<p>ವಿರಾಜಪೇಟೆ: ಕಾರ್ಗಿಲ್ ವಿಜಯೋತ್ಸವ ಆಚರಣೆಯ ಮೂಲಕ ವೀರಗತಿ ಪ್ರಾಪ್ತಿಯಾದ ಯೋಧರ ಸ್ಮರಣೆಯು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ನಿವೃತ್ತ ಮೇಜರ್ ಜನರಲ್. ಬಿ.ಎ.ಕಾರ್ಯಪ್ಪ ಅವರು ಅಭಿಪ್ರಾಯಪಟ್ಟರು.</p>.<p>ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆ ವತಿಯಿಂದ ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಯೋಧರ ಸ್ಮಾರಕ ಬಳಿ ಶುಕ್ರವಾರ ನಡೆದ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>ಭಾರತೀಯ ಸೇನೆಯ ಅಪ್ರತಿಮ ಹೋರಾಟ ಮತ್ತು ಪಾಕಿಸ್ತಾನ ಸೇನೆಗೆ ದಿಟ್ಟ ಉತ್ತರ ನೀಡಿದ ಯೋಧರ ಸಾಹಸ ಮತ್ತು ತ್ಯಾಗ ಬಲಿದಾನಗಳನ್ನು ಎಂದಿಗೂ ಸ್ಮರಿಸಬೇಕು ಎಂದು ಅವರು ಹೇಳಿದರು.</p>.<p>ಪ್ರಸ್ತಾವಿಕ ಭಾಷಣ ಮಾಡಿದ ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆಯ ಅಧ್ಯಕ್ಷ ಚಪ್ಪಂಡ ಹರೀಶ್ ಅವರು ‘ಸಂಘವು ಕಾರ್ಗಿಲ್ ಯುದ್ದದಲ್ಲಿ ವೀರ ಮರಣಹೊಂದಿದ್ದ ಸೈನಿಕರನ್ನು ನೆನಪಿಸಲು ಪ್ರತಿವರ್ಷ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ಸಂಘದೊಂದಿಗೆ ಹಲವಾರು ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿರುವುದು ಭಾರತೀಯ ಸೇನೆ ಮತ್ತು ಯೋಧರ ಮೇಲಿರುವ ಅಭಿಮಾನವನ್ನು ಎತ್ತಿ ತೋರಿಸುತ್ತದೆ’ ಎಂದು ಹೇಳಿದರು.</p>.<p>ವಿರಾಜಪೇಟೆ ನಗರ ಠಾಣೆಯ ಠಾಣಾಧಿಕಾರಿಗಳಾದ ರವೀಂದ್ರ ಮಾತನಾಡಿ, ‘ಸ್ವತಂತ್ರದ ಬಳಿಕ ಹಲವು ಬಾರಿ ಪಾಕಿಸ್ತಾನ ಭಾರತದ ಮೇಲೆ ಆಕ್ರಮಣಗಳನ್ನು ಮಾಡಿದೆ. ಆದರೆ, ಭಾರತೀಯ ಸೇನೆಯ ದಿಟ್ಟ ಉತ್ತರದಿಂದಾಗಿ ಭಾರತವು ಸುರಕ್ಷಿತವಾಗಿದೆ. ಕಾರ್ಗಿಲ್ ಹೋರಾಟದಲ್ಲಿ ವೀರ ಮರಣ ಹೊಂದಿದ ಸೈನಿಕರನ್ನು ಎಂದಿಗೂ ಸ್ಮರಿಸುವಂತಾಗಬೇಕು’ ಎಂದು ಹೇಳಿದರು.</p>.<p>ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆಯ ಸದಸ್ಯ ಸಂಶು ಅವರು ಕಾರ್ಗಿಲ್ ಹೋರಾಟ ಮತ್ತು ಸೈನಿಕರ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡಿದರು.</p>.<p>ಕಾರ್ಯಕ್ರಮದ ಮೊದಲಿಗೆ ನಗರದ ವಿವಿಧ ಶಾಲೆಗಳು ಸ್ಕೌಟ್ಸ್ ಗೈಡ್ಸ್, ಎನ್.ಸಿ.ಸಿ, ವಿವಿಧ ಸಂಘ ಸಂಸ್ಥೆಗಳ ಪಧಾಧಿಕಾರಿಗಳ ಮೆರವಣಿಗೆ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ದಂಡಾಧಿಕಾರಿಗಳಾದ ರಾಮಚಂದ್ರ, ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿಗಳಾದ ಎ.ಚಂದ್ರಕುಮಾರ್, ಎಸ್.ಬಿ.ಐ. ವಿರಾಜಪೇಟೆ ಶಾಖೆಯ ವ್ಯವಸ್ಥಾಪಕರು, ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆ ಪದಾಧಿಕಾರಿಗಳು, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಕೊಡವ ಸಮಾಜ, ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ, ಸಂಘ ಸಂಸ್ಥೆಗಳು ಮತ್ತು ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಯೋಧರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ನಮನಗಳನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿರಾಜಪೇಟೆ: ಕಾರ್ಗಿಲ್ ವಿಜಯೋತ್ಸವ ಆಚರಣೆಯ ಮೂಲಕ ವೀರಗತಿ ಪ್ರಾಪ್ತಿಯಾದ ಯೋಧರ ಸ್ಮರಣೆಯು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ನಿವೃತ್ತ ಮೇಜರ್ ಜನರಲ್. ಬಿ.