<p><strong>ಸೇಡಂ:</strong> ‘ಪ್ರಸ್ತುತ ದಿನಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯೇ ಜಾಣ ಎಂಬ ಮನಸ್ಥಿತಿ ಮಕ್ಕಳಲ್ಲಿ ಮೂಡುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ವಿದ್ಯಾರ್ಥಿಗಳಿಗೆ ಅಂಕದ ಜೊತೆಗೆ ಮೌಲ್ಯಯುತ ಶಿಕ್ಷಣ, ಸಂಸ್ಕಾರದ ಅವಶ್ಯಕತೆ ಇದೆ’ ಎಂದು ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಕೊತ್ತಲಬಸವೇಶ್ವರ ದೇವಾಲಯದ ನಾಗೇಂದ್ರ ಬ.ಪಾಟೀಲ ಆರೆಬೊಮ್ಮನಹಳ್ಳಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಶಿಕ್ಷಕ ವೃತ್ತಿಯಲ್ಲಿರುವವರಿಗೆ ಹಣಕ್ಕಿಂತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಧ್ಯೇಯ ದೊಡ್ಡದಾಗಿರಬೇಕು. ಶಾಲೆಗಳು ಸಾಮಾಜಿಕ ಪರಿವರ್ತನೆ ಕೇಂದ್ರವಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಕ ಸಮುದಾಯ ಕೆಲಸ ನಿರ್ವಹಿಸಬೇಕಿದೆ’ ಎಂದರು.</p>.<p>ಇಸ್ರೊ ವಿಜ್ಞಾನಿ ಎಚ್.ಎನ್.ಸುರೇಶಕುಮಾರ ಮಾತನಾಡಿ, ‘ವೈಜ್ಞಾನಿಕ, ತಂತ್ರಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಮುಂಚೂಣಿಯತ್ತ ಸಾಗುತ್ತಿದೆ. ಚಂದ್ರಯಾನ 3 ಭಾರತೀಯರ ಹೆಮ್ಮೆಯಾಗಿದೆ ಎಂದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವೈಜ್ಞಾನಿಕ ಗುಣ ಇರುತ್ತದೆ. ಅದನ್ನು ಹೆಕ್ಕಿ ತೆಗೆದು ಗುರುತಿಸುವ ಕೆಲಸ ಶಿಕ್ಷಕರಿಂದ ಸಮೃದ್ಧವಾಗಿ ಬೆಳೆಯಬೇಕಿದೆ’ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾನೇಹಿಗ ದಿನಚರಿ ಬಿಡುಗಡೆಗೊಳಿಸಲಾಯಿತು. </p>.<p>ವಿದ್ಯಾಭಾರತಿ ಜಿಲ್ಲಾ ಸಂರಕ್ಷಕ ಪಿ.ಭೀಮರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ್ ಮಾತನಾಡಿದರು. ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಂರಕ್ಷಕ ಬಸವರಾಜ ಪಾಟೀಲ್ ಸೇಡಂ, ವಿದ್ಯಾಭಾರತಿಯ ಹಿರಿಯ ಕಾರ್ಯಕರ್ತ ಜಿ.ಆರ್.ಜಗದೀಶ, ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಉಮೇಶಕುಮಾರ ಬೆಂಗಳೂರು ಇದ್ದರು.</p>.<p>ಶಾರದಾ ಸಂಗೀತ ಪಾಠ ಶಾಲೆಯ ಶಿಕ್ಷಕರು ಪ್ರಾರ್ಥಿಸಿದರು. ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಮಡಿವಾಳ ಸ್ವಾಗತಿಸಿದರು. ಶಿಕ್ಷಕಿ ಜ್ಯೋತಿ ಹುಳಗೋಳ ನಿರೂಪಿಸಿದರು. ಗುಂಡಪ್ಪ ಕರೆಮನೋರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ:</strong> ‘ಪ್ರಸ್ತುತ ದಿನಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯೇ ಜಾಣ ಎಂಬ ಮನಸ್ಥಿತಿ ಮಕ್ಕಳಲ್ಲಿ ಮೂಡುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ವಿದ್ಯಾರ್ಥಿಗಳಿಗೆ ಅಂಕದ ಜೊತೆಗೆ ಮೌಲ್ಯಯುತ ಶಿಕ್ಷಣ, ಸಂಸ್ಕಾರದ ಅವಶ್ಯಕತೆ ಇದೆ’ ಎಂದು ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಕೊತ್ತಲಬಸವೇಶ್ವರ ದೇವಾಲಯದ ನಾಗೇಂದ್ರ ಬ.ಪಾಟೀಲ ಆರೆಬೊಮ್ಮನಹಳ್ಳಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಶಿಕ್ಷಕ ವೃತ್ತಿಯಲ್ಲಿರುವವರಿಗೆ ಹಣಕ್ಕಿಂತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಧ್ಯೇಯ ದೊಡ್ಡದಾಗಿರಬೇಕು. ಶಾಲೆಗಳು ಸಾಮಾಜಿಕ ಪರಿವರ್ತನೆ ಕೇಂದ್ರವಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಕ ಸಮುದಾಯ ಕೆಲಸ ನಿರ್ವಹಿಸಬೇಕಿದೆ’ ಎಂದರು.</p>.<p>ಇಸ್ರೊ ವಿಜ್ಞಾನಿ ಎಚ್.ಎನ್.ಸುರೇಶಕುಮಾರ ಮಾತನಾಡಿ, ‘ವೈಜ್ಞಾನಿಕ, ತಂತ್ರಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಮುಂಚೂಣಿಯತ್ತ ಸಾಗುತ್ತಿದೆ. ಚಂದ್ರಯಾನ 3 ಭಾರತೀಯರ ಹೆಮ್ಮೆಯಾಗಿದೆ ಎಂದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವೈಜ್ಞಾನಿಕ ಗುಣ ಇರುತ್ತದೆ. ಅದನ್ನು ಹೆಕ್ಕಿ ತೆಗೆದು ಗುರುತಿಸುವ ಕೆಲಸ ಶಿಕ್ಷಕರಿಂದ ಸಮೃದ್ಧವಾಗಿ ಬೆಳೆಯಬೇಕಿದೆ’ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾನೇಹಿಗ ದಿನಚರಿ ಬಿಡುಗಡೆಗೊಳಿಸಲಾಯಿತು. </p>.<p>ವಿದ್ಯಾಭಾರತಿ ಜಿಲ್ಲಾ ಸಂರಕ್ಷಕ ಪಿ.ಭೀಮರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ್ ಮಾತನಾಡಿದರು. ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಂರಕ್ಷಕ ಬಸವರಾಜ ಪಾಟೀಲ್ ಸೇಡಂ, ವಿದ್ಯಾಭಾರತಿಯ ಹಿರಿಯ ಕಾರ್ಯಕರ್ತ ಜಿ.ಆರ್.ಜಗದೀಶ, ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಉಮೇಶಕುಮಾರ ಬೆಂಗಳೂರು ಇದ್ದರು.</p>.<p>ಶಾರದಾ ಸಂಗೀತ ಪಾಠ ಶಾಲೆಯ ಶಿಕ್ಷಕರು ಪ್ರಾರ್ಥಿಸಿದರು. ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಮಡಿವಾಳ ಸ್ವಾಗತಿಸಿದರು. ಶಿಕ್ಷಕಿ ಜ್ಯೋತಿ ಹುಳಗೋಳ ನಿರೂಪಿಸಿದರು. ಗುಂಡಪ್ಪ ಕರೆಮನೋರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>