<p><strong>ವಿರಾಜಪೇಟೆ:</strong> ಸಮೀಪದ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಮೇರಿಯಲ್ಲಿ ಪನ್ನಂಗಾಲತಮ್ಮೆ ದೇವಿಯ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಈಚೆಗೆ ಮುಕ್ತಾಯಗೊಂಡಿತು.</p>.<p>ಮೊದಲ ದಿನ ಉತ್ಸವ ಮೂರ್ತಿಯನ್ನು ಎಳನೀರಿನಿಂದ ಶುದ್ಧಗೊಳಿಸಿ ಪೂಜೆ ಸಲ್ಲಿಸಲಾಯಿತು. ಮುಂಜಾನೆ ಬಾಚೀರ ಮನೆಯಿಂದ ಭಂಡಾರವನ್ನು ದೇವಾಲಯಕ್ಕೆ ತರಲಾಯಿತು. ಬೆಳಿಗ್ಗೆ 10ರಿಂದ ದೇವರ ವಿಶೇಷ ದರ್ಶನ ನಡೆಯಿತು.</p>.<p>ಮರುದಿನ ಪನ್ನಂಗಾಲತಮ್ಮೆ ಉತ್ಸವದ ಪ್ರಮುಖ ಆಕರ್ಷಣೆಯಾದ ದೇವಿಯ ಕೊಡೆ ತರುವ ಧಾರ್ಮಿಕ ವಿಧಾನವನ್ನು ನೆರವೇರಿಸಲಾಯಿತು. ಈ ಸಂದರ್ಭ ಗದ್ದೆಯ ಮೂಲಕ ಕೊಡೆಯನ್ನು ಹೊತ್ತ ಭಕ್ತರು ದೇವಾಲಯವನ್ನು ಪ್ರವೇಶಿಸಿದರು.</p>.<p>ದೇವಾಲಯಕ್ಕೆ ಪ್ರದಕ್ಷಿಣೆ ಸಲ್ಲಿಸಿ ಕೊಡೆಯನ್ನು ಉತ್ಸವ ಮೂರ್ತಿಯ ಬಳಿ ಇಡಲಾಯಿತು. ಉತ್ಸವದ ಸಂದರ್ಭ ಭಕ್ತರು ತಾವು ಹೊತ್ತ ಹರಕೆಗಳನ್ನು ಸಮರ್ಪಿಸಿದರು. ಸಂಜೆ ದೇವಿಯ ಉತ್ಸವ ಮೂರ್ತಿಯು ದೇವಾಲಯಕ್ಕೆ ಪ್ರದಕ್ಷಿಣೆ ಬರುವುದರೊಂದಿಗೆ ಉತ್ಸವಕ್ಕೆ ತೆರೆ ಎಳೆಯಲಾಯಿತು. ಉತ್ಸವದ ಸಂದರ್ಭ ಅನ್ನಸಂತರ್ಪಣೆ ನಡೆಯಿತು.</p>.<p>ಶಾಸಕ ಎ.ಎಸ್. ಪೊನ್ನಣ್ಣ ಅವರು ಉತ್ಸವದಲ್ಲಿ ಭಾಗವಹಿಸಿದ್ದರು. ಉತ್ಸವದಲ್ಲಿ ತಕ್ಕ ಮುಖ್ಯಸ್ಥರು, ಊರು ತಕ್ಕರು, ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ವಿವಿಧ ಗ್ರಾಮಗಳಿಂದ ಆಗಮಿಸಿದ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಸಮೀಪದ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಮೇರಿಯಲ್ಲಿ ಪನ್ನಂಗಾಲತಮ್ಮೆ ದೇವಿಯ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಈಚೆಗೆ ಮುಕ್ತಾಯಗೊಂಡಿತು.</p>.<p>ಮೊದಲ ದಿನ ಉತ್ಸವ ಮೂರ್ತಿಯನ್ನು ಎಳನೀರಿನಿಂದ ಶುದ್ಧಗೊಳಿಸಿ ಪೂಜೆ ಸಲ್ಲಿಸಲಾಯಿತು. ಮುಂಜಾನೆ ಬಾಚೀರ ಮನೆಯಿಂದ ಭಂಡಾರವನ್ನು ದೇವಾಲಯಕ್ಕೆ ತರಲಾಯಿತು. ಬೆಳಿಗ್ಗೆ 10ರಿಂದ ದೇವರ ವಿಶೇಷ ದರ್ಶನ ನಡೆಯಿತು.</p>.<p>ಮರುದಿನ ಪನ್ನಂಗಾಲತಮ್ಮೆ ಉತ್ಸವದ ಪ್ರಮುಖ ಆಕರ್ಷಣೆಯಾದ ದೇವಿಯ ಕೊಡೆ ತರುವ ಧಾರ್ಮಿಕ ವಿಧಾನವನ್ನು ನೆರವೇರಿಸಲಾಯಿತು. ಈ ಸಂದರ್ಭ ಗದ್ದೆಯ ಮೂಲಕ ಕೊಡೆಯನ್ನು ಹೊತ್ತ ಭಕ್ತರು ದೇವಾಲಯವನ್ನು ಪ್ರವೇಶಿಸಿದರು.</p>.<p>ದೇವಾಲಯಕ್ಕೆ ಪ್ರದಕ್ಷಿಣೆ ಸಲ್ಲಿಸಿ ಕೊಡೆಯನ್ನು ಉತ್ಸವ ಮೂರ್ತಿಯ ಬಳಿ ಇಡಲಾಯಿತು. ಉತ್ಸವದ ಸಂದರ್ಭ ಭಕ್ತರು ತಾವು ಹೊತ್ತ ಹರಕೆಗಳನ್ನು ಸಮರ್ಪಿಸಿದರು. ಸಂಜೆ ದೇವಿಯ ಉತ್ಸವ ಮೂರ್ತಿಯು ದೇವಾಲಯಕ್ಕೆ ಪ್ರದಕ್ಷಿಣೆ ಬರುವುದರೊಂದಿಗೆ ಉತ್ಸವಕ್ಕೆ ತೆರೆ ಎಳೆಯಲಾಯಿತು. ಉತ್ಸವದ ಸಂದರ್ಭ ಅನ್ನಸಂತರ್ಪಣೆ ನಡೆಯಿತು.</p>.<p>ಶಾಸಕ ಎ.ಎಸ್. ಪೊನ್ನಣ್ಣ ಅವರು ಉತ್ಸವದಲ್ಲಿ ಭಾಗವಹಿಸಿದ್ದರು. ಉತ್ಸವದಲ್ಲಿ ತಕ್ಕ ಮುಖ್ಯಸ್ಥರು, ಊರು ತಕ್ಕರು, ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ವಿವಿಧ ಗ್ರಾಮಗಳಿಂದ ಆಗಮಿಸಿದ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>