ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಂಟಿಕೊಪ್ಪ: ಚಾಮುಂಡೇಶ್ವರಿಗೆ ಭಸ್ಮಾಲಂಕಾರ

Published : 7 ಅಕ್ಟೋಬರ್ 2024, 5:04 IST
Last Updated : 7 ಅಕ್ಟೋಬರ್ 2024, 5:04 IST
ಫಾಲೋ ಮಾಡಿ
Comments

ಸುಂಟಿಕೊಪ್ಪ: ಇಲ್ಲಿನ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ನಾಲ್ಕನೇ ದಿನವಾದ ಭಾನುವಾರ ಬೆಳಿಗ್ಗೆ ದೇವಿಗೆ ನೈವೇದ್ಯ ಪೂಜೆ, ಮಲ್ಲಿಗೆ ಹೂವಿನ ಪೂಜೆ, ಪುಷ್ಪಾರ್ಚನೆ ಹಾಗೂ ಗಂಧದ ಅಭಿಷೇಕ ನಡೆಯಿತು.

ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ಅವರ ನೇತೃತ್ವದಲ್ಲಿ ಸಂಜೆ ವಿಶೇಷ ಪೂಜೆ, ಮಹಾಪೂಜೆ ನಂತರ ದೇವಿಗೆ ಭಸ್ಮದ ಅಲಂಕಾರ ಮಾಡುವ ಮೂಲಕ ದೇವಾಲಯದಲ್ಲಿ ಭಕ್ತರಿಗೆ ಪೂಜೆಗೆ ಅವಕಾಶ ನೀಡಲಾಯಿತು. ರಾತ್ರಿ ಮಹಾಪೂಜೆ, ಆರತಿ ಪೂಜೆ, ತುಪ್ಪದ ದೀಪ ಆರಾಧನೆ ನಡೆಯಿತು.

ಹೋಬಳಿ ವ್ಯಾಪ್ತಿಯ ನೂರಾರು‌ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ರಾತ್ರಿ 9 ಗಂಟೆಗೆ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT