<p><strong>ಕಲಬುರಗಿ</strong>: ವಿದೇಶಕ್ಕೆ ತೆರಳಲು ವೀಸಾ ಮಾಡಿಸಿಕೊಟ್ಟು ಅಲ್ಲಿಯೇ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಲ್ಲಿ ಆಳಂದ ಪಟ್ಟಣದ ಇರ್ಫಾನ್ ಮೌಲಸಾಬ್, ಆಸಿಫ್ ಜಿಲಾನಿ ಮತ್ತು ಗಣೇಶ ಹುಮನಾಬಾದ್ ವಿರುದ್ಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇರ್ಫಾನ್ ಉದ್ಯೋಗ ಆಕಾಂಕ್ಷಿಗಳನ್ನು ವಿದೇಶಕ್ಕೆ ಕಳುಹಿಸುವ ಏಜೆಂಟ್ ಎಂದು ಆಸಿಫ್ ಎಂಬಾತ ರಾಜಶೇಖರ ಕಾಶಿರಾಯ, ಅಶೋಕ ಚಿಂಚನಸೂರ ಸೇರಿದಂತೆ 15 ಮಂದಿ ಉದ್ಯೋಗ ಆಕಾಂಕ್ಷಿಗಳಿಗೆ ಪರಿಚಯಿಸಿದ್ದ. ಸಂತ್ರಸ್ತರಲ್ಲಿ ವಿದೇಶಕ್ಕೆ ಕಳುಹಿಸುವ ಆಸೆ ಹುಟ್ಟಿಸಿದ್ದ ಇರ್ಫಾನ್, ಪ್ರತಿಯೊಬ್ಬರಿಗೆ ₹ 1 ಲಕ್ಷ ಖರ್ಚಾಗುತ್ತದೆ ಎಂದಿದ್ದ. ಬಳಿಕ ಅವರೆಲ್ಲರಿಂದ ಮುಂಗಡವಾಗಿ ₹ 11.20 ಲಕ್ಷ ಪಡೆದು, ವೀಸಾ ಮಾಡಿಸಿಕೊಡದೆ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಬೈಕ್ ಸವಾರ ಸಾವು:</strong> ಜೇವರ್ಗಿ ತಾಲ್ಲೂಕಿನ ಯಾತನೂರ ಕಾಲುವೆ ಸಮೀಪದ ರಸ್ತೆ ಬದಿಯ ಹೊಂಡದಲ್ಲಿ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಘತ್ತರಗಾದಲ್ಲಿನ ಪತ್ನಿ ಮನೆಗೆ ಬೈಕ್ ಮೇಲೆ ತೆರಳುತ್ತಿದ ಜೀವಣಗಿ ಗ್ರಾಮದ ಕೃಷ್ಣ ಲಕ್ಷ್ಮಣ (35) ಮೃತರು. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ನೇಣು ಹಾಕಿಕೊಂಡು ಆತ್ಮಹತ್ಯೆ:</strong> ಆದರ್ಶ ನಗರದ ಮನೆಯೊಂದರಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಕೊಳೆತ ಶವ ಪತ್ತೆಯಾಗಿದೆ.</p>.<p>ಅಂಬರೇಶ ಅಕ್ಕಣ್ಣ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಕುಟುಂಬ ಕಲಹದಿಂದ ಎರಡು ದಿನಗಳ ಹಿಂದೆಯೇ ನೇಣು ಹಾಕಿಕೊಂಡು ಸಾವನ್ನಪ್ಪಿರಬಹುದು. ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ, ಕೊಳೆತ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಂ.ಬಿ. ನಗರ ಪೊಲೀಸರು ತಿಳಿಸಿದ್ದಾರೆ.</p>.<p><strong>ಪೆಟ್ರೋಲ್ ಟ್ಯಾಂಕರ್ಗೆ ಬಸ್ ಡಿಕ್ಕಿ:</strong> ಅಫಜಲಪುರ ತಾಲ್ಲೂಕಿನಲ್ಲಿ ತಾಲ್ಲೂಕಿನ ಗೊಬ್ಬುರವಾಡಿ–ಚೌಡಾಪುರ ರಸ್ತೆಯಲ್ಲಿ ಭಾನುವಾರ ಪೆಟ್ರೋಲ್ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.</p>.