<p><strong>ವಾಡಿ</strong>: ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ಶನಿವಾರ ಬೆಳಿಗ್ಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>ಗ್ರಾಮಸ್ಥರ ಮಾಹಿತಿ ಬಳಿಕ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಪಖೆರಿ ಗ್ರಾಮದ ಅವದೇಶ ಮಿಶ್ರಾ(42) ಎಂದು ಗುರುತಿಸಲಾಗಿದೆ.</p>.<p>‘ಮೃತ ವ್ಯಕ್ತಿ 10 ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಸೋಮವಾರ ಬೆಂಗಳೂರು-ಗೋರಖಪುರ ರೈಲಿನಲ್ಲಿ ತನ್ನ ಸ್ವಗ್ರಾಮಕ್ಕೆ ಹೊರಟಿದ್ದ. ಲಾಡ್ಲಾಪುರ ಹತ್ತಿರ ಶವ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ವಾಸನೆ ಬಿರುತ್ತಿದ್ದರಿಂದ ವ್ಯಕ್ತಿ 4-5 ದಿನಗಳ ಹಿಂದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬೆನ್ನು, ಕೈಕಾಲು ಮೇಲೆ ಗಾಯದ ಗುರುತುಗಳು ಇದ್ದು, ಕಾಲುಗಳು ಕೊಳೆತು ಹೋಗಿವೆ.</p>.<p>ಮೃತನ ಸಹೋದರ ರಮೇಶ ರಮಾನಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ</strong>: ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದ ಹೊರವಲಯದಲ್ಲಿ ಶನಿವಾರ ಬೆಳಿಗ್ಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>ಗ್ರಾಮಸ್ಥರ ಮಾಹಿತಿ ಬಳಿಕ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಪಖೆರಿ ಗ್ರಾಮದ ಅವದೇಶ ಮಿಶ್ರಾ(42) ಎಂದು ಗುರುತಿಸಲಾಗಿದೆ.</p>.<p>‘ಮೃತ ವ್ಯಕ್ತಿ 10 ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಸೋಮವಾರ ಬೆಂಗಳೂರು-ಗೋರಖಪುರ ರೈಲಿನಲ್ಲಿ ತನ್ನ ಸ್ವಗ್ರಾಮಕ್ಕೆ ಹೊರಟಿದ್ದ. ಲಾಡ್ಲಾಪುರ ಹತ್ತಿರ ಶವ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ವಾಸನೆ ಬಿರುತ್ತಿದ್ದರಿಂದ ವ್ಯಕ್ತಿ 4-5 ದಿನಗಳ ಹಿಂದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬೆನ್ನು, ಕೈಕಾಲು ಮೇಲೆ ಗಾಯದ ಗುರುತುಗಳು ಇದ್ದು, ಕಾಲುಗಳು ಕೊಳೆತು ಹೋಗಿವೆ.</p>.<p>ಮೃತನ ಸಹೋದರ ರಮೇಶ ರಮಾನಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>