<p><strong>ಚಿತ್ತಾಪುರ</strong>: ಪುರಸಭೆ ವ್ಯಾಪ್ತಿಯ ವಾರ್ಡ್ 9ರಲ್ಲಿನ ನಾಗಾವಿ ಚೌಕ್ ಹತ್ತಿರ ನಾಯಿಯೊಂದು ಕಚ್ಚಿದ್ದರಿಂದ ಗಾಯಗೊಂಡಿದ್ದ ಮೂವರು ಸಂತ್ರಸ್ತರಿಗೆ ಪುರಸಭೆಯಿಂದ ತಲಾ ₹5 ಸಾವಿರ ಮೊತ್ತದ ಚೆಕ್ ಅನ್ನು ಪುರಸಭೆ ಮುಖ್ಯಾಧಿಕಾರಿ ಸಂಜೀವ ಮಾಂಗ ಬುಧವಾರ ವಿತರಣೆ ಮಾಡಿದರು.</p>.<p>ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡು ಚಿಕಿತ್ಸೆ ಪಡೆದುಕೊಂಡು ಗುಣಮುಖರಾದ ಚೇತನಕುಮಾರ ಹಣಮಂತ, ಅಂಬರೀಶ ಈರಪ್ಪ, ಮಾಣಿಕಮ್ಮ ಭೀಮಣ್ಣ ಅವರಿಗೆ ತಲಾ ₹5 ಸಾವಿರ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.</p>.<p>‘ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಹಾಗೂ ಕಡಿತದ ದೂರು ಕೇಳಿ ಬಂದಿವೆ. ನಾಯಿ ಹಾವಳಿಗೆ ಕಡಿವಾಣ ಹಾಕಲು ಪಶು ಇಲಾಖೆಯ ಅಧಿಕಾರಿಯೊಂದಿಗೆ ಸಮಾಲೋಚನೆ ನಡೆಸಲಾಗುವುದು. ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸೆಗೆಂದು ಪಶು ಇಲಾಖೆಯಿಂದ ₹30 ಲಕ್ಷ ವೆಚ್ಚದ ಅಂದಾಜು ಪಟ್ಟಿ ಸಲ್ಲಿಸಲಾಗಿದೆ. ಈ ಕುರಿತು ಮೇಲಧಿಕಾರಿಗೆ ಪತ್ರ ಬರೆದು ಅನುದಾನದ ವ್ಯವಸ್ಥೆಗೆ ಮನವಿ ಮಾಡುತ್ತೇವೆ’ ಎಂದು ಮುಖ್ಯಾಧಿಕಾರಿ ಸಂಜೀವ ಮಾಂಗ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ</strong>: ಪುರಸಭೆ ವ್ಯಾಪ್ತಿಯ ವಾರ್ಡ್ 9ರಲ್ಲಿನ ನಾಗಾವಿ ಚೌಕ್ ಹತ್ತಿರ ನಾಯಿಯೊಂದು ಕಚ್ಚಿದ್ದರಿಂದ ಗಾಯಗೊಂಡಿದ್ದ ಮೂವರು ಸಂತ್ರಸ್ತರಿಗೆ ಪುರಸಭೆಯಿಂದ ತಲಾ ₹5 ಸಾವಿರ ಮೊತ್ತದ ಚೆಕ್ ಅನ್ನು ಪುರಸಭೆ ಮುಖ್ಯಾಧಿಕಾರಿ ಸಂಜೀವ ಮಾಂಗ ಬುಧವಾರ ವಿತರಣೆ ಮಾಡಿದರು.</p>.<p>ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡು ಚಿಕಿತ್ಸೆ ಪಡೆದುಕೊಂಡು ಗುಣಮುಖರಾದ ಚೇತನಕುಮಾರ ಹಣಮಂತ, ಅಂಬರೀಶ ಈರಪ್ಪ, ಮಾಣಿಕಮ್ಮ ಭೀಮಣ್ಣ ಅವರಿಗೆ ತಲಾ ₹5 ಸಾವಿರ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.</p>.<p>‘ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಹಾಗೂ ಕಡಿತದ ದೂರು ಕೇಳಿ ಬಂದಿವೆ. ನಾಯಿ ಹಾವಳಿಗೆ ಕಡಿವಾಣ ಹಾಕಲು ಪಶು ಇಲಾಖೆಯ ಅಧಿಕಾರಿಯೊಂದಿಗೆ ಸಮಾಲೋಚನೆ ನಡೆಸಲಾಗುವುದು. ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸೆಗೆಂದು ಪಶು ಇಲಾಖೆಯಿಂದ ₹30 ಲಕ್ಷ ವೆಚ್ಚದ ಅಂದಾಜು ಪಟ್ಟಿ ಸಲ್ಲಿಸಲಾಗಿದೆ. ಈ ಕುರಿತು ಮೇಲಧಿಕಾರಿಗೆ ಪತ್ರ ಬರೆದು ಅನುದಾನದ ವ್ಯವಸ್ಥೆಗೆ ಮನವಿ ಮಾಡುತ್ತೇವೆ’ ಎಂದು ಮುಖ್ಯಾಧಿಕಾರಿ ಸಂಜೀವ ಮಾಂಗ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>