ಶಾಲಾ ಆವರಣದೊಳಗೆ ಮಳೆ ನೀರು ನಿಂತಿವೆ. ಶೈಕ್ಷಣಿಕ ಚಟುವಟಿಕೆ ನಡೆಸಲು ತೀವ್ರ ಸಮಸ್ಯೆಯಾಗುತ್ತಿದೆ. ಮಳೆ ಬಂದಾಗ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಜೀವಭಯ ಕಾಡುತ್ತಿದೆ. ಸರ್ಕಾರ ಮತ್ತು ಶಿಕ್ಷಣ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂಬ ದೂರು ಪಾಲಕರಿಂದ ಕೇಳಿ ಬಂದಿದೆ. ಶಾಲಾ ಕಟ್ಟಡ ಕುರಿತು ಶಿಕ್ಷಣ ಇಲಾಖೆ ಅಧಿಕಾರಿ ಗಮನಕ್ಕೆ ತರಲಾಗಿದೆ. ಶಿಥಿಲಗೊಂಡ ಶಾಲಾ ಕಟ್ಟಡ ತೆರವುಗೊಳಿಸಿ, ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರಕಿದೆ. ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ದೊರೆತಿಲ್ಲ ಎಂಬ ಮಾಹಿತಿಯಿದೆ ಎಂದು ಮುಖ್ಯ ಶಿಕ್ಷಕ ಕಾಶಿರಾಯ ಕಲಾಲ ಅವರು ಪ್ರಜಾವಾಣಿಗೆ ಪ್ರತಿಕ್ರಿಯಿಸಿದರು.