<p><strong>ವಾಡಿ:</strong> ಪಟ್ಟಣ ಸಮೀಪದ ಹಲಕರ್ಟಿಯ ಸಿದ್ಧೇಶ್ವರ ಧ್ಯಾನಧಾಮದ ರಾಜಶೇಖರ ಸ್ವಾಮೀಜಿ ಅವರ ಪಟ್ಟಾಧಿಕಾರ ಮಹೋತ್ಸವ ಏ.19ರಂದು ಏರ್ಪಡಿಸಲಾಗಿದೆ.</p>.<p>ರಂಭಾಪುರಿಯ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಮಹೋತ್ಸವ ನಡೆಯಲಿದೆ. ಇದಕ್ಕೂ ಮೊದಲು ಏ.18ರಂದು ಸಂಜೆ 5ಗಂಟೆಗೆ ರಂಭಾಪುರಿ ಶ್ರೀಗಳು ಅಡ್ಡಪಲ್ಲಕಿ ಉತ್ಸವದ ಮೂಲಕ ಪುರಪ್ರವೇಶ ಮಾಡಲಿದ್ದಾರೆ. ಅಂಬಾಭವಾನಿ ಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನದ ಶಿಖರಕ್ಕೆ ಕಳಸಾರೋಹಣ, ರಾಜಶೇಖರ ಸ್ವಾಮಿಗಳ ತುಲಾಭಾರ ನೆರವೇರಲಿದೆ.</p>.<p>‘ಏ.9ರಿಂದ ಶರಣಬಸವೇಶ್ವರರ ಪುರಾಣ ಪ್ರವಚನ ಕಾರ್ಯಕ್ರಮ ಆರಂಭಗೊಂಡಿದ್ದು 9 ದಿನಗಳ ಕಾಲ ಜರುಗಲಿದೆ. ಸಿದ್ಧೇಶ್ವರ ದೇವಸ್ಥಾನ ಪರಿಸರದಲ್ಲಿ ದೇವಿಯ ಪೂಜೆ ಮಾಡಿಕೊಂಡು ಬರುವ ಮೂಲಕ ಇದನ್ನು ಸಿದ್ಧೇಶ್ವರ ಧ್ಯಾನಧಾಮ ಎಂದು ಪರಿವರ್ತಿಸಿದ್ದೇವೆ. ಇನ್ನು ಮುಂದೆ ಈ ಧ್ಯಾನಧಾಮವು ರಂಭಾಪುರಿ ಪೀಠದ ಶಾಖಾ ಮಠವಾಗಿ ಬದಲಾಗಲಿದೆ. ಪಟ್ಟಾಧಿಕಾರ ಮಹೋತ್ಸವದ ಬಳಿಕ ಶ್ರೀಮಠವು ಮತ್ತಷ್ಟು ಧಾರ್ಮಿಕ ಕಾರ್ಯಗಳ ಸೇವೆಯಲ್ಲಿ ತೊಡಗಲಿದೆ. ಪಟ್ಟಾಧಿಕಾರ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಲಿದ್ದಾರೆ’ ಎಂದು ರಾಜಶೇಖರ ಸ್ವಾಮೀಜಿ ಪ್ರಜಾವಾಣಿಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ:</strong> ಪಟ್ಟಣ ಸಮೀಪದ ಹಲಕರ್ಟಿಯ ಸಿದ್ಧೇಶ್ವರ ಧ್ಯಾನಧಾಮದ ರಾಜಶೇಖರ ಸ್ವಾಮೀಜಿ ಅವರ ಪಟ್ಟಾಧಿಕಾರ ಮಹೋತ್ಸವ ಏ.19ರಂದು ಏರ್ಪಡಿಸಲಾಗಿದೆ.</p>.<p>ರಂಭಾಪುರಿಯ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಮಹೋತ್ಸವ ನಡೆಯಲಿದೆ. ಇದಕ್ಕೂ ಮೊದಲು ಏ.18ರಂದು ಸಂಜೆ 5ಗಂಟೆಗೆ ರಂಭಾಪುರಿ ಶ್ರೀಗಳು ಅಡ್ಡಪಲ್ಲಕಿ ಉತ್ಸವದ ಮೂಲಕ ಪುರಪ್ರವೇಶ ಮಾಡಲಿದ್ದಾರೆ. ಅಂಬಾಭವಾನಿ ಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನದ ಶಿಖರಕ್ಕೆ ಕಳಸಾರೋಹಣ, ರಾಜಶೇಖರ ಸ್ವಾಮಿಗಳ ತುಲಾಭಾರ ನೆರವೇರಲಿದೆ.</p>.<p>‘ಏ.9ರಿಂದ ಶರಣಬಸವೇಶ್ವರರ ಪುರಾಣ ಪ್ರವಚನ ಕಾರ್ಯಕ್ರಮ ಆರಂಭಗೊಂಡಿದ್ದು 9 ದಿನಗಳ ಕಾಲ ಜರುಗಲಿದೆ. ಸಿದ್ಧೇಶ್ವರ ದೇವಸ್ಥಾನ ಪರಿಸರದಲ್ಲಿ ದೇವಿಯ ಪೂಜೆ ಮಾಡಿಕೊಂಡು ಬರುವ ಮೂಲಕ ಇದನ್ನು ಸಿದ್ಧೇಶ್ವರ ಧ್ಯಾನಧಾಮ ಎಂದು ಪರಿವರ್ತಿಸಿದ್ದೇವೆ. ಇನ್ನು ಮುಂದೆ ಈ ಧ್ಯಾನಧಾಮವು ರಂಭಾಪುರಿ ಪೀಠದ ಶಾಖಾ ಮಠವಾಗಿ ಬದಲಾಗಲಿದೆ. ಪಟ್ಟಾಧಿಕಾರ ಮಹೋತ್ಸವದ ಬಳಿಕ ಶ್ರೀಮಠವು ಮತ್ತಷ್ಟು ಧಾರ್ಮಿಕ ಕಾರ್ಯಗಳ ಸೇವೆಯಲ್ಲಿ ತೊಡಗಲಿದೆ. ಪಟ್ಟಾಧಿಕಾರ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಲಿದ್ದಾರೆ’ ಎಂದು ರಾಜಶೇಖರ ಸ್ವಾಮೀಜಿ ಪ್ರಜಾವಾಣಿಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>