ಎ.ಕಾರ್ಯಪ್ಪ ಅವರು ಅಭಿಪ್ರಾಯಪಟ್ಟರು.</p>.<p>ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆ ವತಿಯಿಂದ ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಯೋಧರ ಸ್ಮಾರಕ ಬಳಿ ಶುಕ್ರವಾರ ನಡೆದ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>ಭಾರತೀಯ ಸೇನೆಯ ಅಪ್ರತಿಮ ಹೋರಾಟ ಮತ್ತು ಪಾಕಿಸ್ತಾನ ಸೇನೆಗೆ ದಿಟ್ಟ ಉತ್ತರ ನೀಡಿದ ಯೋಧರ ಸಾಹಸ ಮತ್ತು ತ್ಯಾಗ ಬಲಿದಾನಗಳನ್ನು ಎಂದಿಗೂ ಸ್ಮರಿಸಬೇಕು ಎಂದು ಅವರು ಹೇಳಿದರು.</p>.<p>ಪ್ರಸ್ತಾವಿಕ ಭಾಷಣ ಮಾಡಿದ ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆಯ ಅಧ್ಯಕ್ಷ ಚಪ್ಪಂಡ ಹರೀಶ್ ಅವರು ‘ಸಂಘವು ಕಾರ್ಗಿಲ್ ಯುದ್ದದಲ್ಲಿ ವೀರ ಮರಣಹೊಂದಿದ್ದ ಸೈನಿಕರನ್ನು ನೆನಪಿಸಲು ಪ್ರತಿವರ್ಷ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ಸಂಘದೊಂದಿಗೆ ಹಲವಾರು ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿರುವುದು ಭಾರತೀಯ ಸೇನೆ ಮತ್ತು ಯೋಧರ ಮೇಲಿರುವ ಅಭಿಮಾನವನ್ನು ಎತ್ತಿ ತೋರಿಸುತ್ತದೆ’ ಎಂದು ಹೇಳಿದರು.</p>.<p>ವಿರಾಜಪೇಟೆ ನಗರ ಠಾಣೆಯ ಠಾಣಾಧಿಕಾರಿಗಳಾದ ರವೀಂದ್ರ ಮಾತನಾಡಿ, ‘ಸ್ವತಂತ್ರದ ಬಳಿಕ ಹಲವು ಬಾರಿ ಪಾಕಿಸ್ತಾನ ಭಾರತದ ಮೇಲೆ ಆಕ್ರಮಣಗಳನ್ನು ಮಾಡಿದೆ. ಆದರೆ, ಭಾರತೀಯ ಸೇನೆಯ ದಿಟ್ಟ ಉತ್ತರದಿಂದಾಗಿ ಭಾರತವು ಸುರಕ್ಷಿತವಾಗಿದೆ. ಕಾರ್ಗಿಲ್ ಹೋರಾಟದಲ್ಲಿ ವೀರ ಮರಣ ಹೊಂದಿದ ಸೈನಿಕರನ್ನು ಎಂದಿಗೂ ಸ್ಮರಿಸುವಂತಾಗಬೇಕು’ ಎಂದು ಹೇಳಿದರು.</p>.<p>ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆಯ ಸದಸ್ಯ ಸಂಶು ಅವರು ಕಾರ್ಗಿಲ್ ಹೋರಾಟ ಮತ್ತು ಸೈನಿಕರ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡಿದರು.</p>.<p>ಕಾರ್ಯಕ್ರಮದ ಮೊದಲಿಗೆ ನಗರದ ವಿವಿಧ ಶಾಲೆಗಳು ಸ್ಕೌಟ್ಸ್ ಗೈಡ್ಸ್, ಎನ್.ಸಿ.ಸಿ, ವಿವಿಧ ಸಂಘ ಸಂಸ್ಥೆಗಳ ಪಧಾಧಿಕಾರಿಗಳ ಮೆರವಣಿಗೆ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ದಂಡಾಧಿಕಾರಿಗಳಾದ ರಾಮಚಂದ್ರ, ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿಗಳಾದ ಎ.ಚಂದ್ರಕುಮಾರ್, ಎಸ್.ಬಿ.ಐ. ವಿರಾಜಪೇಟೆ ಶಾಖೆಯ ವ್ಯವಸ್ಥಾಪಕರು, ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವಿರಾಜಪೇಟೆ ಪದಾಧಿಕಾರಿಗಳು, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಕೊಡವ ಸಮಾಜ, ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ, ಸಂಘ ಸಂಸ್ಥೆಗಳು ಮತ್ತು ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಯೋಧರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ನಮನಗಳನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>