<p><strong>ಚಿಂಚೋಳಿ</strong>: ‘ತಾಲ್ಲೂಕಿನ ಚತ್ರಸಾಲ ಗ್ರಾಮದ ಕಲಬುರಗಿ ಸಿಮೆಂಟ್ ಕಂಪನಿ ಸರ್ಕಾರದ 80 ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿದೆ’ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ವಿಭಾಗೀಯ ವಕ್ತಾರ ರಾಜಕುಮಾರ ಪಾಟೀಲ ತೇಲ್ಕೂರ ಆರೋಪಿಸಿದ್ದಾರೆ.</p>.<p>ಚತ್ರಸಾಲ ಗ್ರಾಮದಲ್ಲಿ ಸಂತ್ರಸ್ತರೊಂದಿಗೆ ಸೋಮವಾರ ಸಂಜೆ ಸಭೆ ನಡೆಸಿ ರೈತರ ಸಮಸ್ಯೆ ಆಲಿಸಿ ಡಿ.20ರಂದು ಕಂಪನಿಯ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.</p>.<p>‘ಕಂಪನಿಯು ಸ್ಥಳಿಯರಿಗೆ ಉದ್ಯೋಗಾವಕಾಶ, ಆಸ್ಪತ್ರೆ ನಿಮಾ೯ಣ, ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ವಿನಾಯಿತಿ, ಕಾರ್ಮಿಕರ ಯೂನಿಯನ್ ರಚನೆ, ನೌಕರರಿಗೆ ಬೋನಸ್ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಪಿತಾಂಬರಾವ ಗಣಾಪುರ, ಮೊಯಿನ್ ಪಾಷಾ, ನಾಗರಾಜ ಪಾಟೀಲ್, ಈರಣ್ಣ ಸಾಹುಕಾರ ಗರಗಪಳ್ಳಿ, ಮಂಜುನಾಥ ಶಂಕರ, ಜಗದೀಶ್ ಹುಲಿ ಬುರಗಪಳ್ಳಿ, ಚನ್ನಪ್ಪ ಪಾಟೀಲ್, ನರಸರೆಡ್ಡಿ ಪಾಟೀಲ್ ಕಚ೯ಖೇಡ, ಬಸ್ಸಪ್ಪ ಹೆಂಡಿ, ಚನ್ನಬಸಯ್ಯ ಸ್ವಾಮಿ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ‘ತಾಲ್ಲೂಕಿನ ಚತ್ರಸಾಲ ಗ್ರಾಮದ ಕಲಬುರಗಿ ಸಿಮೆಂಟ್ ಕಂಪನಿ ಸರ್ಕಾರದ 80 ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿದೆ’ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ವಿಭಾಗೀಯ ವಕ್ತಾರ ರಾಜಕುಮಾರ ಪಾಟೀಲ ತೇಲ್ಕೂರ ಆರೋಪಿಸಿದ್ದಾರೆ.</p>.<p>ಚತ್ರಸಾಲ ಗ್ರಾಮದಲ್ಲಿ ಸಂತ್ರಸ್ತರೊಂದಿಗೆ ಸೋಮವಾರ ಸಂಜೆ ಸಭೆ ನಡೆಸಿ ರೈತರ ಸಮಸ್ಯೆ ಆಲಿಸಿ ಡಿ.20ರಂದು ಕಂಪನಿಯ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.</p>.<p>‘ಕಂಪನಿಯು ಸ್ಥಳಿಯರಿಗೆ ಉದ್ಯೋಗಾವಕಾಶ, ಆಸ್ಪತ್ರೆ ನಿಮಾ೯ಣ, ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ವಿನಾಯಿತಿ, ಕಾರ್ಮಿಕರ ಯೂನಿಯನ್ ರಚನೆ, ನೌಕರರಿಗೆ ಬೋನಸ್ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಪಿತಾಂಬರಾವ ಗಣಾಪುರ, ಮೊಯಿನ್ ಪಾಷಾ, ನಾಗರಾಜ ಪಾಟೀಲ್, ಈರಣ್ಣ ಸಾಹುಕಾರ ಗರಗಪಳ್ಳಿ, ಮಂಜುನಾಥ ಶಂಕರ, ಜಗದೀಶ್ ಹುಲಿ ಬುರಗಪಳ್ಳಿ, ಚನ್ನಪ್ಪ ಪಾಟೀಲ್, ನರಸರೆಡ್ಡಿ ಪಾಟೀಲ್ ಕಚ೯ಖೇಡ, ಬಸ್ಸಪ್ಪ ಹೆಂಡಿ, ಚನ್ನಬಸಯ್ಯ ಸ್ವಾಮಿ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>