<p><strong>ಕುಶಾಲನಗರ</strong>: ಮನುಷ್ಯನ ನೋವು - ನಲಿವು, ದುಃಖ - ದುಮ್ಮಾನಗಳು ಹಾಗೂ ಆತನ ನಾಶಕ್ಕೆ ಆಸೆಗಳೇ ಕಾರಣ ಎಂದು ಇಲ್ಲಿನ ಮಹಾತ್ಮಗಾಂಧಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ಬಿ.ಲಿಂಗಮೂರ್ತಿ ಹೇಳಿದರು.</p>.<p>ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಸುತ್ತೂರು ಜಗದ್ಗುರು ಗುರುಚನ್ನಬಸವ ಶಿವಾಚಾರ್ಯರ ದತ್ತಿ ಕಾರ್ಯಕ್ರಮ ಶರಣ ಸಂಸ್ಕೃತಿ ಪ್ರಸಾರ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಸವಾದಿ ಶರಣರು ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ ನಡೆ ನುಡಿಗಳೆರಡು ಒಂದಾಗಿಸಿಕೊಂಡ ಎಲ್ಲಾ ಜಾತಿ ಸಮುದಾಯಗಳ ವಚನಕಾರರನ್ನು ಸೇರಿಸಿ ನಾಡಿಗೆ ಸಾರಿದ ಸಂದೇಶಗಳನ್ನು ನಾವು ಪಾಲಿಸಿದ್ದೇ ಆದಲ್ಲಿ, ಜನಹಿತ ಹಾಗೂ ಲೋಕಹಿತ ಅಗ್ರಪಂಕ್ತಿಯಲ್ಲಿರುತ್ತದೆ ಎಂದು ಹೇಳಿದರು.</p>.<p>ಸಾಹಿತಿ ಲೀಲಾಕುಮಾರಿ ತೊಡಿಕಾನ ಮಾತನಾಡಿ, ಮನುಷ್ಯನ ದೇಹವೆಂಬ ಬಂಡಿಯನ್ನು ಓಡಿಸುವ ಪಂಚೇಂದ್ರಿಯಗಳನ್ನು ನಿಗ್ರಹಿಸುವ ಅಥವಾ ಸ್ವಯಂ ನಿಯಂತ್ರಿಸುವ ಶಕ್ತಿ ಮನುಷ್ಯನಿಗಿದ್ದರೆ ಆತನಿಗೆ ನೋವು, ಸಂಕಟಗಳೇ ಇರುವುದಿಲ್ಲ. ಇವನಾರವ ಎನ್ನದೇ ಇವ ನಮ್ಮವನೆಂಬ ಅಭಿಮಾನವನ್ನು ಸರ್ವರೂ ಮನಗಾಣಬೇಕು ಎಂದರು.</p>.<p>ಇಂದಿನ ಮಕ್ಕಳು ಬಸವಣ್ಣನವರ ಕಲಬೇಡ ಕೊಲಬೇಡ ಎಂಬ ಒಂದೇ ಒಂದು ವಚನದ ಸಾರವನ್ನರಿತು ಅದರಂತೆ ನಡೆದಲ್ಲಿ ಮನುಷ್ಯನ ಬದುಕು ಸ್ವರ್ಗವಾಗುತ್ತದೆ ಎಂದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀದೇವಿ ಮಾತನಾಡಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಬಿ.ನಟರಾಜು, ಪ್ರಗತಿ ಪರ ಕೃಷಿಕ ಸತ್ಯ, ಶಾಲೆಯ ಸಂಗೀತ ಶಿಕ್ಷಕ ಪುಟ್ಟರಾಜು ಅಕ್ಕಮಹಾದೇವಿಯ ವಚನವನ್ನು ಸುಶ್ರಾವ್ಯವಾಗಿ ಹಾಡಿದರು. ಕನ್ನಡ ಶಿಕ್ಷಕ ಕೆ.ಆರ್.