ಶುಕ್ರವಾರ ಸಂಜೆ ಜಮೀನಿನಿಂದ ಮನೆಗೆ ಮರಳುತ್ತಿದ್ದಾಗ ಮಳೆ ಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಮರದ ಮೇಲೆಯೇ ಇದ್ದ ಹಾವು ಮಹಿಳೆ ಮೇಲೆ ಬಿದ್ದು ಕಿವಿಗೆ ಕಚ್ಚಿದೆ. ಯಾದಗಿರಿ ಆಸ್ಪತ್ರೆ ನಂತರ ಕಲಬುರಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮಹಿಳೆ ಮೃತಪಟ್ಟಿದ್ದಾಳೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.