<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಬಹುಭಾಗದಲ್ಲಿ ಬುಧವಾರ ರಾತ್ರಿ ಆರಂಭವಾಗಿರುವ ಮಳೆ ಗುರುವಾರ ಮಧ್ಯಾಹ್ನವಾದರೂ ನಿಂತಿಲ್ಲ. ತೀವ್ರ ಸ್ವರೂಪ ಪಡೆದ ಮಳೆಯಿಂದ ಅಲ್ಲಲ್ಲಿ ಹಾನಿ ಆರಂಭವಾಗಿವೆ. ಮಣ್ಣು ಕುಸಿತಗಳು ಶುರುವಾಗಿವೆ.</p><p>ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿಯ ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾತ್ರಿ ಅತ್ಯಂತ ಭಾರಿ ಮಳೆ ಸುರಿದಿದೆ. ಇದರಿಂದ ಮದೆ ಗ್ರಾಮದ ಮನೋಹರಿ ಎಂಬುವರ ಮನೆ ಬಳಿ ಮಣ್ಣು ಕುಸಿದಿದೆ.</p><p>ಕಗ್ಗೊಡ್ಲು ಬಿಳಿಗೇರಿ ರಸ್ತೆಯಲ್ಲಿ ಬಾಯಂಡಾ ಮನೆ ಹತ್ತಿರ ಸೇತುವೆಯ ಒಂದು ಬದಿ ಮಣ್ಣು ಕುಸಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಬದಲಿ ರಸ್ತೆಯಾಗಿ ಮೇಕೇರಿ ಬಿಳಿಗಿರಿ ರಸ್ತೆ ಇದೆ.</p><p>ಶನಿವಾರಸಂತೆ ಹೋಬಳಿಯ ಆಲೂರು ಸಿದ್ದಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಳ್ಳಿ ಗ್ರಾಮದಲ್ಲಿ ರಸ್ತೆಯ ಎರಡು ಭಾಗದಲ್ಲಿ ಮಣ್ಣು ಕುಸಿದಿದ್ದು, ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.</p><p>ಸೋಮವಾರಪೇಟೆ ಹೋಬಳಿಯ ದೊಡ್ಡಬೂರು ಗ್ರಾಮದ ಗೌರಿ ರಾಜು ಅವರ ವಾಸದ ಮನೆಯ ಗೋಡೆ ಕುಸಿದಿದೆ.</p><p> ತಾಲೂಕಿನ ಬಿಳಕಿಕೊಪ್ಪ ಗ್ರಾಮದ ಸರಸ್ವತಿ ಅವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯ ಬಹುಭಾಗದಲ್ಲಿ ಬುಧವಾರ ರಾತ್ರಿ ಆರಂಭವಾಗಿರುವ ಮಳೆ ಗುರುವಾರ ಮಧ್ಯಾಹ್ನವಾದರೂ ನಿಂತಿಲ್ಲ. ತೀವ್ರ ಸ್ವರೂಪ ಪಡೆದ ಮಳೆಯಿಂದ ಅಲ್ಲಲ್ಲಿ ಹಾನಿ ಆರಂಭವಾಗಿವೆ. ಮಣ್ಣು ಕುಸಿತಗಳು ಶುರುವಾಗಿವೆ.</p><p>ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿಯ ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾತ್ರಿ ಅತ್ಯಂತ ಭಾರಿ ಮಳೆ ಸುರಿದಿದೆ. ಇದರಿಂದ ಮದೆ ಗ್ರಾಮದ ಮನೋಹರಿ ಎಂಬುವರ ಮನೆ ಬಳಿ ಮಣ್ಣು ಕುಸಿದಿದೆ.</p><p>ಕಗ್ಗೊಡ್ಲು ಬಿಳಿಗೇರಿ ರಸ್ತೆಯಲ್ಲಿ ಬಾಯಂಡಾ ಮನೆ ಹತ್ತಿರ ಸೇತುವೆಯ ಒಂದು ಬದಿ ಮಣ್ಣು ಕುಸಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಬದಲಿ ರಸ್ತೆಯಾಗಿ ಮೇಕೇರಿ ಬಿಳಿಗಿರಿ ರಸ್ತೆ ಇದೆ.</p><p>ಶನಿವಾರಸಂತೆ ಹೋಬಳಿಯ ಆಲೂರು ಸಿದ್ದಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಳ್ಳಿ ಗ್ರಾಮದಲ್ಲಿ ರಸ್ತೆಯ ಎರಡು ಭಾಗದಲ್ಲಿ ಮಣ್ಣು ಕುಸಿದಿದ್ದು, ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.</p><p>ಸೋಮವಾರಪೇಟೆ ಹೋಬಳಿಯ ದೊಡ್ಡಬೂರು ಗ್ರಾಮದ ಗೌರಿ ರಾಜು ಅವರ ವಾಸದ ಮನೆಯ ಗೋಡೆ ಕುಸಿದಿದೆ.</p><p> ತಾಲೂಕಿನ ಬಿಳಕಿಕೊಪ್ಪ ಗ್ರಾಮದ ಸರಸ್ವತಿ ಅವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>