ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಮೊದಲ ದಿನ ಮೂರು ನಾಮಪತ್ರ ಸಲ್ಲಿಕೆ

Published : 13 ಏಪ್ರಿಲ್ 2024, 7:46 IST
Last Updated : 13 ಏಪ್ರಿಲ್ 2024, 7:46 IST
ಫಾಲೋ ಮಾಡಿ
Comments
ಕಲಬುರಗಿಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ನಾಮಪತ್ರ ಸಲ್ಲಿಸಿದರು. ಮುಖಂಡರಾದ ದತ್ತಾತ್ರೇಯ ಪಾಟೀಲ ರೇವೂರ ಗುರುನಾಥ್ ಜಾಂತಿಕರ ಶೋಭಾ ಭಾಣಿ ಲಿಂಗರಾಜ ಬಿರಾದಾರ ಉಪಸ್ಥಿತರಿದ್ದರು
ಕಲಬುರಗಿಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ನಾಮಪತ್ರ ಸಲ್ಲಿಸಿದರು. ಮುಖಂಡರಾದ ದತ್ತಾತ್ರೇಯ ಪಾಟೀಲ ರೇವೂರ ಗುರುನಾಥ್ ಜಾಂತಿಕರ ಶೋಭಾ ಭಾಣಿ ಲಿಂಗರಾಜ ಬಿರಾದಾರ ಉಪಸ್ಥಿತರಿದ್ದರು
ಕಲಬುರಗಿಯಲ್ಲಿ ಗುರುವಾರ ಸ್ವತಂತ್ರ ಅಭ್ಯರ್ಥಿಯಾಗಿ ತಾರಾಬಾಯಿ ಭೋವಿ ಅವರು ನಾಮಪತ್ರ‌ ಸಲ್ಲಿಸಿದರು. ಬೆಂಬಲಿಗರು ಉಪಸ್ಥಿತರಿದ್ದರು
ಕಲಬುರಗಿಯಲ್ಲಿ ಗುರುವಾರ ಸ್ವತಂತ್ರ ಅಭ್ಯರ್ಥಿಯಾಗಿ ತಾರಾಬಾಯಿ ಭೋವಿ ಅವರು ನಾಮಪತ್ರ‌ ಸಲ್ಲಿಸಿದರು. ಬೆಂಬಲಿಗರು ಉಪಸ್ಥಿತರಿದ್ದರು
ಬಿಸಿಲಿನಲ್ಲಿ ಕಾದು ನಿಂತ ಮುಖಂಡರು
ರಾಧಾಕೃಷ್ಣ ದೊಡ್ಡಮನಿ ಅವರ ನಾಮಪತ್ರ ಸಲ್ಲಿಸಿ ಹೊರ ಬರುವರ ವರೆಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ಸಿಂಗ್ ಶಾಸಕರಾದ ಅಲ್ಲಮಪ್ರಭು ಪಾಟೀಲ ತಿಪ್ಪಣ್ಣಪ್ಪ ಕಮಕನೂರ ಸೇರಿದಂತೆ ಹಲವರು ಜಿಲ್ಲಾಧಿಕಾರಿ ಕಚೇರಿಯ ಪ್ರವೇಶ ದ್ವಾರದಲ್ಲೇ ಬಿಸಿಲಿನಲ್ಲಿ ಕಾದು ನಿಂತರು. ಪಕ್ಷದ ನೂರಾರು ಕಾರ್ಯಕರ್ತರು ಸಹ ಜಮಾಯಿಸಿದರು.
‘ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನ’
‘ಲೋಕಸಭಾ ಚುನಾವಣೆ ಮುಕ್ತಾಯ ಆಗುತ್ತಿದ್ದಂತೆ ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾಗಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಮುಂದಿನ ದಿನಗಳಲ್ಲಿ ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗದೆ ಇದ್ದರೇ ಬಿಜೆಪಿಯವರು ಜೆಡಿಎಸ್‌ ನಾಯಕರನ್ನು ಒಡಿಸುತ್ತಾರೆ. ಚುನಾವಣೆಬ ಬಳಿಕ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ಷಿಪ್ರ ಬೆಳವಣಿಗೆ ಆಗುವುದಿಲ್ಲ. ಆದರೆ ಜೆಡಿಎಸ್–ಬಿಜೆಪಿ ಮೈತ್ರಿ ಮುರಿದು ಬೀಳಲಿದೆ’ ಎಂದು ವ್ಯಂಗ್ಯವಾಡಿದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ನಮ್ಮ ಆತ್ಮೀಯ ಸ್ನೇಹಿತ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕಾಲದಿಂದಲೂ ಒಟ್ಟಿಗೆ ಶಾಸಕರಾಗಿ ಸಚಿವರಾಗಿ ಕೆಲಸ ಮಾಡಿದ್ದೇವೆ. ಬಿಜೆಪಿಯಲ್ಲಿ ಅವರಿಗೆ ಅನ್ಯಾಯವಾಗಿದ್ದು ಮನವರಿಕೆಯಾಗಿದೆ. ಕೆಲವು ಆಂತರಿಕ ವಿಚಾರಗಳು ಬಹಿರಂಗವಾಗಿ ಹೇಳಲು ಬರುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT