ಮಡಿಕೇರಿ: ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಸಂಜೆ ನದಿಗೆ ನೀರನ್ನು ಹೊರಬಿಡಲಾಯಿತು.
ಜಲಾಶಯದ ಎಲ್ಲ 4 ಕ್ರೆಸ್ಟ್ಗೇಟ್ಗಳನ್ನು ತೆರೆದು ಒಂದು ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಯಿತು. ಜಲಾಶಯ ತುಂಬಲು ಇನ್ನೂ 10 ಅಡಿಗಳು ಬಾಕಿ ಇದೆ. ನದಿ ದಂಡೆಯ ನಿವಾಸಿಗಳ ಸುರಕ್ಷತೆಯ ದೃಷ್ಟಿಯಿಂದ ಭರ್ತಿಗೂ ಮುನ್ನವೇ ನೀರನ್ನು ಹೊರಬಿಡಲಾಗುತ್ತಿದೆ.
ಈ ವೇಳೆ ಶಾಸಕ ಡಾ.ಮಂತರ್ಗೌಡ, ತಹಶೀಲ್ದಾರ್ ಕಿರಣ್ಗೌರಯ್ಯ, ಕಾಡಾ ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಇದ್ದರು.