<p><strong>ಅಫಜಲಪುರ</strong>: ತಾಲ್ಲೂಕಿನ ದೊಡ್ಡ ಗ್ರಾಮ ಪಂಚಾಯಿತಿ ಗ್ರಾಮ ಮಾಶಾಳಕ್ಕೆ ₹19 ಲಕ್ಷದಂತೆ ಶುದ್ಧ ಕುಡಿಯುವ ನೀರಿನ 4 ಘಟಕವನ್ನು ಮಂಜೂರು ಮಾಡಲಾಗಿತ್ತು. ಹಿರಿಯಾಳ ಬ್ಯಾರೇಜ್ ಮತ್ತು ಉಡಚಾಣ ಗ್ರಾಮದಿಂದ ಸುಮಾರು ₹7 ಕೋಟಿ ವೆಚ್ಚದಲ್ಲಿ ಮಾಶಾಳ ಗ್ರಾಮಕ್ಕೆ ಕುಡಿಯುವ ನೀರಿನ ಕಾಮಗಾರಿ ಮಾಡಲಾಗಿತ್ತು. ಈ ಎಡರಡೂ ಯೋಜನೆಗಳು ನಿರ್ವಹಣೆ ಇಲ್ಲದೆ ಹಾಳಾಗಿ ಹೋಗಿವೆ. </p><p> ಭಾನುವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಯ ಇಲಾಖೆಯ ಉಪ ವಿಭಾಗದ ವತಿಯಿಂದ ನಡೆಯುವ ₹4 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಶಾಸಕ ಎಂ.ವೈ.ಪಾಟೀಲ ಅಡಿಗಲ್ಲು ನೆರವೇರಿಸಲಿದ್ದಾರೆ.</p><p>ಮಾಶಾಳ ಗ್ರಾಮದ ಬಾಳು ತಾಂಡಾ, ಮಾಶಾಳ ವಾಡಿ ಪರಿಶಿಷ್ಟ ಓಣಿಯಲ್ಲಿ ಮತ್ತು ಪರಿಶಿಷ್ಟ ದೇವಸ್ಥಾನದ ಹತ್ತಿರ 4 ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಾಗಿದೆ. ಇದರಲ್ಲಿ ಬಸವೇಶ್ವರ ದೇವಸ್ಥಾನದ ಹತ್ತಿರದ ಘಟಕಗಳ ಯಂತ್ರಗಳು ಕಳುವಾಗಿವೆ, ವಿವಿಧ ಯೋಜನೆಯಡಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಲ್ಲಿ ಪ್ಲೊರೈಡ್ ಅಂಶ ಇರುವದರಿಂದ ಜನರಿಗೆ ಕಿಡ್ನಿ ಸಮಸ್ಯೆ, ಮೊಳಕಾಲು ಸಮಸ್ಯೆ ಬರುತ್ತಿವೆ ಎಂದು ಗ್ರಾಮಸ್ಥರು ಹೇಳುತ್ತಾರೆ.</p><p>‘ಶುದ್ಧ ಕುಡಿಯುವ ನೀರಿನ ಘಟಕಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಿ ಜನರಿಗೆ ಉಪಯೋಗವಾಗುವಂತೆ ಮಾಡಲಾಗುವುದು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಗಿರೀಶ ತಿಳಿಸಿದರು.</p><p>‘ಜನಪ್ರತಿನಿಧಿಗಳು ಅನುದಾನ ನೀಡಿದ ಮೇಲೆ ಅದು ಯಾವ ರೀತಿ ಬಳಕೆಯಾಗಿದೆ ಎಂಬುದನ್ನು ನೋಡಬೇಕು. ಅಂದಾಗ ಮಾತ್ರ ಯೋಜನೆ ಫಲಕಾರಿಯಾಗುತ್ತದೆ’ ಎನ್ನುತ್ತಾರೆ ಗ್ರಾಮಸ್ಥರು. </p>.