<p><strong>ಮಡಿಕೇರಿ</strong>: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಬಿ.ವೈ.ರಾಜೇಶ್ ಅವರು ಇಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು.</p>.<p>ಈ ವೇಳೆ ಮಾತನಾಡಿದ ಶಾಸಕ ಡಾ.ಮಂತರ್ಗೌಡ, ‘ಯಾವುದೇ ಕಡತವಿರಲಿ ಅದನ್ನು ಪರಿಶೀಲಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿ’ ಎಂದು ನೂತನ ಆಡಳಿತ ಮಂಡಳಿಗೆ ಕಿವಿಮಾತು ಹೇಳಿದರು.</p>.<p>ಹಿರಿಯ ಮತ್ತು ಕಿರಿಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಮಡಿಕೇರಿ ನಗರದ ಜನತೆಗೆ ತೊಂದರೆಯಾಗದ ಹಾಗೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ನೂತನ ಅಧ್ಯಕ್ಷ ಬಿ.ವೈ.ರಾಜೇಶ್ ಮಾತನಾಡಿ, ‘ಮುಡಾದಲ್ಲಿ ಇತ್ಯರ್ಥವಾಗದೇ ಇರುವ ಕಡತಗಳ ವಿಲೇವಾರಿಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಮಾತನಾಡಿ, ‘ಮಡಿಕೇರಿ ನಗರವನ್ನು ಸಮಸ್ಯೆ ಮುಕ್ತ ನಗರವಾಗಿಸಲು ಮುಡಾ ಆಡಳಿತ ಮಂಡಳಿ ಪ್ರಯತ್ನಿಸಬೇಕು’ ಎಂದು ಹೇಳಿದರು.</p>.<p>ವಿಧಾನಪರಿಷತ್ತಿನ ನಿಕಟಪೂರ್ವ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ‘ನೂತನ ಆಡಳಿತ ಮಂಡಳಿಯಿಂದ ಉತ್ತಮ ಕೆಲಸ ಆಗುವ ಭರವಸೆ ನನಗಿದೆ’ ಎಂದರು.</p>.<p>ಮುಡಾ ನೂತನ ಸದಸ್ಯರಾದ ಕಾನೆಹಿತ್ಲು ಮೊಣ್ಣಪ್ಪ, ಚಂದ್ರಶೇಖರ್, ಮೀನಾಜ್ ಪ್ರವೀಣ್, ಸುದಯ್ ನಾಣಯ್ಯ, ಮುಖಂಡರಾದ ಟಿ.ಪಿ.ರಮೇಶ್, ಸುರಯ್ಯ ಅಬ್ರಾರ್, ಕಳಲೆ ಕೇಶವಮೂರ್ತಿ, ಚುಮ್ಮಿದೇವಯ್ಯ, ಪ್ರಮೋದ್ ಮುತ್ತಪ್ಪ, ಹಂಜ್ಹ, ವಿ.ಪಿ.ಶಶಿಧರ್, ಸತೀಶ್ ಕುಮಾರ್, ಎಚ್.ಎಂ.ನಂದಕುಮಾರ್, ಜೆ.ಜೆ.ಕಾವೇರಪ್ಪ, ತೆನ್ನಿರ ಮೈನಾ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಬಿ.ವೈ.ರಾಜೇಶ್ ಅವರು ಇಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು.</p>.<p>ಈ ವೇಳೆ ಮಾತನಾಡಿದ ಶಾಸಕ ಡಾ.ಮಂತರ್ಗೌಡ, ‘ಯಾವುದೇ ಕಡತವಿರಲಿ ಅದನ್ನು ಪರಿಶೀಲಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿ’ ಎಂದು ನೂತನ ಆಡಳಿತ ಮಂಡಳಿಗೆ ಕಿವಿಮಾತು ಹೇಳಿದರು.</p>.<p>ಹಿರಿಯ ಮತ್ತು ಕಿರಿಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಮಡಿಕೇರಿ ನಗರದ ಜನತೆಗೆ ತೊಂದರೆಯಾಗದ ಹಾಗೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ನೂತನ ಅಧ್ಯಕ್ಷ ಬಿ.ವೈ.ರಾಜೇಶ್ ಮಾತನಾಡಿ, ‘ಮುಡಾದಲ್ಲಿ ಇತ್ಯರ್ಥವಾಗದೇ ಇರುವ ಕಡತಗಳ ವಿಲೇವಾರಿಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಮಾತನಾಡಿ, ‘ಮಡಿಕೇರಿ ನಗರವನ್ನು ಸಮಸ್ಯೆ ಮುಕ್ತ ನಗರವಾಗಿಸಲು ಮುಡಾ ಆಡಳಿತ ಮಂಡಳಿ ಪ್ರಯತ್ನಿಸಬೇಕು’ ಎಂದು ಹೇಳಿದರು.</p>.<p>ವಿಧಾನಪರಿಷತ್ತಿನ ನಿಕಟಪೂರ್ವ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ‘ನೂತನ ಆಡಳಿತ ಮಂಡಳಿಯಿಂದ ಉತ್ತಮ ಕೆಲಸ ಆಗುವ ಭರವಸೆ ನನಗಿದೆ’ ಎಂದರು.</p>.<p>ಮುಡಾ ನೂತನ ಸದಸ್ಯರಾದ ಕಾನೆಹಿತ್ಲು ಮೊಣ್ಣಪ್ಪ, ಚಂದ್ರಶೇಖರ್, ಮೀನಾಜ್ ಪ್ರವೀಣ್, ಸುದಯ್ ನಾಣಯ್ಯ, ಮುಖಂಡರಾದ ಟಿ.ಪಿ.ರಮೇಶ್, ಸುರಯ್ಯ ಅಬ್ರಾರ್, ಕಳಲೆ ಕೇಶವಮೂರ್ತಿ, ಚುಮ್ಮಿದೇವಯ್ಯ, ಪ್ರಮೋದ್ ಮುತ್ತಪ್ಪ, ಹಂಜ್ಹ, ವಿ.ಪಿ.ಶಶಿಧರ್, ಸತೀಶ್ ಕುಮಾರ್, ಎಚ್.ಎಂ.ನಂದಕುಮಾರ್, ಜೆ.ಜೆ.ಕಾವೇರಪ್ಪ, ತೆನ್ನಿರ ಮೈನಾ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>