ಸೇಡಂ: ‘ಪಟ್ಟಣದ ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ ಉತ್ತರಖಾಂಡ ರಾಜ್ಯದ ಕೇದಾರದಲ್ಲಿ ಮೌನಾನುಷ್ಠಾನ ಕೈಗೊಳ್ಳಲಿದ್ದಾರೆ’ ಎಂದು ಹಾಲಪ್ಪಯ್ಯ ವಿರಕ್ತ ಮಠದ ಟ್ರಸ್ಟಿ ನಾಗಯ್ಯಸ್ವಾಮಿ ಬೊಮ್ನಳ್ಳಿ ತಿಳಿಸಿದ್ದಾರೆ.
ಪಟ್ಟಣದ ಹಾಲಪ್ಪಯ್ಯ ವಿರಕ್ತ ಮಠದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಕಲ್ಯಾಣಕ್ಕಾಗಿ ಮೌನಾನುಷ್ಠಾನ ಕೈಗೊಳ್ಳಲಿದ್ದು ದಸರಾದ ನವರಾತ್ರಿಯ ದಿನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಕ್ತಿಯ ಮೌನಾನುಷ್ಠಾನ ಕೈಗೊಳ್ಳಲಿದ್ಧಾರೆ. ಈ ನಿಮಿತ್ತ ಸೆ.30ರಂದು ಬೆಳಿಗ್ಗೆ 6 ಗಂಟೆಯಿಂದ ಸೇಡಂನಿಂದ ಹೈದ್ರಾಬಾದ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ವಿಮಾನದ ಮೂಲಕ ದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ನಂತರ ಸ್ಥಳೀಯ ವಾಹನಗಳ ಮೂಲಕ ಕೇದಾರ ತಲುಪಿ ಮೌನಾನುಷ್ಠಾನ ಆರಂಭಿಸಲಿದ್ದಾರೆ. ತಮ್ಮ ಮೌನಾನುಷ್ಠಾನ ಸಮಾಪ್ತಿಗೊಳಿಸಿ, ಅ.18ರಂದು ಸೇಡಂ ಪುರ ಪ್ರವೇಶಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.