<p><strong>ಕೆಡಿಪಿ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಮಾಡುವಂತೆ ಸೂಚಿಸಲಾಗಿದೆ. ಮತ್ತೊಮ್ಮೆ ಸಭೆ ಕರೆದಾಗ ವಿಚಾರಣೆ ಮಾಡಿ ಸೂಕ್ತ ಕ್ರಮ ಜರುಗಿಸಲಾಗುವುದು </strong></p><p><strong>-ಎಂ.ವೈ.ಪಾಟೀಲ ಶಾಸಕ</strong></p>.<p><strong>ಮಳೆಗಾಲ ಆರಂಭವಾಗಿದೆ ಜನರಿಗೆ ನೀರಿನಿಂದ ಹೆಚ್ಚಿನ ಕಾಯಿಲೆಗಳು ಬರುತ್ತವೆ. ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಬೇಕು </strong></p><p><strong>-ಶಿವು ಪ್ಯಾಟಿ ಮಾಶಾಳ ಗ್ರಾ.ಪಂ ಸದಸ್ಯ</strong></p>.<p><strong>ಈಗಾಗಲೇ ಮಾಶಾಳ ಗ್ರಾಮದಲ್ಲಿ ನಿರ್ವಹಣೆ ಮತ್ತು ಜಲಮೂಲ ಸಮಸ್ಯೆಯಿಂದ ಕುಡಿಯುವ ನೀರಿನ ಯೋಜನೆಗಳು ಹಾಳಾಗಿವೆ. ಮತ್ತೆ ಜೆಜೆಎಂ ಕಾಮಗಾರಿಗೆ ಅಡಿಗಲ್ಲು ಹಾಕುತ್ತಿರುವುದು ಸ್ವಾಗತ. ಆದರೆ ಅದಕ್ಕೆ ಜಲಮೂಲ ವ್ಯವಸ್ಥೆ ಮಾಡಬೇಕು</strong></p><p><strong>- ಸುರೇಶ ಸಿಂಗೆ ಮುಖಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ</strong>: ತಾಲ್ಲೂಕಿನ ದೊಡ್ಡ ಗ್ರಾಮ ಪಂಚಾಯಿತಿ ಗ್ರಾಮ ಮಾಶಾಳಕ್ಕೆ ₹19 ಲಕ್ಷದಂತೆ ಶುದ್ಧ ಕುಡಿಯುವ ನೀರಿನ 4 ಘಟಕವನ್ನು ಮಂಜೂರು ಮಾಡಲಾಗಿತ್ತು. ಹಿರಿಯಾಳ ಬ್ಯಾರೇಜ್ ಮತ್ತು ಉಡಚಾಣ ಗ್ರಾಮದಿಂದ ಸುಮಾರು ₹7 ಕೋಟಿ ವೆಚ್ಚದಲ್ಲಿ ಮಾಶಾಳ ಗ್ರಾಮಕ್ಕೆ ಕುಡಿಯುವ ನೀರಿನ ಕಾಮಗಾರಿ ಮಾಡಲಾಗಿತ್ತು. ಈ ಎಡರಡೂ ಯೋಜನೆಗಳು ನಿರ್ವಹಣೆ ಇಲ್ಲದೆ ಹಾಳಾಗಿ ಹೋಗಿವೆ. </p><p> ಭಾನುವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಯ ಇಲಾಖೆಯ ಉಪ ವಿಭಾಗದ ವತಿಯಿಂದ ನಡೆಯುವ ₹4 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಶಾಸಕ ಎಂ.ವೈ.ಪಾಟೀಲ ಅಡಿಗಲ್ಲು ನೆರವೇರಿಸಲಿದ್ದಾರೆ.