ರಮೇಶ್ ನಿರೂಪಿಸಿದರು. ಗಿರೀಶ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಮನುಷ್ಯನ ನೋವು - ನಲಿವು, ದುಃಖ - ದುಮ್ಮಾನಗಳು ಹಾಗೂ ಆತನ ನಾಶಕ್ಕೆ ಆಸೆಗಳೇ ಕಾರಣ ಎಂದು ಇಲ್ಲಿನ ಮಹಾತ್ಮಗಾಂಧಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ಬಿ.ಲಿಂಗಮೂರ್ತಿ ಹೇಳಿದರು.</p>.<p>ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಸುತ್ತೂರು ಜಗದ್ಗುರು ಗುರುಚನ್ನಬಸವ ಶಿವಾಚಾರ್ಯರ ದತ್ತಿ ಕಾರ್ಯಕ್ರಮ ಶರಣ ಸಂಸ್ಕೃತಿ ಪ್ರಸಾರ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಸವಾದಿ ಶರಣರು ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ ನಡೆ ನುಡಿಗಳೆರಡು ಒಂದಾಗಿಸಿಕೊಂಡ ಎಲ್ಲಾ ಜಾತಿ ಸಮುದಾಯಗಳ ವಚನಕಾರರನ್ನು ಸೇರಿಸಿ ನಾಡಿಗೆ ಸಾರಿದ ಸಂದೇಶಗಳನ್ನು ನಾವು ಪಾಲಿಸಿದ್ದೇ ಆದಲ್ಲಿ, ಜನಹಿತ ಹಾಗೂ ಲೋಕಹಿತ ಅಗ್ರಪಂಕ್ತಿಯಲ್ಲಿರುತ್ತದೆ ಎಂದು ಹೇಳಿದರು.</p>.<p>ಸಾಹಿತಿ ಲೀಲಾಕುಮಾರಿ ತೊಡಿಕಾನ ಮಾತನಾಡಿ, ಮನುಷ್ಯನ ದೇಹವೆಂಬ ಬಂಡಿಯನ್ನು ಓಡಿಸುವ ಪಂಚೇಂದ್ರಿಯಗಳನ್ನು ನಿಗ್ರಹಿಸುವ ಅಥವಾ ಸ್ವಯಂ ನಿಯಂತ್ರಿಸುವ ಶಕ್ತಿ ಮನುಷ್ಯನಿಗಿದ್ದರೆ ಆತನಿಗೆ ನೋವು, ಸಂಕಟಗಳೇ ಇರುವುದಿಲ್ಲ. ಇವನಾರವ ಎನ್ನದೇ ಇವ ನಮ್ಮವನೆಂಬ ಅಭಿಮಾನವನ್ನು ಸರ್ವರೂ ಮನಗಾಣಬೇಕು ಎಂದರು.</p>.<p>ಇಂದಿನ ಮಕ್ಕಳು ಬಸವಣ್ಣನವರ ಕಲಬೇಡ ಕೊಲಬೇಡ ಎಂಬ ಒಂದೇ ಒಂದು ವಚನದ ಸಾರವನ್ನರಿತು ಅದರಂತೆ ನಡೆದಲ್ಲಿ ಮನುಷ್ಯನ ಬದುಕು ಸ್ವರ್ಗವಾಗುತ್ತದೆ ಎಂದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀದೇವಿ ಮಾತನಾಡಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಬಿ.ನಟರಾಜು, ಪ್ರಗತಿ ಪರ ಕೃಷಿಕ ಸತ್ಯ, ಶಾಲೆಯ ಸಂಗೀತ ಶಿಕ್ಷಕ ಪುಟ್ಟರಾಜು ಅಕ್ಕಮಹಾದೇವಿಯ ವಚನವನ್ನು ಸುಶ್ರಾವ್ಯವಾಗಿ ಹಾಡಿದರು. ಕನ್ನಡ ಶಿಕ್ಷಕ ಕೆ.ಆರ್.ರಮೇಶ್ ನಿರೂಪಿಸಿದರು. ಗಿರೀಶ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>