<p><strong>ಕಲಬುರಗಿ:</strong> 2023–24ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ಕೃಷಿ ಆಧಾರಿತ ಉಪ ಕಸಬುಗಳು ಹಾಗೂ ಸಾವಯವ ಕೃಷಿ ಕುರಿತು ರೈತರಿಗೆ ಮೂರು ದಿನಗಳ ತರಬೇತಿಯನ್ನು ಕಲಬುರಗಿ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.</p>.<p>ಈ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಅನೀಲಕುಮಾರ ರಾಠೋಡ, ‘ರೈತರು ಸಾವಯವ ಕೃಷಿ, ಪಾರಂಪರಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಲಬುರಗಿ ಮಹಾಗಾಂವ್ ಕ್ರಾಸ್ ಹೈನುಗಾರಿಕಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮಲ್ಲಿನಾಥ ಹೆಮಾಡಿ ಮಾತನಾಡಿ, ದೇಶಿ ಗೋವಿನ ಮಹತ್ವ, ಅದರಿಂದ ತಯಾರಾಗುವ ಉತ್ಪನ್ನಗಳ ಉಪಯೋಗಗಳನ್ನು ತಿಳಿಸಿದರು.</p>.<p>ಎನ್ಆರ್ಎಲ್ಎಂ ಸಂಯೋಜಕ ಅಬ್ದುಲ್ ರಹೀಮ್ ಮಾತನಾಡಿ, ‘ರೈತರು ಒಗ್ಗಟ್ಟಾಗಿ ಸಾವಯವ ಕೃಷಿಯಲ್ಲಿ ತೊಡಗಬೇಕು. ಅತಿಯಾದ ರಾಸಾಯನಿಕಗಳ ಉಪಯೋಗದಿಂದ ನೆಲ–ಜಲ ಸಂಪತ್ತು ಕಲುಷಿತವಾಗುತ್ತಿದೆ. ಅದಕ್ಕೆ ಸಾವಯವ ಕೃಷಿಯೊಂದೇ ಸೂಕ್ತ ಪರಿಹಾರ’ ಎಂದರು.</p>.<p>ಕಾರ್ಯಕ್ರಮದಲ್ಲಿ ಕಲಬುರಗಿ ಸಾಯಿ ಸಮರ್ಥ ಗೃಹ ಉದ್ಯಮಿ ಅನ್ನಪೂರ್ಣ ಸಂಗೋಳಗಿ, ನಿವೃತ್ತ ಕೃಷಿ ಅಧಿಕಾರಿ ಲಕ್ಷ್ಮಣ ಕಡಬೂರ ಹಾಗೂ ಅಶೋಕಕುಮಾರ ಬೆಣ್ಣೂರ್ ಮಾತನಾಡಿದರು.</p>.<p>ಮಣ್ಣು ಪರೀಕ್ಷಾ ಕೇಂದ್ರ, ಕರ್ನಾಟಕ ಬೀಜ ಸಂಸ್ಕರಣಾ ಘಟಕ, ಕೃಷಿ ವಿಜ್ಞಾನ ಕೇಂದ್ರದ ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕೇಂದ್ರ, ಕಲಬುರಗಿ-ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸಹಕಾರಿ ಹಾಲು ಒಕ್ಕೂಟದ ಎಲ್ಲ 32 ರೈತರನ್ನು ಸಹಾಯಕ ಕೃಷಿ ನಿರ್ದೇಶಕ ಅನೀಲಕುಮಾರ ರಾಠೋಡ ಹಾಗೂ ಕೃಷಿ ಅಧಿಕಾರಿ ಯಾಸ್ಮಿನ್ ಅವರ ನೇತೃತ್ವದಲ್ಲಿ ಕ್ಷೇತ್ರ ಭೇಟಿ ಮಾಡಿಸಲಾಯಿತು.</p>.