</p><p>ಮಾಶಾಳ ಗ್ರಾಮದ ಬಾಳು ತಾಂಡಾ, ಮಾಶಾಳ ವಾಡಿ ಪರಿಶಿಷ್ಟ ಓಣಿಯಲ್ಲಿ ಮತ್ತು ಪರಿಶಿಷ್ಟ ದೇವಸ್ಥಾನದ ಹತ್ತಿರ 4 ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಾಗಿದೆ. ಇದರಲ್ಲಿ ಬಸವೇಶ್ವರ ದೇವಸ್ಥಾನದ ಹತ್ತಿರದ ಘಟಕಗಳ ಯಂತ್ರಗಳು ಕಳುವಾಗಿವೆ, ವಿವಿಧ ಯೋಜನೆಯಡಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಲ್ಲಿ ಪ್ಲೊರೈಡ್ ಅಂಶ ಇರುವದರಿಂದ ಜನರಿಗೆ ಕಿಡ್ನಿ ಸಮಸ್ಯೆ, ಮೊಳಕಾಲು ಸಮಸ್ಯೆ ಬರುತ್ತಿವೆ ಎಂದು ಗ್ರಾಮಸ್ಥರು ಹೇಳುತ್ತಾರೆ.</p><p>‘ಶುದ್ಧ ಕುಡಿಯುವ ನೀರಿನ ಘಟಕಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಿ ಜನರಿಗೆ ಉಪಯೋಗವಾಗುವಂತೆ ಮಾಡಲಾಗುವುದು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಗಿರೀಶ ತಿಳಿಸಿದರು.</p><p>‘ಜನಪ್ರತಿನಿಧಿಗಳು ಅನುದಾನ ನೀಡಿದ ಮೇಲೆ ಅದು ಯಾವ ರೀತಿ ಬಳಕೆಯಾಗಿದೆ ಎಂಬುದನ್ನು ನೋಡಬೇಕು. ಅಂದಾಗ ಮಾತ್ರ ಯೋಜನೆ ಫಲಕಾರಿಯಾಗುತ್ತದೆ’ ಎನ್ನುತ್ತಾರೆ ಗ್ರಾಮಸ್ಥರು. </p>.<p><strong>ಕೆಡಿಪಿ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಮಾಡುವಂತೆ ಸೂಚಿಸಲಾಗಿದೆ. ಮತ್ತೊಮ್ಮೆ ಸಭೆ ಕರೆದಾಗ ವಿಚಾರಣೆ ಮಾಡಿ ಸೂಕ್ತ ಕ್ರಮ ಜರುಗಿಸಲಾಗುವುದು </strong></p><p><strong>-ಎಂ.ವೈ.ಪಾಟೀಲ ಶಾಸಕ</strong></p>.<p><strong>ಮಳೆಗಾಲ ಆರಂಭವಾಗಿದೆ ಜನರಿಗೆ ನೀರಿನಿಂದ ಹೆಚ್ಚಿನ ಕಾಯಿಲೆಗಳು ಬರುತ್ತವೆ. ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಬೇಕು </strong></p><p><strong>-ಶಿವು ಪ್ಯಾಟಿ ಮಾಶಾಳ ಗ್ರಾ.ಪಂ ಸದಸ್ಯ</strong></p>.<p><strong>ಈಗಾಗಲೇ ಮಾಶಾಳ ಗ್ರಾಮದಲ್ಲಿ ನಿರ್ವಹಣೆ ಮತ್ತು ಜಲಮೂಲ ಸಮಸ್ಯೆಯಿಂದ ಕುಡಿಯುವ ನೀರಿನ ಯೋಜನೆಗಳು ಹಾಳಾಗಿವೆ. ಮತ್ತೆ ಜೆಜೆಎಂ ಕಾಮಗಾರಿಗೆ ಅಡಿಗಲ್ಲು ಹಾಕುತ್ತಿರುವುದು ಸ್ವಾಗತ. ಆದರೆ ಅದಕ್ಕೆ ಜಲಮೂಲ ವ್ಯವಸ್ಥೆ ಮಾಡಬೇಕು</strong></p><p><strong>- ಸುರೇಶ ಸಿಂಗೆ ಮುಖಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>