ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಸ್ತೆಗುಂಡಿಗಳನ್ನು ಮುಚ್ಚಲು ಹಣ ತೆಗೆದಿರಿಸಲಾಗಿದೆ. ಆದರೆ, ಮಳೆ ಬಿಡುವು ನೀಡುತ್ತಿಲ್ಲ. ಒಂದು ವೇಳೆ ಮಳೆ ಇರುವ ಇಂತಹ ಸಮಯದಲ್ಲಿ ಮುಚ್ಚಿದರೆ ಬಹುಬೇಗನೇ ಕೊಚ್ಚಿಕೊಂಡು ಹೋಗುತ್ತದೆ. ಹಾಗಾಗಿ, ಮಳೆ ನಿಂತು ಬಿಸಿಲು ಬರುವುದನ್ನೇ ಕಾಯುತ್ತಿದ್ದೇವೆ’ ಎಂದು ಹೇಳಿದರು.