ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ ರಸ್ತೆ ನಿವಾಸಿ ಸಿ.ಜಿ.ಸುರೇಶ್ ಅವರಿಗೆ ಸೇರಿದ ಗಬ್ಬದ ಹಸು ಭಾನುವಾರ ಮಧ್ಯಾಹ್ನ ಮೇಯುತ್ತಿದ್ದ ಸಂದರ್ಭ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಆಘಾತಕ್ಕೆ ಒಳಗಾಗಿ ಸಾವನ್ನಪ್ಪಿದೆ.
ಅತ್ತೂರು ಗ್ರಾಮದ ನಿವಾಸಿ ಜನಾರ್ದನ ಅವರ ವಾಸದ ಮನೆಯ ಚಾವಣಿ ಹಾಗೂ ಗೋಡೆ ಹಾನಿಯಾಗಿದೆ
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಹಾಗೂ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಭಾನುವಾರ ಮಳೆಯಿಂದ ವಿದ್ಯುತ್ ಕಂಬಗಳು ಮುರಿದು ಬಿದ್ದ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.