ಆಳಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಕುರಿತು ಕಾರ್ಯಪಡೆ ಅಧಿಕಾರಿಗಳ ಸಭೆ ಜರುಗಿತು.
ಬರ ಸಂದರ್ಭದಲ್ಲಿ ಕೂಲಿಕಾರ್ಮಿಕರ ವಲಸೆ ತಪ್ಪಿಸಲು ಆಯಾ ಗ್ರಾ.ಪಂ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿ ಅಗತ್ಯ ಕೆಲಸ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ
- ಮಾನಪ್ಪ ಕಟ್ಟಿಮನಿ, ತಾ.ಪಂ ಇಒ ಆಳಂದ
ಉದ್ಯೋಗ ಖಾತ್ರಿ ಕಾಮಗಾರಿ ಅಡಿಯಲ್ಲಿ ನೀರು ಖಾಲಿಯಾದ ಕೆರೆ ಹಾಗೂ ಸಿರಪುರ ಮಾದರಿ ಕೆರೆ ಹಾಗೂ ಚೆಕ್ ಡ್ಯಾಂಗಳಲ್ಲಿನ ಹೂಳು ಎತ್ತುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಮುಂಬರುವ ಮಳೆಗಾಲದಲ್ಲಿ ಅನುಕೂಲವಾಗಲಿದೆ