<p><strong>ಕಲಬುರಗಿ</strong>: ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಶನಿವಾರ ಕಲಬುರಗಿ ಹೈಕೋರ್ಟ್ ಪೀಠವು ರಾಜಿ ಸಂಧಾನದ ಮೂಲಕ ಮೋಟಾರು ವಾಹನ ವಿಮೆ ಮತ್ತು ಸಿವಿಲ್ಗೆ ಸಂಬಂಧಿಸಿದ 520 ಪ್ರಕರಣಗಳನ್ನು ಇತ್ಯರ್ಥಪಡಿಸಿತು.</p>.<p>ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹೈಕೋರ್ಟ್ ಕಾನೂನು ಸೇವಾ ಸಮಿತಿ ವತಿಯಿಂದ ಕಲಬುರಗಿ ಹೈಕೋರ್ಟ್ ಪೀಠದ ಸಭಾಂಗಣದಲ್ಲಿ ಜರುಗಿದ ಲೋಕ ಅದಾಲತ್ನಲ್ಲಿ ನ್ಯಾಯಮೂರ್ತಿಗಳು, ಕಕ್ಷಿದಾರರು, ಸಂಧಾನಕಾರರು ಹಾಗೂ ಸಂಬಂಧಪಟ್ಟ ವಕೀಲರು ರಾಜಿ ಸಂಧಾನದಲ್ಲಿ ಪಾಲ್ಗೊಂಡರು.</p>.<p>ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಹಾಗೂ ನ್ಯಾಯಮೂರ್ತಿ ರಾಜೇಶ್ ರೈ ಕೆ. ಅವರು ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅವರ ವಕೀಲರ ಸಮಕ್ಷಮ ಸಂಧಾನದ ಮೂಲಕ ವಿಲೇವಾರಿ ಮಾಡಿದರು.</p>.<p>ಅದಾಲತ್ನಲ್ಲಿ ಮೋಟಾರು ವಾಹನ ವಿಮೆ, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಸಿವಿಲ್, ಕೆಎಸ್ಆರ್ಟಿಸಿ ಲೇಬರ್ ರಿಟ್ ಪಿಟಿಷನ್ ಸಂಬಂಧಿಸಿದ ಪ್ರಕರಣಗಳು ಸೇರಿ ಒಟ್ಟಾರೆ 520 ಪ್ರಕರಣಗಳು ಇತ್ಯರ್ಥಗೊಂಡು, ₹14,00,71,305 ಪರಿಹಾರ ಮೊತ್ತವನ್ನು ಸಂತ್ರಸ್ತರಿಗೆ ಪಾವತಿಸುವಂತೆ ಆದೇಶಿಸಲಾಯಿತು. 520 ಪ್ರಕರಣಗಳ ಪೈಕಿ 18 ಪ್ರಕರಣಗಳು ಕೆಎಸ್ಆರ್ಟಿಸಿಯ ಲೇಬರ್ ರಿಟ್ ಪಿಟಿಷನ್ಗೆ ಸಂಬಂಧಿಸಿದ್ದವು ಆಗಿದ್ದವು.</p>.<p>ಕಲಬುರಗಿ ಹೈಕೋರ್ಟ್ ಪೀಠದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ, ಹೆಚ್ಚುವರಿ ಮಹಾ ವಿಲೇಖನಾಧಿಕಾರಿ ಬಸವರಾಜ ಚೇಂಗಟಿ ಸೇರಿದಂತೆ ನ್ಯಾಯಮೂರ್ತಿಗಳು, ಕಕ್ಷಿದಾರರು, ವಕೀಲರು ಉಪಸ್ಥಿತರಿದ್ದರು.</p>.<p> ‘ಅತ್ಯಧಿಕ ಪ್ರಕರಣ ಇತ್ಯರ್ಥ’ ‘ಲೋಕ ಅದಾಲತ್ನ ಯಶಸ್ಸಿಗೆ ವಿಮಾ ಕಂಪನಿಗಳ ಅಧಿಕಾರಿಗಳು ಪ್ಯಾನೆಲ್ ವಕೀಲರು ಕಕ್ಷಿದಾರರು ಮತ್ತು ಅವರ ವಕೀಲರು ಉತ್ತಮ ಸಹಕಾರ ನೀಡಿದರು. ಇದರ ಪರಿಣಾಮವಾಗಿ ನಾವು 520 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಲು ಸಾಧ್ಯವಾಯಿತು. ಈ ಸಂಖ್ಯೆಯು ಕಲಬುರಗಿ ಪೀಠದಲ್ಲಿ ಇದುವರೆಗಿನ ಗರಿಷ್ಠ ಪ್ರಕರಣಗಳಾಗಿವೆ’ ಎಂದು ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಶನಿವಾರ ಕಲಬುರಗಿ ಹೈಕೋರ್ಟ್ ಪೀಠವು ರಾಜಿ ಸಂಧಾನದ ಮೂಲಕ ಮೋಟಾರು ವಾಹನ ವಿಮೆ ಮತ್ತು ಸಿವಿಲ್ಗೆ ಸಂಬಂಧಿಸಿದ 520 ಪ್ರಕರಣಗಳನ್ನು ಇತ್ಯರ್ಥಪಡಿಸಿತು.