<p><strong>ಕಲಬುರಗಿ</strong>: ‘ಯುವ ಪೀಳಿಗೆಗೆ ಸಂಸ್ಕಾರ ಬಹಳ ಅವಶ್ಯಕವಾಗಿದೆ. ಮನುಷ್ಯ ಮನುಷ್ಯತ್ವದಿಂದ ಬದುಕಬೇಕಾದರೆ ಆಧ್ಯಾತ್ಮಿಕ ಪ್ರವಚನವನ್ನು ಆಲಿಸಬೇಕು. ಸಂಸ್ಕಾರ ನೀಡುವಲ್ಲಿ ಪುರಾಣ ಪ್ರವಚನಗಳ ಪಾತ್ರ ಬಹು ದೊಡ್ಡದು’ ಎಂದು ಚಿಣಮಗೇರಾ ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರು ನುಡಿದರು.</p>.<p>ಜಿಲ್ಲೆಯ ಕಮಲಾಪುರ ತಾಲ್ಲೂಕಿನ ವಿಕೆ ಸಲಗರ ಗ್ರಾಮದ ಮಹಾಂತೇಶ್ವರ ಮಠದಲ್ಲಿ ಶ್ರಾವಣ ಮಾಸ ಮುಕ್ತಾಯ ಅಂಗವಾಗಿ ಹಮ್ಮಿಕೊಂಡಿದ್ದ ಕಡಕೋಳ ಮಡಿವಾಳೇಶ್ವರ ಪುರಾಣ ಮಹಾಮಂಗಲೋತ್ಸವ ಹಾಗೂ ಪುಸ್ತಕ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ನರೋಣಾದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ‘ಗುರು– ಶಿಷ್ಯರ ಸಂಬಂಧ ಬಹಳ ಪುರಾತನವಾದದ್ದು. ಮಹಾಂತ ಮತ್ತು ಕಡಕೋಳದ ಮಡಿವಾಳಪ್ಪ ಗುರು ಶಿಷ್ಯರು ಈ ಜಗತ್ತಿಗೆ ಅದ್ಭುತವಾದ ಸಂದೇಶವನ್ನು ಸಾರಿದ್ದಾರೆ’ ಎಂದರು.</p>.<p>ಪ್ರವಚನಕಾರ ಸುಂಟನೂರ ಸಂಸ್ಥಾನ ಹಿರೇಮಠದ ಬಂಡಯ್ಯ ಶಾಸ್ತ್ರಿ ಮಾತನಾಡಿ, ‘ಕಲ್ಯಾಣ ಕರ್ನಾಟಕದ ತತ್ವಪದ ಹರಿಕಾರ 18ನೇ ಶತಮಾನದ ಕೊನೆಯ ಭಾಗದಲ್ಲಿ ಬದುಕಿದ ಕಡಕೋಳದ ಮಡಿವಾಳಪ್ಪನವರು ತಮ್ಮ ತತ್ವಪದಗಳ ಮುಖಾಂತರ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ಸಾಹಿತಿಗಳಾದ ಕರುಣದೇವ ಸಲಗರ, ಕಲಾವಿದ ಸಂತೋಷಕುಮಾರ ಸಿಂದಗಿ, ತಬಲಾ ವಾದಕ ವೀರೇಶ ಹಿರೇಜೇವರ್ಗಿ, ಮಹಾಂತೇಶ್ವರ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಯುವ ಪೀಳಿಗೆಗೆ ಸಂಸ್ಕಾರ ಬಹಳ ಅವಶ್ಯಕವಾಗಿದೆ. ಮನುಷ್ಯ ಮನುಷ್ಯತ್ವದಿಂದ ಬದುಕಬೇಕಾದರೆ ಆಧ್ಯಾತ್ಮಿಕ ಪ್ರವಚನವನ್ನು ಆಲಿಸಬೇಕು. ಸಂಸ್ಕಾರ ನೀಡುವಲ್ಲಿ ಪುರಾಣ ಪ್ರವಚನಗಳ ಪಾತ್ರ ಬಹು ದೊಡ್ಡದು’ ಎಂದು ಚಿಣಮಗೇರಾ ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರು ನುಡಿದರು.</p>.<p>ಜಿಲ್ಲೆಯ ಕಮಲಾಪುರ ತಾಲ್ಲೂಕಿನ ವಿಕೆ ಸಲಗರ ಗ್ರಾಮದ ಮಹಾಂತೇಶ್ವರ ಮಠದಲ್ಲಿ ಶ್ರಾವಣ ಮಾಸ ಮುಕ್ತಾಯ ಅಂಗವಾಗಿ ಹಮ್ಮಿಕೊಂಡಿದ್ದ ಕಡಕೋಳ ಮಡಿವಾಳೇಶ್ವರ ಪುರಾಣ ಮಹಾಮಂಗಲೋತ್ಸವ ಹಾಗೂ ಪುಸ್ತಕ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ನರೋಣಾದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ‘ಗುರು– ಶಿಷ್ಯರ ಸಂಬಂಧ ಬಹಳ ಪುರಾತನವಾದದ್ದು. ಮಹಾಂತ ಮತ್ತು ಕಡಕೋಳದ ಮಡಿವಾಳಪ್ಪ ಗುರು ಶಿಷ್ಯರು ಈ ಜಗತ್ತಿಗೆ ಅದ್ಭುತವಾದ ಸಂದೇಶವನ್ನು ಸಾರಿದ್ದಾರೆ’ ಎಂದರು.</p>.<p>ಪ್ರವಚನಕಾರ ಸುಂಟನೂರ ಸಂಸ್ಥಾನ ಹಿರೇಮಠದ ಬಂಡಯ್ಯ ಶಾಸ್ತ್ರಿ ಮಾತನಾಡಿ, ‘ಕಲ್ಯಾಣ ಕರ್ನಾಟಕದ ತತ್ವಪದ ಹರಿಕಾರ 18ನೇ ಶತಮಾನದ ಕೊನೆಯ ಭಾಗದಲ್ಲಿ ಬದುಕಿದ ಕಡಕೋಳದ ಮಡಿವಾಳಪ್ಪನವರು ತಮ್ಮ ತತ್ವಪದಗಳ ಮುಖಾಂತರ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ಸಾಹಿತಿಗಳಾದ ಕರುಣದೇವ ಸಲಗರ, ಕಲಾವಿದ ಸಂತೋಷಕುಮಾರ ಸಿಂದಗಿ, ತಬಲಾ ವಾದಕ ವೀರೇಶ ಹಿರೇಜೇವರ್ಗಿ, ಮಹಾಂತೇಶ್ವರ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>