<p><strong>ಕಲಬುರಗಿ</strong>: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಪತಿ ಹಾಗೂ ಪತ್ನಿ ಪಕ್ಷೇತರರಾಗಿ ಕಣದಲ್ಲಿದ್ದು, ವಿಭಿನ್ನ ವಿಚಾರಗಳನ್ನು ಹೇಳುತ್ತಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ಕಲಬುರಗಿ ತಾಲ್ಲೂಕಿನ ಕೇರೂರ ಗ್ರಾಮದ ರಮೇಶ ಭೀಮಸಿಂಗ್ ಚವ್ಹಾಣ (39) ಹಾಗೂ ಅವರ ಪತ್ನಿ ಜ್ಯೋತಿ ರಮೇಶ ಚವ್ಹಾಣ (33) ಚುನಾವಣಾ ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದರೂ ಇಬ್ಬರೂ ಕಣದಲ್ಲಿ ಉಳಿಯುವ ನಿರ್ಧಾರ ಮಾಡಿದ್ದಾರೆ. </p>.<p>ಮಾಹಿತಿ ಹಕ್ಕು ಕಾರ್ಯಕರ್ತರಾಗಿರುವ ರಮೇಶ ಚವ್ಹಾಣ ಅವರಿಗೆ ಇದು ಐದನೇ ಚುನಾವಣೆ. 2018ರ ವಿಧಾನಸಭೆ ಚುನಾವಣೆ, 2019ರ ಚಿಂಚೋಳಿ ಉಪಚುನಾವಣೆ, 2019ರ ಲೋಕಸಭಾ ಚುನಾವಣೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿರುವ ರಮೇಶ ಅವರು, ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. </p>.<p>‘ಮದ್ಯ ಮಾರಾಟ ನಿಷೇಧ, ಮಟ್ಕಾದಂತಹ ಜೂಜಾಟ ನಿಷೇಧ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಐದು ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದೆ’ ಎಂದು ರಮೇಶ ಚವ್ಹಾಣ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಮದ್ಯಪಾನದಿಂದಾಗಿ ಕುಟುಂಬಗಳು ಹಾಳಾಗುತ್ತಿದ್ದು, ನಿರುದ್ಯೋಗವೂ ಜಾಸ್ತಿಯಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಲು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಪತಿ ನನ್ನ ಸ್ಪರ್ಧೆಗೆ ಅಡ್ಡಿ ಮಾಡಿಲ್ಲ. ಅವರ ಪಾಡಿಗೆ ಅವರು ಸ್ಪರ್ಧಿಸುತ್ತಾರೆ. ನನ್ನ ಪಾಡಿಗೆ ನಾನು ಸ್ಪರ್ಧಿಸಿದ್ದೇನೆ. ನಮ್ಮ ಮಧ್ಯೆ ಭಿನ್ನಮತ ಇಲ್ಲ. ಒಟ್ಟಿಗೇ ಇದ್ದೇವೆ’ ಎಂದು ಜ್ಯೋತಿ ಚವ್ಹಾಣ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಪತಿ ಹಾಗೂ ಪತ್ನಿ ಪಕ್ಷೇತರರಾಗಿ ಕಣದಲ್ಲಿದ್ದು, ವಿಭಿನ್ನ ವಿಚಾರಗಳನ್ನು ಹೇಳುತ್ತಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ಕಲಬುರಗಿ ತಾಲ್ಲೂಕಿನ ಕೇರೂರ ಗ್ರಾಮದ ರಮೇಶ ಭೀಮಸಿಂಗ್ ಚವ್ಹಾಣ (39) ಹಾಗೂ ಅವರ ಪತ್ನಿ ಜ್ಯೋತಿ ರಮೇಶ ಚವ್ಹಾಣ (33) ಚುನಾವಣಾ ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದರೂ ಇಬ್ಬರೂ ಕಣದಲ್ಲಿ ಉಳಿಯುವ ನಿರ್ಧಾರ ಮಾಡಿದ್ದಾರೆ. </p>.<p>ಮಾಹಿತಿ ಹಕ್ಕು ಕಾರ್ಯಕರ್ತರಾಗಿರುವ ರಮೇಶ ಚವ್ಹಾಣ ಅವರಿಗೆ ಇದು ಐದನೇ ಚುನಾವಣೆ. 2018ರ ವಿಧಾನಸಭೆ ಚುನಾವಣೆ, 2019ರ ಚಿಂಚೋಳಿ ಉಪಚುನಾವಣೆ, 2019ರ ಲೋಕಸಭಾ ಚುನಾವಣೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿರುವ ರಮೇಶ ಅವರು, ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. </p>.<p>‘ಮದ್ಯ ಮಾರಾಟ ನಿಷೇಧ, ಮಟ್ಕಾದಂತಹ ಜೂಜಾಟ ನಿಷೇಧ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಐದು ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದೆ’ ಎಂದು ರಮೇಶ ಚವ್ಹಾಣ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಮದ್ಯಪಾನದಿಂದಾಗಿ ಕುಟುಂಬಗಳು ಹಾಳಾಗುತ್ತಿದ್ದು, ನಿರುದ್ಯೋಗವೂ ಜಾಸ್ತಿಯಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಲು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಪತಿ ನನ್ನ ಸ್ಪರ್ಧೆಗೆ ಅಡ್ಡಿ ಮಾಡಿಲ್ಲ. ಅವರ ಪಾಡಿಗೆ ಅವರು ಸ್ಪರ್ಧಿಸುತ್ತಾರೆ. ನನ್ನ ಪಾಡಿಗೆ ನಾನು ಸ್ಪರ್ಧಿಸಿದ್ದೇನೆ. ನಮ್ಮ ಮಧ್ಯೆ ಭಿನ್ನಮತ ಇಲ್ಲ. ಒಟ್ಟಿಗೇ ಇದ್ದೇವೆ’ ಎಂದು ಜ್ಯೋತಿ ಚವ್ಹಾಣ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>