</p>.<p>ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹೈಕೋರ್ಟ್ ಕಾನೂನು ಸೇವಾ ಸಮಿತಿ ವತಿಯಿಂದ ಕಲಬುರಗಿ ಹೈಕೋರ್ಟ್ ಪೀಠದ ಸಭಾಂಗಣದಲ್ಲಿ ಜರುಗಿದ ಲೋಕ ಅದಾಲತ್ನಲ್ಲಿ ನ್ಯಾಯಮೂರ್ತಿಗಳು, ಕಕ್ಷಿದಾರರು, ಸಂಧಾನಕಾರರು ಹಾಗೂ ಸಂಬಂಧಪಟ್ಟ ವಕೀಲರು ರಾಜಿ ಸಂಧಾನದಲ್ಲಿ ಪಾಲ್ಗೊಂಡರು.</p>.<p>ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಹಾಗೂ ನ್ಯಾಯಮೂರ್ತಿ ರಾಜೇಶ್ ರೈ ಕೆ. ಅವರು ಪ್ರಕರಣಗಳನ್ನು ಕಕ್ಷಿದಾರರು ಮತ್ತು ಅವರ ವಕೀಲರ ಸಮಕ್ಷಮ ಸಂಧಾನದ ಮೂಲಕ ವಿಲೇವಾರಿ ಮಾಡಿದರು.</p>.<p>ಅದಾಲತ್ನಲ್ಲಿ ಮೋಟಾರು ವಾಹನ ವಿಮೆ, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಸಿವಿಲ್, ಕೆಎಸ್ಆರ್ಟಿಸಿ ಲೇಬರ್ ರಿಟ್ ಪಿಟಿಷನ್ ಸಂಬಂಧಿಸಿದ ಪ್ರಕರಣಗಳು ಸೇರಿ ಒಟ್ಟಾರೆ 520 ಪ್ರಕರಣಗಳು ಇತ್ಯರ್ಥಗೊಂಡು, ₹14,00,71,305 ಪರಿಹಾರ ಮೊತ್ತವನ್ನು ಸಂತ್ರಸ್ತರಿಗೆ ಪಾವತಿಸುವಂತೆ ಆದೇಶಿಸಲಾಯಿತು. 520 ಪ್ರಕರಣಗಳ ಪೈಕಿ 18 ಪ್ರಕರಣಗಳು ಕೆಎಸ್ಆರ್ಟಿಸಿಯ ಲೇಬರ್ ರಿಟ್ ಪಿಟಿಷನ್ಗೆ ಸಂಬಂಧಿಸಿದ್ದವು ಆಗಿದ್ದವು.</p>.<p>ಕಲಬುರಗಿ ಹೈಕೋರ್ಟ್ ಪೀಠದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ, ಹೆಚ್ಚುವರಿ ಮಹಾ ವಿಲೇಖನಾಧಿಕಾರಿ ಬಸವರಾಜ ಚೇಂಗಟಿ ಸೇರಿದಂತೆ ನ್ಯಾಯಮೂರ್ತಿಗಳು, ಕಕ್ಷಿದಾರರು, ವಕೀಲರು ಉಪಸ್ಥಿತರಿದ್ದರು.</p>.<p> ‘ಅತ್ಯಧಿಕ ಪ್ರಕರಣ ಇತ್ಯರ್ಥ’ ‘ಲೋಕ ಅದಾಲತ್ನ ಯಶಸ್ಸಿಗೆ ವಿಮಾ ಕಂಪನಿಗಳ ಅಧಿಕಾರಿಗಳು ಪ್ಯಾನೆಲ್ ವಕೀಲರು ಕಕ್ಷಿದಾರರು ಮತ್ತು ಅವರ ವಕೀಲರು ಉತ್ತಮ ಸಹಕಾರ ನೀಡಿದರು. ಇದರ ಪರಿಣಾಮವಾಗಿ ನಾವು 520 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಲು ಸಾಧ್ಯವಾಯಿತು. ಈ ಸಂಖ್ಯೆಯು ಕಲಬುರಗಿ ಪೀಠದಲ್ಲಿ ಇದುವರೆಗಿನ ಗರಿಷ್ಠ ಪ್ರಕರಣಗಳಾಗಿವೆ’ ಎಂದು ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>