<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ):</strong> 'ಸಿದ್ಧಸಿರಿ ಎಥೆನಾಲ್ ಮತ್ತು ವಿದ್ಯುತ್ ಘಟಕದ ವಾಸ್ತವ ಸ್ಥಿತಿಗತಿ ಕುರಿತು ಹೈಕೋರ್ಟ್ಗೆ ಇಲಾಖೆಯ ಹಿರಿಯ ಅಧಿಕಾರಿಗಳು ಮನವರಿಕೆ ಮಾಡಿಕೊಡುವರು' ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.</p><p>ಪಟ್ಟಣದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಕಾಯ್ದೆ, ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಪಡೆಯದ ಕಾರಣಕ್ಕೆ ಸಿದ್ಧಸಿರಿ ಕಂಪನಿ ₹1.5 ಕೋಟಿ ದಂಡ ಪಾವತಿಸಿದೆ. ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಪಡೆಯದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಒಪ್ಪಿಗೆ ನೀಡಲು ಬರುವುದಿಲ್ಲ. ಹೀಗಾಗಿ, ನನ್ನ ಸೂಚನೆ ಮೇರೆಗೆ ಅಧಿಕಾರಿಗಳು ಕಂಪನಿಗೆ ನೋಟಿಸ್ ನೀಡಿದ್ದರು' ಎಂದರು. </p><p>'ನೋಟಿಸ್ ಹಿಂದೆ ರಾಜಕೀಯ ದ್ವೇಷ, ಹಗೆತನ, ಭಯ ಹುಟ್ಟಿಸುವ ಉದ್ದೇಶವಾಗಲಿ ಇಲ್ಲ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶ ಅತಿ ಕಡಿಮೆ ಇದೆ. ಹೀಗಾಗಿ, ಅರಣ್ಯ ವಿಸ್ತರಣೆ ಮತ್ತು ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ' ಎಂದರು. </p><p>'ಈ ಭಾಗದಲ್ಲಿ ಅರಣ್ಯಾಭಿವೃದ್ಧಿಗೆ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅಡಿಯಲ್ಲಿ ಕೈಗಾರಿಕೆಗಳಿಂದ ಅನುದಾನ ಪಡೆಯಲು ಜಿಲ್ಲೆಯ ಕೈಗಾರಿಕೊದ್ಯಮಿಗಳ ಸಭೆ ನಡೆಸುತ್ತೇನೆ' ಎಂದು ಭರವಸೆ ನೀಡಿದರು.</p><p>‘ಚಿಂಚೋಳಿಯಲ್ಲಿ ಅರಣ್ಯ ಕಾಲೇಜು ಆಗಬೇಕೆಂಬುದು ಬಹುದಿನಗಳ ಬೇಡಿಕೆಯಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಚಿಂಚೋಳಿ ಅರಣ್ಯ ಒತ್ತುವರಿ ಹಾಗೂ ತೆಲಂಗಾಣ ರಾಜ್ಯದ ಜನರಿಂದ ಕರ್ನಾಟಕದ ಅರಣ್ಯ ಒತ್ತುವರಿ ತೆರವಿಗೆ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲಾಗುವುದು’ ಎಂದು ಹೇಳಿದರು.</p><p>ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲು ತಡೆ ಹಿಡಿದ ಟ್ರೀ ಪಾರ್ಕ್ ಮತ್ತು ಜಂಗಲ್ ಲಾಡ್ಜ್ ನಿರ್ಮಾಣ ಕುರಿತು ಅಧಿಕಾರಿಗಳಿಂದ ವರದಿ ಪಡೆಯುತ್ತೇನೆ. ಮಾನವೀಯತೆ ದೃಷ್ಟಿಯಿಂದ 3 ಎಕರೆಗೂ ಕಡಿಮೆ ಪ್ರದೇಶದ ಅರಣ್ಯ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದರೆ, ಅವರಿಗೆ ತೆರವುಗೊಳಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದರು. </p><p>ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಹಸಿರೀಕರಣಕ್ಕೆ ಹೆಚ್ಚು ಒತ್ತು ನೀಡುತ್ತೇನೆ ಕಳೆದ ವರ್ಷ (2022-23) 5.7 ಕೋಟಿ ಸಸಿ ನೆಡಲಾಗಿದೆ. ಪ್ರಸಕ್ತ ವರ್ಷ 7 ಕೋಟಿ ಸಸಿ ನೆಡಲು ಗುರಿ ಹಾಕಿಕೊಳ್ಳಲಾಗಿದೆ’ ಎಂದು ಹೇಳಿದರು.</p><p>ಮುಖಂಡ ಸುಭಾಷ ರಾಠೋಡ, ಲಕ್ಷ್ಮಿದೇವಿ ಮಂಜುನಾಥ ಕೊರವಿ, ಬಸವರಾಜ ಮಾಲಿ, ಕಲಬುರಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ್ ಪನ್ವರ್, ಜಿಲ್ಲಾ ಅರಣ್ಯಾಧಿಕಾರಿ ಸುಮೀತಕುಮಾರ ಪಾಟೀಲ, ಎಂ.