ಮಡಿಕೇರಿ: ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡುರಾವ್ ಅವರು ಜೂನ್ 24ರಂದು ಬೆಳಿಗ್ಗೆ 11 ಗಂಟೆಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 12.10ಕ್ಕೆ ಹೆಬ್ಬಾಲೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ, 1.30ಕ್ಕೆ ಶಾಸಕ ಡಾ.ಮಂತರ್ಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, 3 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಂತರ, 4 ಗಂಟೆಗೆ ಸೋಮವೇಶ್ವರ ದೇಗುಲಕ್ಕೆ ಭೇಟಿ ನೀಡಿ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.