<p>ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ವಿದೇಶಕ್ಕೆ ತೆರಳಲು ವೀಸಾ ಮಾಡಿಸಿಕೊಟ್ಟು ಅಲ್ಲಿಯೇ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಲ್ಲಿ ಆಳಂದ ಪಟ್ಟಣದ ಇರ್ಫಾನ್ ಮೌಲಸಾಬ್, ಆಸಿಫ್ ಜಿಲಾನಿ ಮತ್ತು ಗಣೇಶ ಹುಮನಾಬಾದ್ ವಿರುದ್ಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇರ್ಫಾನ್ ಉದ್ಯೋಗ ಆಕಾಂಕ್ಷಿಗಳನ್ನು ವಿದೇಶಕ್ಕೆ ಕಳುಹಿಸುವ ಏಜೆಂಟ್ ಎಂದು ಆಸಿಫ್ ಎಂಬಾತ ರಾಜಶೇಖರ ಕಾಶಿರಾಯ, ಅಶೋಕ ಚಿಂಚನಸೂರ ಸೇರಿದಂತೆ 15 ಮಂದಿ ಉದ್ಯೋಗ ಆಕಾಂಕ್ಷಿಗಳಿಗೆ ಪರಿಚಯಿಸಿದ್ದ. ಸಂತ್ರಸ್ತರಲ್ಲಿ ವಿದೇಶಕ್ಕೆ ಕಳುಹಿಸುವ ಆಸೆ ಹುಟ್ಟಿಸಿದ್ದ ಇರ್ಫಾನ್, ಪ್ರತಿಯೊಬ್ಬರಿಗೆ ₹ 1 ಲಕ್ಷ ಖರ್ಚಾಗುತ್ತದೆ ಎಂದಿದ್ದ. ಬಳಿಕ ಅವರೆಲ್ಲರಿಂದ ಮುಂಗಡವಾಗಿ ₹ 11.20 ಲಕ್ಷ ಪಡೆದು, ವೀಸಾ ಮಾಡಿಸಿಕೊಡದೆ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಬೈಕ್ ಸವಾರ ಸಾವು:</strong> ಜೇವರ್ಗಿ ತಾಲ್ಲೂಕಿನ ಯಾತನೂರ ಕಾಲುವೆ ಸಮೀಪದ ರಸ್ತೆ ಬದಿಯ ಹೊಂಡದಲ್ಲಿ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಘತ್ತರಗಾದಲ್ಲಿನ ಪತ್ನಿ ಮನೆಗೆ ಬೈಕ್ ಮೇಲೆ ತೆರಳುತ್ತಿದ ಜೀವಣಗಿ ಗ್ರಾಮದ ಕೃಷ್ಣ ಲಕ್ಷ್ಮಣ (35) ಮೃತರು. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ನೇಣು ಹಾಕಿಕೊಂಡು ಆತ್ಮಹತ್ಯೆ:</strong> ಆದರ್ಶ ನಗರದ ಮನೆಯೊಂದರಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಕೊಳೆತ ಶವ ಪತ್ತೆಯಾಗಿದೆ.</p>.<p>ಅಂಬರೇಶ ಅಕ್ಕಣ್ಣ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಕುಟುಂಬ ಕಲಹದಿಂದ ಎರಡು ದಿನಗಳ ಹಿಂದೆಯೇ ನೇಣು ಹಾಕಿಕೊಂಡು ಸಾವನ್ನಪ್ಪಿರಬಹುದು. ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ, ಕೊಳೆತ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಂ.ಬಿ. ನಗರ ಪೊಲೀಸರು ತಿಳಿಸಿದ್ದಾರೆ.</p>.<p><strong>ಪೆಟ್ರೋಲ್ ಟ್ಯಾಂಕರ್ಗೆ ಬಸ್ ಡಿಕ್ಕಿ:</strong> ಅಫಜಲಪುರ ತಾಲ್ಲೂಕಿನಲ್ಲಿ ತಾಲ್ಲೂಕಿನ ಗೊಬ್ಬುರವಾಡಿ–ಚೌಡಾಪುರ ರಸ್ತೆಯಲ್ಲಿ ಭಾನುವಾರ ಪೆಟ್ರೋಲ್ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.</p>.<p>ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>