ಎಲ್ ಬಾವಿಕಟ್ಟಿ, ಮುನೀರ್ ಅಹಮದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ):</strong> 'ಸಿದ್ಧಸಿರಿ ಎಥೆನಾಲ್ ಮತ್ತು ವಿದ್ಯುತ್ ಘಟಕದ ವಾಸ್ತವ ಸ್ಥಿತಿಗತಿ ಕುರಿತು ಹೈಕೋರ್ಟ್ಗೆ ಇಲಾಖೆಯ ಹಿರಿಯ ಅಧಿಕಾರಿಗಳು ಮನವರಿಕೆ ಮಾಡಿಕೊಡುವರು' ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.</p><p>ಪಟ್ಟಣದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಕಾಯ್ದೆ, ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಪಡೆಯದ ಕಾರಣಕ್ಕೆ ಸಿದ್ಧಸಿರಿ ಕಂಪನಿ ₹1.5 ಕೋಟಿ ದಂಡ ಪಾವತಿಸಿದೆ. ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಪಡೆಯದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಒಪ್ಪಿಗೆ ನೀಡಲು ಬರುವುದಿಲ್ಲ. ಹೀಗಾಗಿ, ನನ್ನ ಸೂಚನೆ ಮೇರೆಗೆ ಅಧಿಕಾರಿಗಳು ಕಂಪನಿಗೆ ನೋಟಿಸ್ ನೀಡಿದ್ದರು' ಎಂದರು. </p><p>'ನೋಟಿಸ್ ಹಿಂದೆ ರಾಜಕೀಯ ದ್ವೇಷ, ಹಗೆತನ, ಭಯ ಹುಟ್ಟಿಸುವ ಉದ್ದೇಶವಾಗಲಿ ಇಲ್ಲ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶ ಅತಿ ಕಡಿಮೆ ಇದೆ. ಹೀಗಾಗಿ, ಅರಣ್ಯ ವಿಸ್ತರಣೆ ಮತ್ತು ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ' ಎಂದರು. </p><p>'ಈ ಭಾಗದಲ್ಲಿ ಅರಣ್ಯಾಭಿವೃದ್ಧಿಗೆ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅಡಿಯಲ್ಲಿ ಕೈಗಾರಿಕೆಗಳಿಂದ ಅನುದಾನ ಪಡೆಯಲು ಜಿಲ್ಲೆಯ ಕೈಗಾರಿಕೊದ್ಯಮಿಗಳ ಸಭೆ ನಡೆಸುತ್ತೇನೆ' ಎಂದು ಭರವಸೆ ನೀಡಿದರು.</p><p>‘ಚಿಂಚೋಳಿಯಲ್ಲಿ ಅರಣ್ಯ ಕಾಲೇಜು ಆಗಬೇಕೆಂಬುದು ಬಹುದಿನಗಳ ಬೇಡಿಕೆಯಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಚಿಂಚೋಳಿ ಅರಣ್ಯ ಒತ್ತುವರಿ ಹಾಗೂ ತೆಲಂಗಾಣ ರಾಜ್ಯದ ಜನರಿಂದ ಕರ್ನಾಟಕದ ಅರಣ್ಯ ಒತ್ತುವರಿ ತೆರವಿಗೆ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲಾಗುವುದು’ ಎಂದು ಹೇಳಿದರು.</p><p>ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲು ತಡೆ ಹಿಡಿದ ಟ್ರೀ ಪಾರ್ಕ್ ಮತ್ತು ಜಂಗಲ್ ಲಾಡ್ಜ್ ನಿರ್ಮಾಣ ಕುರಿತು ಅಧಿಕಾರಿಗಳಿಂದ ವರದಿ ಪಡೆಯುತ್ತೇನೆ. ಮಾನವೀಯತೆ ದೃಷ್ಟಿಯಿಂದ 3 ಎಕರೆಗೂ ಕಡಿಮೆ ಪ್ರದೇಶದ ಅರಣ್ಯ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದರೆ, ಅವರಿಗೆ ತೆರವುಗೊಳಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದರು. </p><p>ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಹಸಿರೀಕರಣಕ್ಕೆ ಹೆಚ್ಚು ಒತ್ತು ನೀಡುತ್ತೇನೆ ಕಳೆದ ವರ್ಷ (2022-23) 5.7 ಕೋಟಿ ಸಸಿ ನೆಡಲಾಗಿದೆ. ಪ್ರಸಕ್ತ ವರ್ಷ 7 ಕೋಟಿ ಸಸಿ ನೆಡಲು ಗುರಿ ಹಾಕಿಕೊಳ್ಳಲಾಗಿದೆ’ ಎಂದು ಹೇಳಿದರು.</p><p>ಮುಖಂಡ ಸುಭಾಷ ರಾಠೋಡ, ಲಕ್ಷ್ಮಿದೇವಿ ಮಂಜುನಾಥ ಕೊರವಿ, ಬಸವರಾಜ ಮಾಲಿ, ಕಲಬುರಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ್ ಪನ್ವರ್, ಜಿಲ್ಲಾ ಅರಣ್ಯಾಧಿಕಾರಿ ಸುಮೀತಕುಮಾರ ಪಾಟೀಲ, ಎಂ.ಎಲ್ ಬಾವಿಕಟ್ಟಿ, ಮುನೀರ್ ಅಹಮದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>