ (ಕೆ) ಗ್ರಾಮದಲ್ಲಿ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ ಗಂಡ ಶನಿವಾರ ನೇಣಿಗೆ ಶರಣಾಗಿದ್ದಾನೆ.</p><p>ಅಲ್ಲೂರ್ (ಬಿ) ಗ್ರಾಮದ ಬಸವರಾಜ ಹಂಪಯ್ಯ (40) ಎಂಬುವವರೇ ಮನೆಯಲ್ಲಿ ನೇಣು ಬಿಗಿದುಕೊಂಡ ಸಾವಿಗೆ ಶರಣಾಗಿರುವ ವ್ಯಕ್ತಿ.</p><p>ತನ್ನ ಪತ್ನಿ ಹಣಮವ್ವ (35) ಅವರನ್ನು ಗುರುವಾರ ಅಲ್ಲೂರ್ (ಕೆ) ಗ್ರಾಮದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿ ತಲೆಮರೆಸಿಕೊಂಡಿದ್ದ.</p><p>ಬಸವರಾಜನ ಪತ್ತೆಗೆ ಚಿತ್ತಾಪುರ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. </p><p>ಶನಿವಾರ ರಾತ್ರಿ ಬಸವರಾಜನ ಮನೆಯಿಂದ ದುರ್ವಾಸನೆ ಹರಡುತ್ತಿರುವುದು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಭೇಟಿ ನೀಡಿದಾಗ ಬಸವರಾಜ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.</p><p>ಸ್ಥಳಕ್ಕೆ ಸಿಪಿಐ ಪ್ರಕಾಶ ಯಾತನೂರು, ಪಿಎಸ್ಐ ಶ್ರೀಶೈಲ್ ಅಂಬಾಟಿ ಪರಿಶೀಲಿಸಿದರು.</p><p>ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>