<p><strong>ಕುಶಾಲನಗರ:</strong> ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಸಲಹೆ ನೀಡಿದರು.</p>.<p>ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನಾ ಫಲಾನುಭವಿಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನೋಡುವ ಪ್ರವೃತ್ತಿ ಬಿಟ್ಟು, <br> ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸಲು ಮುಂದಾಗಬೇಕು ಎಂದರು.</p>.<p>ಅಧಿಕಾರಿಗಳು ಸಭೆಗೆ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಒದಗಿಸಿದ್ದು, ಇದರನ್ವಯ ಮುಂದಿನ ದಿನಗಳಲ್ಲಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಯೋಜನೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.</p>.<p>ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯನ್ನು ಮಂಡಿಸಿದರು. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಯುವ ನಿಧಿಯ ಸೌಲಭ್ಯಗಳ ಬಗ್ಗೆ ಮತ್ತು ನೋಂದಣಿಯಾದ ಫಲಾನುಭವಿಗಳ ಮಾಹಿತಿಯನ್ನು ಸಭೆಗೆ ಒದಗಿಸಿದರು.</p>.<p>ನಂತರ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಅನ್ನ ಭಾಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಕುಶಾಲನಗರ ತಾಲ್ಲೂಕು ಮಟ್ಟದ ಅಂಕಿ ಅಂಶಗಳ ವರದಿ, ಯೋಜನಾ ಸವಲತ್ತುಗಳ ಫಲಾನುಭವಿಗಳ ಮಾಹಿತಿಯನ್ನು ಸಭೆಗೆ ಸಮಗ್ರವಾಗಿ ಒದಗಿಸಿದರು. ಈಗಾಗಲೇ ಶೇ93ರಷ್ಟು ಮಂದಿಗೆ ಯೋಜನೆ ಲಾಭ ಸಿಕ್ಕಿದ್ದು, ತಾಂತ್ರಿಕ ಸಮಸ್ಯೆಯಿಂದ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳಿಗೆ ಹಂತ ಹಂತವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಬಿಮ್ಮಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೀರಣ್ಣ, ಜಿಲ್ಲಾ ಸಮಿತಿಯ ಸದಸ್ಯ ಅಣ್ಣಯ್ಯ, ತಾಲ್ಲೂಕು ಸಮಿತಿಯ ಸದಸ್ಯರಾದ ಅಬ್ದುಲ್ ರಜಾಕ್, ಶ್ರೀನಿವಾಸ್, ಕಿಶೋರ್, ಅದಂ ರೋಶನ್, ಮಲ್ಲಿಕಾರ್ಜುನ, ಶ್ರೀನಿವಾಸ್, ಕೃಷ್ಣೇಗೌಡ, ರಫೀಕ್ ಖಾನ್, ರಾಜಶೇಖರ, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ. ಮಂಜಳಾ, ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ, ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ಡಿಪೊ ವ್ಯವಸ್ಥಾಪಕ ಎಂ.ಎಂ. ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಸಲಹೆ ನೀಡಿದರು.</p>.<p>ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನಾ ಫಲಾನುಭವಿಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನೋಡುವ ಪ್ರವೃತ್ತಿ ಬಿಟ್ಟು, <br> ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸಲು ಮುಂದಾಗಬೇಕು ಎಂದರು.</p>.<p>ಅಧಿಕಾರಿಗಳು ಸಭೆಗೆ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಒದಗಿಸಿದ್ದು, ಇದರನ್ವಯ ಮುಂದಿನ ದಿನಗಳಲ್ಲಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಯೋಜನೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.</p>.<p>ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯನ್ನು ಮಂಡಿಸಿದರು. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಯುವ ನಿಧಿಯ ಸೌಲಭ್ಯಗಳ ಬಗ್ಗೆ ಮತ್ತು ನೋಂದಣಿಯಾದ ಫಲಾನುಭವಿಗಳ ಮಾಹಿತಿಯನ್ನು ಸಭೆಗೆ ಒದಗಿಸಿದರು.</p>.<p>ನಂತರ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಅನ್ನ ಭಾಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಕುಶಾಲನಗರ ತಾಲ್ಲೂಕು ಮಟ್ಟದ ಅಂಕಿ ಅಂಶಗಳ ವರದಿ, ಯೋಜನಾ ಸವಲತ್ತುಗಳ ಫಲಾನುಭವಿಗಳ ಮಾಹಿತಿಯನ್ನು ಸಭೆಗೆ ಸಮಗ್ರವಾಗಿ ಒದಗಿಸಿದರು. ಈಗಾಗಲೇ ಶೇ93ರಷ್ಟು ಮಂದಿಗೆ ಯೋಜನೆ ಲಾಭ ಸಿಕ್ಕಿದ್ದು, ತಾಂತ್ರಿಕ ಸಮಸ್ಯೆಯಿಂದ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳಿಗೆ ಹಂತ ಹಂತವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಬಿಮ್ಮಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೀರಣ್ಣ, ಜಿಲ್ಲಾ ಸಮಿತಿಯ ಸದಸ್ಯ ಅಣ್ಣಯ್ಯ, ತಾಲ್ಲೂಕು ಸಮಿತಿಯ ಸದಸ್ಯರಾದ ಅಬ್ದುಲ್ ರಜಾಕ್, ಶ್ರೀನಿವಾಸ್, ಕಿಶೋರ್, ಅದಂ ರೋಶನ್, ಮಲ್ಲಿಕಾರ್ಜುನ, ಶ್ರೀನಿವಾಸ್, ಕೃಷ್ಣೇಗೌಡ, ರಫೀಕ್ ಖಾನ್, ರಾಜಶೇಖರ, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ. ಮಂಜಳಾ, ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ, ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ಡಿಪೊ ವ್ಯವಸ್ಥಾಪಕ ಎಂ.ಎಂ. ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>