ಸುಂಟಿಕೊಪ್ಪ: ಇಲ್ಲಿನ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ನಾಲ್ಕನೇ ದಿನವಾದ ಭಾನುವಾರ ಬೆಳಿಗ್ಗೆ ದೇವಿಗೆ ನೈವೇದ್ಯ ಪೂಜೆ, ಮಲ್ಲಿಗೆ ಹೂವಿನ ಪೂಜೆ, ಪುಷ್ಪಾರ್ಚನೆ ಹಾಗೂ ಗಂಧದ ಅಭಿಷೇಕ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ಅವರ ನೇತೃತ್ವದಲ್ಲಿ ಸಂಜೆ ವಿಶೇಷ ಪೂಜೆ, ಮಹಾಪೂಜೆ ನಂತರ ದೇವಿಗೆ ಭಸ್ಮದ ಅಲಂಕಾರ ಮಾಡುವ ಮೂಲಕ ದೇವಾಲಯದಲ್ಲಿ ಭಕ್ತರಿಗೆ ಪೂಜೆಗೆ ಅವಕಾಶ ನೀಡಲಾಯಿತು. ರಾತ್ರಿ ಮಹಾಪೂಜೆ, ಆರತಿ ಪೂಜೆ, ತುಪ್ಪದ ದೀಪ ಆರಾಧನೆ ನಡೆಯಿತು.
ಹೋಬಳಿ ವ್ಯಾಪ್ತಿಯ ನೂರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ರಾತ್ರಿ 9 ಗಂಟೆಗೆ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.