<p><strong>ಮಡಿಕೇರಿ:</strong> ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯ ಬಳಿ ‘ಮಡಿಕಟ್ಟೆ’ ನಿರ್ಮಿಸುವ ಕುರಿತು ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಭರವಸೆ ನೀಡಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿವಾಳರ ಅಭಿವೃದ್ಧಿ ಸಂಘದಿಂದ ಇಲ್ಲಿನ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ಭಾನುವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಡಿವಾಳ ಸಮಾಜದವರು ‘ಕಾಯಕವೇ ಕೈಲಾಸ’ ಎಂಬಂತೆ ಕಾಯಕ ವೃತ್ತಿ ಮೂಲಕ ಸಮಾಜದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಅವರು ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಮಹಿಳೆಯರು, ವೃತ್ತಿನಿರತ ಶ್ರಮ ಜೀವಿಗಳು, ಬಡವರು ಮೇಲೆ ಬರಬೇಕು. ಎಲ್ಲರಿಗೂ ‘ಸಮಬಾಳು-ಸಮಪಾಲು’ ಎಂಬ ಶರಣರ ಸಂದೇಶವನ್ನು ಸಮಾಜದಲ್ಲಿ ಹೇಳಿದವರಲ್ಲಿ ಮಡಿವಾಳ ಮಾಚಿದೇವ ಅವರೂ ಒಬ್ಬರು’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ‘ಕೊಳಕನ್ನು ಹೋಗಲಾಡಿಸಿ ಸ್ವಚ್ಛತೆಯಿಂದ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವ ಗುರಿ ಶರಣ ಮಡಿವಾಳ ಮಾಚಿದೇವರ ಬದುಕಾಗಿತ್ತು’ ಎಂದರು.</p>.<p>12ನೇ ಶತಮಾನದಲ್ಲಿ ಕ್ರಾಂತಿಕಾರಕ ಹೋರಾಟ ನಡೆಸಿ ಶರಣರ ವಚನಗಳನ್ನು ಜನರಲ್ಲಿ ಬಿತ್ತಲು ಪ್ರಯತ್ನಿಸಿದರು ಎಂದು ಅವರು ಹೇಳಿದರು.</p>.<p>‘ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ಹಿಪ್ಪರಗಿಯ ಪರುತಯ್ಯ ಮತ್ತು ಸುಜ್ಞಾನವ್ವ ದಂಪತಿಗಳ ಪುತ್ರನಾಗಿ ರತ್ನ-ಶರಣ ಕಿರಣ ಮಡಿವಾಳ ಮಾಚಿದೇವರು ಜನಿಸಿದರು. ಅವರು ಹುಟ್ಟಿನಿಂದ ಮಡಿವಾಳರಾಗಿದ್ದರೂ, ಅಚಲ ಕಾಯಕ ನಿಷ್ಠರಾಗಿದ್ದರು’ ಎಂದರು.</p>.<p>‘ಭಾರತದ ಇತಿಹಾಸದಲ್ಲಿ ಸಂಸತ್ ಭವನ ಮೊದಲು ಅಸ್ತಿತ್ವಕ್ಕೆ ಬಂದದ್ದು ಬಸವ ಕಲ್ಯಾಣದಲ್ಲಿ. ಅನುಭವ ಮಂಟಪ ಕಟ್ಟುವಲ್ಲಿ ಶರಣರೊಂದಿಗೆ ಮಡಿವಾಳ ಮಾಚಿದೇವರು ಶಕ್ತಿ ಮೀರಿ ದುಡಿದಿದ್ದಾರೆ’ ಎಂದು ವಿವರಿಸಿದರು.</p>.<p>ರಾಜ್ಯದಲ್ಲಿ ಮಡಿವಾಳ ಸಮಾಜವು 8 ಲಕ್ಷ ಜನಸಂಖ್ಯೆ ಹೊಂದಿದ್ದು, ಹಿಂದುಳಿದ ವರ್ಗವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಹಲವು ಸವಲತ್ತುಗಳನ್ನು ಪಡೆದು ಮುಖ್ಯವಾಹಿನಿಗೆ ಬರಬೇಕು ಎಂದರು.</p>.<p>ಹಿರಿಯ ಮುಖಂಡರಾದ ಸುಬ್ರಹ್ಮಣ್ಯ, ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ದೀಪಿಕಾ ಸಂದೀಪ್, ಜ್ಯೋತಿ, ಕಾರ್ತಿಕ್ ಭಾಗವಹಿಸಿದ್ದರು.</p>.<div><blockquote>ವೀರಭದ್ರ ಮುನೇಶ್ವರ ದೇವಾಲಯ ಬಳಿ ಈ ಹಿಂದೆ ನಗರಸಭೆಯಿಂದ ಸೇತುವೆ ನಿರ್ಮಿಸಲಾಗಿದೆ. ಅದೇ ರೀತಿ ಈ ಬಾರಿ ಮಡಿಕಟ್ಟೆ ನಿರ್ಮಿಸಬೇಕು. </blockquote><span class="attribution">ಪಿ.ಜಿ.ಸುಕುಮಾರ್ ಮಡಿವಾಳರ ಸಂಘದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯ ಬಳಿ ‘ಮಡಿಕಟ್ಟೆ’ ನಿರ್ಮಿಸುವ ಕುರಿತು ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಭರವಸೆ ನೀಡಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿವಾಳರ ಅಭಿವೃದ್ಧಿ ಸಂಘದಿಂದ ಇಲ್ಲಿನ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ಭಾನುವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಡಿವಾಳ ಸಮಾಜದವರು ‘ಕಾಯಕವೇ ಕೈಲಾಸ’ ಎಂಬಂತೆ ಕಾಯಕ ವೃತ್ತಿ ಮೂಲಕ ಸಮಾಜದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಅವರು ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಮಹಿಳೆಯರು, ವೃತ್ತಿನಿರತ ಶ್ರಮ ಜೀವಿಗಳು, ಬಡವರು ಮೇಲೆ ಬರಬೇಕು. ಎಲ್ಲರಿಗೂ ‘ಸಮಬಾಳು-ಸಮಪಾಲು’ ಎಂಬ ಶರಣರ ಸಂದೇಶವನ್ನು ಸಮಾಜದಲ್ಲಿ ಹೇಳಿದವರಲ್ಲಿ ಮಡಿವಾಳ ಮಾಚಿದೇವ ಅವರೂ ಒಬ್ಬರು’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ‘ಕೊಳಕನ್ನು ಹೋಗಲಾಡಿಸಿ ಸ್ವಚ್ಛತೆಯಿಂದ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವ ಗುರಿ ಶರಣ ಮಡಿವಾಳ ಮಾಚಿದೇವರ ಬದುಕಾಗಿತ್ತು’ ಎಂದರು.</p>.<p>12ನೇ ಶತಮಾನದಲ್ಲಿ ಕ್ರಾಂತಿಕಾರಕ ಹೋರಾಟ ನಡೆಸಿ ಶರಣರ ವಚನಗಳನ್ನು ಜನರಲ್ಲಿ ಬಿತ್ತಲು ಪ್ರಯತ್ನಿಸಿದರು ಎಂದು ಅವರು ಹೇಳಿದರು.</p>.<p>‘ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ಹಿಪ್ಪರಗಿಯ ಪರುತಯ್ಯ ಮತ್ತು ಸುಜ್ಞಾನವ್ವ ದಂಪತಿಗಳ ಪುತ್ರನಾಗಿ ರತ್ನ-ಶರಣ ಕಿರಣ ಮಡಿವಾಳ ಮಾಚಿದೇವರು ಜನಿಸಿದರು. ಅವರು ಹುಟ್ಟಿನಿಂದ ಮಡಿವಾಳರಾಗಿದ್ದರೂ, ಅಚಲ ಕಾಯಕ ನಿಷ್ಠರಾಗಿದ್ದರು’ ಎಂದರು.</p>.<p>‘ಭಾರತದ ಇತಿಹಾಸದಲ್ಲಿ ಸಂಸತ್ ಭವನ ಮೊದಲು ಅಸ್ತಿತ್ವಕ್ಕೆ ಬಂದದ್ದು ಬಸವ ಕಲ್ಯಾಣದಲ್ಲಿ. ಅನುಭವ ಮಂಟಪ ಕಟ್ಟುವಲ್ಲಿ ಶರಣರೊಂದಿಗೆ ಮಡಿವಾಳ ಮಾಚಿದೇವರು ಶಕ್ತಿ ಮೀರಿ ದುಡಿದಿದ್ದಾರೆ’ ಎಂದು ವಿವರಿಸಿದರು.</p>.<p>ರಾಜ್ಯದಲ್ಲಿ ಮಡಿವಾಳ ಸಮಾಜವು 8 ಲಕ್ಷ ಜನಸಂಖ್ಯೆ ಹೊಂದಿದ್ದು, ಹಿಂದುಳಿದ ವರ್ಗವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಹಲವು ಸವಲತ್ತುಗಳನ್ನು ಪಡೆದು ಮುಖ್ಯವಾಹಿನಿಗೆ ಬರಬೇಕು ಎಂದರು.</p>.<p>ಹಿರಿಯ ಮುಖಂಡರಾದ ಸುಬ್ರಹ್ಮಣ್ಯ, ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ದೀಪಿಕಾ ಸಂದೀಪ್, ಜ್ಯೋತಿ, ಕಾರ್ತಿಕ್ ಭಾಗವಹಿಸಿದ್ದರು.</p>.<div><blockquote>ವೀರಭದ್ರ ಮುನೇಶ್ವರ ದೇವಾಲಯ ಬಳಿ ಈ ಹಿಂದೆ ನಗರಸಭೆಯಿಂದ ಸೇತುವೆ ನಿರ್ಮಿಸಲಾಗಿದೆ. ಅದೇ ರೀತಿ ಈ ಬಾರಿ ಮಡಿಕಟ್ಟೆ ನಿರ್ಮಿಸಬೇಕು. </blockquote><span class="attribution">ಪಿ.ಜಿ.ಸುಕುಮಾರ್ ಮಡಿವಾಳರ ಸಂಘದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>