<p><strong>ಚಿತ್ತಾಪುರ:</strong> ‘ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ, ದಿನಾಲೂ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳಿಂದ ಸೃಜನಾತ್ಮಕತೆ ಜತೆಗೆ ಬದುಕು ರೂಪಿಸಿಕೊಳ್ಳಲು ಬೇಕಾದ ಎಲ್ಲ ಮಾಹಿತಿ ದೊರೆಯುತ್ತದೆ’ ಎಂದು ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಶಿವಶರಣಪ್ಪ ಬಿರಾದಾರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪತ್ರಿಕೆಗಳಿಂದ ಸಮಾಜದ ನಿತ್ಯ ಆಗುಹೋಗುಗಳ ಜತೆಗೆ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಸಾಂಸ್ಕೃತಿ ಪರಪಂರೆ, ಕಲೆ, ಸಾಹಿತ್ಯ, ಇತಿಹಾಸ ಸೇರಿದಂತೆ ದೇಶ–ವಿದೇಶಗಳ ವಿಷಯ ತಿಳಿದುಕೊಳ್ಳಬಹುದು ಎಂದು ಹೇಳಿದರು.</p>.<p>‘ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಮಾಹಿತಿ, ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪ್ರಶ್ನೋತ್ತರಗಳನ್ನು ನೀಡುತ್ತಿವೆ. ಪ್ರಚಲಿತ ವಿದ್ಯಮಾನಗಳ ಕೈಗನ್ನಡಿಯಾಗಿವೆ. ಒಂದು ಪತ್ರಿಕೆ ಪ್ರಕಟವಾಗಲು ಅನೇಕರ ಶ್ರಮವಿರುತ್ತದೆ. ವಿಷಯ ಸಂಗ್ರಹಿಸಿ, ಖಚಿತಪಡಿಸಿಕೊಂಡು ಓದುಗರಿಗೆ ನೀಡುವ ಕೆಲಸ ಸರಳವಲ್ಲ’ ಎಂದು ಹೇಳಿದರು.</p>.<p>ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಕಾಶಿರಾಯ ಕಲಾಲ, ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ಧರಾಜ ಮಲಕಂಡಿ ಅವರು ಮಾತನಾಡಿದರು.</p>.<p>ನಾಗಯ್ಯಸ್ವಾಮಿ ಅಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಡಿ. ಮಶಾಕ, ಜಗದೇವ ದಿಗ್ಗಾಂವಕರ, ಕಾಶಿನಾಥ ಗುತ್ತೇದಾರ, ವಿಕ್ರಂ ತೇಜಸ್, ಸಾಯಬಣ್ಣ ಗುಡುಬಾ, ಸಂತೋಷಕುಮಾರ ಕಟ್ಟಿಮನಿ, ಪೃಥ್ವಿ ಸಾಗರ, ಅಣ್ಣಾರಾಯ ಮಾಡಬೂಳಕರ, ಅನಂತನಾಗ ದೇಶಪಾಂಡೆ, ಜಗದೇವ ಕುಂಬಾರ ಹಾಜರಿದ್ದರು.</p>.<p>ಪದವಿ ಪೂರ್ವ ಮತ್ತು ಪದವಿ ಕಾಲೇಜಿನ 33 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಡಿವಾಳಪ್ಪ ಹೇರೂರ ನಿರೂಪಿಸಿದರು. ದಯಾನಂದ ಖಜೂರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ:</strong> ‘ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ, ದಿನಾಲೂ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳಿಂದ ಸೃಜನಾತ್ಮಕತೆ ಜತೆಗೆ ಬದುಕು ರೂಪಿಸಿಕೊಳ್ಳಲು ಬೇಕಾದ ಎಲ್ಲ ಮಾಹಿತಿ ದೊರೆಯುತ್ತದೆ’ ಎಂದು ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಶಿವಶರಣಪ್ಪ ಬಿರಾದಾರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪತ್ರಿಕೆಗಳಿಂದ ಸಮಾಜದ ನಿತ್ಯ ಆಗುಹೋಗುಗಳ ಜತೆಗೆ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಸಾಂಸ್ಕೃತಿ ಪರಪಂರೆ, ಕಲೆ, ಸಾಹಿತ್ಯ, ಇತಿಹಾಸ ಸೇರಿದಂತೆ ದೇಶ–ವಿದೇಶಗಳ ವಿಷಯ ತಿಳಿದುಕೊಳ್ಳಬಹುದು ಎಂದು ಹೇಳಿದರು.</p>.<p>‘ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಮಾಹಿತಿ, ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪ್ರಶ್ನೋತ್ತರಗಳನ್ನು ನೀಡುತ್ತಿವೆ. ಪ್ರಚಲಿತ ವಿದ್ಯಮಾನಗಳ ಕೈಗನ್ನಡಿಯಾಗಿವೆ. ಒಂದು ಪತ್ರಿಕೆ ಪ್ರಕಟವಾಗಲು ಅನೇಕರ ಶ್ರಮವಿರುತ್ತದೆ. ವಿಷಯ ಸಂಗ್ರಹಿಸಿ, ಖಚಿತಪಡಿಸಿಕೊಂಡು ಓದುಗರಿಗೆ ನೀಡುವ ಕೆಲಸ ಸರಳವಲ್ಲ’ ಎಂದು ಹೇಳಿದರು.</p>.<p>ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಕಾಶಿರಾಯ ಕಲಾಲ, ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ಧರಾಜ ಮಲಕಂಡಿ ಅವರು ಮಾತನಾಡಿದರು.</p>.<p>ನಾಗಯ್ಯಸ್ವಾಮಿ ಅಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಡಿ. ಮಶಾಕ, ಜಗದೇವ ದಿಗ್ಗಾಂವಕರ, ಕಾಶಿನಾಥ ಗುತ್ತೇದಾರ, ವಿಕ್ರಂ ತೇಜಸ್, ಸಾಯಬಣ್ಣ ಗುಡುಬಾ, ಸಂತೋಷಕುಮಾರ ಕಟ್ಟಿಮನಿ, ಪೃಥ್ವಿ ಸಾಗರ, ಅಣ್ಣಾರಾಯ ಮಾಡಬೂಳಕರ, ಅನಂತನಾಗ ದೇಶಪಾಂಡೆ, ಜಗದೇವ ಕುಂಬಾರ ಹಾಜರಿದ್ದರು.</p>.<p>ಪದವಿ ಪೂರ್ವ ಮತ್ತು ಪದವಿ ಕಾಲೇಜಿನ 33 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಡಿವಾಳಪ್ಪ ಹೇರೂರ ನಿರೂಪಿಸಿದರು. ದಯಾನಂದ ಖಜೂರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>