<p>ನಂತರ ತರಬೇತಿಯಲ್ಲಿ ಭಾಗವಹಿಸಿದ ಎಲ್ಲಾ ರೈತ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> 2023–24ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ಕೃಷಿ ಆಧಾರಿತ ಉಪ ಕಸಬುಗಳು ಹಾಗೂ ಸಾವಯವ ಕೃಷಿ ಕುರಿತು ರೈತರಿಗೆ ಮೂರು ದಿನಗಳ ತರಬೇತಿಯನ್ನು ಕಲಬುರಗಿ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.</p>.<p>ಈ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಅನೀಲಕುಮಾರ ರಾಠೋಡ, ‘ರೈತರು ಸಾವಯವ ಕೃಷಿ, ಪಾರಂಪರಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಲಬುರಗಿ ಮಹಾಗಾಂವ್ ಕ್ರಾಸ್ ಹೈನುಗಾರಿಕಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮಲ್ಲಿನಾಥ ಹೆಮಾಡಿ ಮಾತನಾಡಿ, ದೇಶಿ ಗೋವಿನ ಮಹತ್ವ, ಅದರಿಂದ ತಯಾರಾಗುವ ಉತ್ಪನ್ನಗಳ ಉಪಯೋಗಗಳನ್ನು ತಿಳಿಸಿದರು.</p>.<p>ಎನ್ಆರ್ಎಲ್ಎಂ ಸಂಯೋಜಕ ಅಬ್ದುಲ್ ರಹೀಮ್ ಮಾತನಾಡಿ, ‘ರೈತರು ಒಗ್ಗಟ್ಟಾಗಿ ಸಾವಯವ ಕೃಷಿಯಲ್ಲಿ ತೊಡಗಬೇಕು. ಅತಿಯಾದ ರಾಸಾಯನಿಕಗಳ ಉಪಯೋಗದಿಂದ ನೆಲ–ಜಲ ಸಂಪತ್ತು ಕಲುಷಿತವಾಗುತ್ತಿದೆ. ಅದಕ್ಕೆ ಸಾವಯವ ಕೃಷಿಯೊಂದೇ ಸೂಕ್ತ ಪರಿಹಾರ’ ಎಂದರು.</p>.<p>ಕಾರ್ಯಕ್ರಮದಲ್ಲಿ ಕಲಬುರಗಿ ಸಾಯಿ ಸಮರ್ಥ ಗೃಹ ಉದ್ಯಮಿ ಅನ್ನಪೂರ್ಣ ಸಂಗೋಳಗಿ, ನಿವೃತ್ತ ಕೃಷಿ ಅಧಿಕಾರಿ ಲಕ್ಷ್ಮಣ ಕಡಬೂರ ಹಾಗೂ ಅಶೋಕಕುಮಾರ ಬೆಣ್ಣೂರ್ ಮಾತನಾಡಿದರು.</p>.<p>ಮಣ್ಣು ಪರೀಕ್ಷಾ ಕೇಂದ್ರ, ಕರ್ನಾಟಕ ಬೀಜ ಸಂಸ್ಕರಣಾ ಘಟಕ, ಕೃಷಿ ವಿಜ್ಞಾನ ಕೇಂದ್ರದ ಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕೇಂದ್ರ, ಕಲಬುರಗಿ-ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸಹಕಾರಿ ಹಾಲು ಒಕ್ಕೂಟದ ಎಲ್ಲ 32 ರೈತರನ್ನು ಸಹಾಯಕ ಕೃಷಿ ನಿರ್ದೇಶಕ ಅನೀಲಕುಮಾರ ರಾಠೋಡ ಹಾಗೂ ಕೃಷಿ ಅಧಿಕಾರಿ ಯಾಸ್ಮಿನ್ ಅವರ ನೇತೃತ್ವದಲ್ಲಿ ಕ್ಷೇತ್ರ ಭೇಟಿ ಮಾಡಿಸಲಾಯಿತು.</p>.<p>ನಂತರ ತರಬೇತಿಯಲ್ಲಿ ಭಾಗವಹಿಸಿದ ಎಲ್ಲಾ ರೈತ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>