ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಪ್ಪೇ ಮಾಡದಿದ್ದರೆ ಜೈಲಿಗೆ ಕಳುಹಿಸುವುದು ಹೇಗೆ?: ಚಲುವರಾಯಸ್ವಾಮಿ

Published : 6 ಅಕ್ಟೋಬರ್ 2024, 14:06 IST
Last Updated : 6 ಅಕ್ಟೋಬರ್ 2024, 14:06 IST
ಫಾಲೋ ಮಾಡಿ
Comments

ಮಡಿಕೇರಿ: ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬೇರೆಯವರನ್ನು ಜೈಲಿಗೆ ಕಳುಹಿಸಲು ಸಂಚು ಮಾಡುತ್ತಿದ್ದರು. ಆದರೆ, ಈಗ ಅವರೇ ಆ ಸುಳಿಗೆ ಸಿಲುಕಿಕೊಳ್ಳುತ್ತಿದ್ದಾರೋ ಏನೋ ಗೊತ್ತಿಲ್ಲ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಈ ಸರ್ಕಾರ ನನ್ನನ್ನು ಜೈಲಿಗೆ ಕಳುಹಿಸಲು ಸಂಚು ರೂಪಿಸುತ್ತಿದೆ ಎಂದು ಒಂದೆಡೆ ಆರೋಪಿಸುತ್ತಾರೆ. ಮತ್ತೊಂದೆಡೆ ಯಾವುದೇ ತಪ್ಪನ್ನೂ ನಾನು ಮಾಡಿಲ್ಲ ಎನ್ನುತ್ತಾರೆ.  ತಪ್ಪು ಮಾಡಿಲ್ಲದವರನ್ನು ಜೈಲಿಗೆ ಕಳುಹಿಸುವುದಾದರೂ ಹೇಗೆ?’ ಎಂದರು.

‘ಕೊಡಗಿನ ಭಾಗಮಂಡಲದಲ್ಲೂ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿಯನ್ನು ಯಾವುದಾದರೂ ಸಂದರ್ಭದಲ್ಲಿ ಸಾಂಕೇತಿಕವಾಗಿ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT